Don't Miss!
- News ಕುಡುಕರಿಗೆ ಎಣ್ಣೆ ಸಿಗುತ್ತಿಲ್ಲ, ಪರದಾಟ ನೋಡಲು ಆಗುತ್ತಿಲ್ಲ!
- Sports DC vs GT IPL 2024: ಅಕ್ಷರ್, ಪಂತ್ ಭರ್ಜರಿ ಬ್ಯಾಟಿಂಗ್; ಗುಜರಾತ್ಗೆ ಸವಾಲಿನ ಗುರಿ ನೀಡಿದ ಡೆಲ್ಲಿ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಅಲ್ಲು ಅರ್ಜುನ್ ಗಾಗಿ ಮತ್ತೆ ತೆಲುಗಿಗೆ ಬಂದ ತಮಿಳು ಹಿಟ್ ನಿರ್ದೇಶಕ
ತಮಿಳಿನಲ್ಲಿ ವಾಸುದೇವ್ ಮೆನನ್ ಸಿನಿಮಾಗಳಿಗೆ ದೊಡ್ಡ ಅಭಿಮಾನಿ ವರ್ಗವೇ ಇದೆ. ನಿಜ ಜೀವನಕ್ಕೆ ಹೆಚ್ಚು ಹತ್ತಿರವಾದ ಕಮರ್ಶಿಯಲ್ ಮಾದರಿಯ ಸಿನಿಮಾಗಳಿಗೆ ಖ್ಯಾತರು ಗೌತಮ್ ವಾಸುದೇವ್ ಮೆನನ್.
ಈಗಾಗಲೇ ಹಲವಾರು ಸೂಪರ್ ಹಿಟ್ ಸಿನಿಮಾಗಳನ್ನು ನೀಡಿರುವ ಗೌತಮ್ ವಾಸುದೇವ್ ಮೆನನ್ ಅಲ್ಲು ಅರ್ಜುನ್ ಜೊತೆ ಸಿನಿಮಾ ಮಾಡುವ ಉಮೇದಿನಲ್ಲಿದ್ದಾರೆ.
ಚಿಯಾನ್ ವಿಕ್ರಂ ನಟನೆಯ 'ಧ್ರುವ ನಚ್ಚತ್ತಿರಮ್' ಸಿನಿಮಾವನ್ನು ನಿರ್ದೇಶನ ಮಾಡುತ್ತಿರುವ ಗೌತಮ್ ವಾಸುದೇವ್ ಮೆನನ್ ಆ ಸಿನಿಮಾದ ಬಳಿಕ ಅಲ್ಲು ಅರ್ಜುನ್ ಜೊತೆಗೆ ಸಿನಿಮಾ ಮಾಡಲಿದ್ದಾರೆ ಎನ್ನಲಾಗುತ್ತಿದೆ.
ಅಲ್ಲು ಅರ್ಜುನ್ ಪ್ರಸ್ತುತ 'ಪುಷ್ಪಾ' ಸಿನಿಮಾದ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ಈಗಾಗಲೇ ವಾಸುದೇವ್ ಮೆನನ್ ಅಲ್ಲು ಅರ್ಜುನ್ಗೆ ಕತೆ ಹೇಳಿದ್ದಾರೆ ಎನ್ನಲಾಗುತ್ತಿದ್ದು, ಕೆಲವೇ ದಿನಗಳಲ್ಲಿ ಅಧಿಕೃತವಾಗಿ ಸಿನಿಮಾ ಘೋಷಿಸುವ ಸಾಧ್ಯತೆ ಇದೆ. ಅಲ್ಲು ಅರ್ಜುನ್ ಹುಟ್ಟುಹಬ್ಬಕ್ಕೆ ಸಿನಿಮಾ ಸೆಟ್ಟೇರಲಿದೆ ಎಂಬ ಸುದ್ದಿಯೂ ಇದೆ.
ತಮಿಳುನಾಡಿನಲ್ಲಿ ಅಲ್ಲು ಅರ್ಜುನ್ಗೆ ಹಲವಾರು ಮಂದಿ ಅಭಿಮಾನಿಗಳಿದ್ದು, ಗೌತಮ್ ಮೆನನ್ ನಿರ್ದೇಶಿಸಲಿರುವ ಸಿನಿಮಾ ಒಟ್ಟಿಗೆ ತೆಲುಗು-ತಮಿಳು ಭಾಷೆಗಳಲ್ಲಿ ತಯಾರಾಗಲಿದೆ. ಗೌತಮ್ ಅವರ ಹಲವು ಸಿನಿಮಾಗಳು ಹೀಗೆ ಒಟ್ಟಿಗೆ ತೆಲುಗು-ತಮಿಳು ಭಾಷೆಗಳಲ್ಲಿ ನಿರ್ಮಾಣಗೊಂಡಿವೆ.
Recommended Video
ವರ್ನಂ ಆಯರಂ, ಏ ಮಾಯ ಚೇಸಾವೆ, ಕಾಕ-ಕಾಖ, ಘರ್ಷಣ, ರೆಹನಾ ಹೈ ತೆರೆ ದಿಲ್ ಮೇ, ವೇಟ್ಟೆಯಾಡು-ವಿಲೆಯಾಡು, ವಿನ್ನೈತಾಂಡಿ ವರುವಾಯ ಇನ್ನೂ ಹಲವು ಹಿಟ್ ಸಿನಿಮಾಗಳನ್ನು ನೀಡಿದ್ದಾರೆ ಗೌತಮ್ ಮೆನನ್. ಅವರು ನಟನಾಗಿಯು ಇತ್ತೀಚೆಗೆ ಸಾಕಷ್ಟು ಯಶಸ್ಸು ಗಳಿಸಿದ್ದಾರೆ.