Don't Miss!
- News ಷೇರು ಮಾರುಕಟ್ಟೆಯಲ್ಲಿ ಮಹಾ ಕುಸಿತ & ಏರಿಕೆ!
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Lifestyle ನೀವು ಸಹ ಈ ಶರ್ಬತ್ನ ರುಚಿ ಸವಿದಿದ್ದೀರಾ..? ಮರೆಯಾಯ್ತು ಈ ಹಳೆಯ ನೆನಪು
- Sports LSG vs CSK IPL 2024: ಲಕ್ನೋ vs ಚೆನ್ನೈ ಮಹಾಕದನ; ಟಾಸ್ ವರದಿ, ಆಡುವ 11ರ ಬಳಗ
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ತೆಲುಗಿನ ಹಿರಿಯ ನಟ ಗೊಲ್ಲಪುಡಿ ಮಾರುತಿ ರಾವ್ ನಿಧನ
ತೆಲುಗಿನ ಖ್ಯಾತ ನಟ, ಬರಹಗಾರ ಗೊಲ್ಲಪುಡಿ ಮಾರುತಿ ರಾವ್ (80) ಅವರು ಗುರವಾರ ಚೆನ್ನೈನ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಟಿ ನಗರದ ಲೈಫ್ ಲೈನ್ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದ ಗೊಲ್ಲಪುಡಿ ಮಾರುತಿ ಅವರು ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.
ಗೊಲ್ಲಪುಡಿ ಅವರು 1939ರಲ್ಲಿ ಅಂದಿನ ಮದ್ರಾಸ್ ರಾಜ್ಯದಲ್ಲಿ ಜನಿಸಿದ್ದರು. ಈಗ ಅದು ಆಂಧ್ರಪ್ರದೇಶಕ್ಕೆ ಸೇರಿದೆ. ಮಾರುತಿ ರಾವ್ ಅವರು ಬರಿ ನಟರಾಗಿ ಮಾತ್ರವಲ್ಲದೇ ಅದ್ಭುತ ಬರಹಗಾರನಾಗಿ ಮೋಡಿ ಮಾಡಿದ್ದರು.
ಹಿರಿಯ ನಟ ಉದಯ್ ಕುಮಾರ್ ಪತ್ನಿ ಕಮಲಮ್ಮ ನಿಧನ
ಗೊಲ್ಲಪುಡಿ ಮಾರುತಿ ರಾವ್ ಅವರು 1982ರಲ್ಲಿ ಮೆಗಾಸ್ಟಾರ್ ಚಿರಂಜೀವಿ ಮತ್ತು ಮಾಧವಿ ನಟನೆಯ 'ಇಂಟಿಲೋ ರಾಮಯ್ಯ ವಿದೀಲೋ ಕೃಷ್ಣಯ್ಯ' ಚಿತ್ರದ ಮೂಲಕ ತೆಲುಗು ಇಂಡಸ್ಟ್ರಿಯಲ್ಲಿ ಜರ್ನಿ ಆರಂಭಿಸಿದ್ದರು. ಈ ಚಿತ್ರಕ್ಕೆ ಸಂಭಾಷಣೆ ಕೂಡ ಬರೆದಿದ್ದರು.
'ಪುದುಪೇಟೈ' ಖ್ಯಾತಿಯ ನಟ ಬಾಲಸಿಂಗ್ ನಿಧನ
ಇಲ್ಲಿಯವರೆಗೂ ಸುಮಾರು 250ಕ್ಕೂ ಅಧಿಕ ಚಿತ್ರಗಳಲ್ಲಿ ಗೊಲ್ಲಪುಡಿ ಮಾರುತಿ ರಾವ್ ನಟಿಸಿದ್ದಾರೆ. ಹಲವು ಪುಸ್ತಕ, ಕಾದಂಬರಿಗಳನ್ನು ಕೂಡ ರಚಿಸಿದ್ದಾರೆ. ಆಲ್ ಇಂಡಿಯಾ ರೇಡಿಯೋ ಮುಖ್ಯಸ್ಥರಾಗಿ ಕೂಡ ಕೆಲಸ ಮಾಡಿದ್ದಾರೆ. ಸಾಹಿತ್ಯ ಕ್ಷೇತ್ರದ ಕೊಡುಗೆಗಾಗಿ ರಾಜ್ಯ ಪ್ರಶಸ್ತಿ ಪಡೆದುಕೊಂಡಿದ್ದಾರೆ. ಹಿರಿಯ ನಟನ ನಿಧನಕ್ಕೆ ಇಂಡಸ್ಟ್ರಿಯ ಹಲವು ಜನರು ಸಂತಾಪ ಸೂಚಿಸಿದ್ದಾರೆ.