Don't Miss!
- News ಬಿಎಂಟಿಸಿ & ನಮ್ಮ ಮೆಟ್ರೋ ಪ್ರಯಾಣಿಕರ ಸಂಖ್ಯೆಯಲ್ಲಿ ದಿಢೀರ್ ಹೆಚ್ಚಳಕ್ಕೆ ಕಾರಣ ಏನು?-ಇಲ್ಲಿದೆ ಮಾಹಿತಿ
- Automobiles ಭಾರತದಲ್ಲಿ 80 ಲಕ್ಷ ಸ್ಕೂಟರ್ ಮಾರಿದ ಜಪಾನ್ ಕಂಪನಿ: ವಿಶ್ವಗುರು ಭಾರತದಲ್ಲಿ ಎಲ್ಲವೂ ಸಾಧ್ಯ!
- Technology 6000mAh ಬ್ಯಾಟರಿಯ ಈ ಫೋನ್ ಶೀಘ್ರದಲ್ಲೇ ಖರೀದಿಗೆ ಲಭ್ಯ!..ಬೆಲೆ ಎಷ್ಟು?
- Sports ಧೋನಿ ಎದುರು ಬಂದಾಗ ಕೆ.ಎಲ್ ರಾಹುಲ್ ಕ್ಯಾಪ್ ತೆಗೆದಿದ್ದೇಕೆ?: ಕಾರಣವೇನು?
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
"ನನ್ನ ತಂದೆ ದೇವರ ಸ್ವರೂಪ.. ಅದಕ್ಕೆ ಅವರ ಬಯೋಪಿಕ್ನಲ್ಲಿ ನಟಿಸಲ್ಲ": ಮಹೇಶ್ ಬಾಬು
ಟಾಲಿವುಡ್ ಸೂಪರ್ಸ್ಟಾರ್ ಮಹೇಶ್ ಬಾಬು ಈ ವರ್ಷ ಯಾಕೋ ಸರಿಯಿಲ್ಲ. ಅವರ ಕುಟುಂಬದಲ್ಲಿ ಒಂದರ ಹಿಂದೊಂದು ದುರ್ಘಟನೆ ನಡೆಯುತ್ತಲೇ ಇದೆ. ಇವರ ಮಹೇಶ್ ಬಾಬು ತುಂಬಾನೇ ಇಷ್ಟ ಪಡುತ್ತಿದ್ದ ಮೂವರು ನಟರನ್ನು ಕಳೆದುಕೊಂಡು ದು:ಖದಲ್ಲಿದ್ದಾರೆ.
ಮಹೇಶ್ ಬಾಬುಗೆ ದೇವರ ಸ್ವರೂಪದಂತಿದ್ದ ತಂದೆಯನ್ನು ಕಳೆದುಕೊಂಡು ಅತೀವ ದು:ಖದಲ್ಲಿದ್ದಾರೆ. ಇದೇ ವೇಳೆ ಮಹೇಶ್ ಬಾಬು ಅವರ ತಂದೆಯ ಬಯೋಪಿಕ್ ಆಡಿದ ಮಾತುಗಳು ವೈರಲ್ ಆಗುತ್ತಿವೆ. ಈ ವಿಡಿಯೋ ಬಗ್ಗೆ ಈಗ ಚೆರ್ಚೆಯಾಗುತ್ತಿದೆ.
ಮಹೇಶ್ ಬಾಬು ತಂದೆ ಸೂಪರ್ ಸ್ಟಾರ್ ಕೃಷ್ಣ ನಿಧನ
'ತಂದೆ ಬಯೋಪಿಕ್ನಲ್ಲಿ ನಟಿಸಲ್ಲ'
ಮಹೇಶ್ ಬಾಬು ತಂದೆ ಟಾಲಿವುಡ್ನಲ್ಲಿ ಸೂಪರ್ಸ್ಟಾರ್ ಆಗಿ ಮೆರೆದವರು. ಅವರ ಜೀವಿತಾವಧಿಯಲ್ಲಿ ಸುಮಾರು 350ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿದ್ದಾರೆ. ತೆಲುಗು ಚಿತ್ರರಂಗದಲ್ಲಿ ಪ್ರಿನ್ಸ್ ತಂದೆ ಕೃಷ್ಣ ಹೀರೊ ಆಗಿ ಅಷ್ಟೇ ಅಲ್ಲದೆ, ನಿರ್ಮಾಪಕರಾಗಿ, ನಿರ್ದೇಶಕರಾಗಿಯೂ ಗೆದ್ದವರು. ಹೀಗಾಗಿ 'ಮೇಜರ್' ಸಿನಿಮಾದ ಪ್ರಮೋಷನ್ ವೇಳೆ ನಿಮ್ಮ ತಂದೆಯ ಬಯೋಪಿಕ್ನಲ್ಲಿ ನಟಿಸುತ್ತೀರಾ ಎಂದು ಪ್ರಶ್ನೆ ಮಾಡಲಾಗಿತ್ತು. ಈ ವೇಳೆ " ನನಗೆ ನನ್ನ ತಂದೆ ದೇವರ ಸ್ವರೂಪ. ಹಾಗಾಗಿ ಅವರ ಬಯೋಪಿಕ್ನಲ್ಲಿ ನಟಿಸುವುದಿಲ್ಲ. ಯಾರಾದರೂ ಸಿನಿಮಾ ಮಾಡಿದರೆ ನಾನು ಆ ಸಿನಿಮಾ ನೋಡುವ ಮೊದಲ ವ್ಯಕ್ತಿಯಾಗಿರುತ್ತೇನೆ. " ಎಂದು ಮಹೇಶ್ ಬಾಬು ಹೇಳಿದ್ದರು. ಆ ವಿಡಿಯೋ ಈಗ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.
ಕೃಷ್ಣ ಬದುಕು ಇಂಟ್ರೆಸ್ಟಿಂಗ್
ತೆಲುಗು ಚಿತ್ರರಂಗದ ಲೆಜೆಂಡ್ ಕೃಷ್ಣ ಅವರ ಬದುಕು ಸಖತ್ ಇಂಟ್ರೆಸ್ಟಿಂಗ್ ಆಗಿದೆ. ಬಯೋಪಿಕ್ನಲ್ಲಿ ಹೇಳಲು ಸಾಕಷ್ಟು ವಿಷಯಗಳಿವೆ ಎಂದು ಮಹೇಶ್ ಬಾಬು ಹೇಳಿದ್ದರು. ಸೂಪರ್ಸ್ಟಾರ್ ಕೃಷ್ಣ ತೆಲುಗು ಚಿತ್ರರಂಗಕ್ಕೆ ಹೊಸ ಮೆರುಗು ನೀಡಿದವರು. ಹೊಸ ತಂತ್ರಜ್ಞನವನ್ನು ಪರಿಚಯಿಸಿದವರು. ತೆಲುಗು ಅಷ್ಟೇ ಅಲ್ಲ. ಬಾಲಿವುಡ್ ಸಿನಿಮಾಗಳನ್ನೂ ನಿರ್ಮಾಣ ಮಾಡಿದ್ದರು. ಸಿನಿಮಾ ಅಷ್ಟೇ ಯಾಕೆ ರಾಜಕೀಯಕ್ಕೂ ಧುಮುಕ್ಕಿದ್ದವರು. ಹೀಗಾಗಿ ಅವರು ಬದುಕು ತೆರೆಮೇಲೆ ನೋಡಲು ಇಂಟ್ರೆಸ್ಟಿಂಗ್ ಆಗಿರುತ್ತೆ.
ಸೂಪರ್ಸ್ಟಾರ್ ಕೃಷ್ಣಗೆ ಕುಟುಂಬವೇ ಜಗತ್ತು!
ಟಾಲಿವುಡ್ ದಿಗ್ಗಜನ ಅಗಲಿಕೆ ಸಿನಿಮಾ ಕುಟುಂಬಕ್ಕೆ ನೋವನ್ನುಂಟು ಮಾಡಿದೆ. ಹೀಗಾಗಿ ಅವರ ಕುಟುಂಬ ಸಂದೇಶವನ್ನು ರವಾನೆ ಮಾಡಿತ್ತು. " ಕೃಷ್ಣ ಅವರ ಕೆಲಸದಲ್ಲಿ ಸದಾ ಜೀವಂತವಾಗಿರುತ್ತಾರೆ. ಪ್ರತಿ ದಿನ ಪ್ರತಿ ಕ್ಷಣವನ್ನು ಅವರನ್ನು ಮಿಸ್ ಮಾಡಿಕೊಳ್ಳುತ್ತೇವೆ. ಎಲ್ಲದಕ್ಕಿಂತ ಹೆಚ್ಚಾಗಿ ಅವರು ನಮ್ಮನ್ನು ಪ್ರೀತಿಸಿದ್ರು. ದಿನ ಕಳೆದಂತೆ ನಾವು ಕೂಡ ಅವರನ್ನು ಮತ್ತಷ್ಟು ಮಿಸ್ ಮಾಡಿಕೊಳ್ಳುತ್ತೇವೆ. ಆದರೆ ಅವರು ಹೇಳಿದಂತೆ ಮತ್ತೆ ನಾನು ಭೇಟಿಯಾಗುವವರೆಗೆ ಗುಡ್ಬೈ ಅನ್ನೋ ಯಾವಾಗಲೂ ಶಾಶ್ವತವಲ್ಲ." ಎಂದು ಅಭಿಮಾನಿಗಳಿಗೆ ಸಂದೇಶ ಕೊಟ್ಟಿದ್ದಾರೆ.
ಮೂವರು ಸದಸ್ಯರ ಅಗಲಿಕೆ
ಮಹೇಶ್ ಬಾಬು ಈ ವರ್ಷ ತಮ್ಮ ಕುಟುಂಬದ ಮೂವರು ಸದಸ್ಯರನ್ನು ಕಳೆದುಕೊಂಡಿದ್ದಾರೆ. ಮೊದಲು ಹಿರಿಯ ಸಹೋದರ ರಮೇಶ್ ಬಾಬು ಅನಾರೋಗ್ಯದಿಂದ ಕೊನೆಯುಸಿರೆಳೆದಿದ್ದರು. ಎರಡು ತಿಂಗಳ ಹಿಂದಷ್ಟೇ ತಾಯಿ ಇಂದಿರಾ ದೇವಿ ಅಗಲಿದ್ದರು. ಈಗ ತಂದೆ ಇಹಲೋಕ ತ್ಯಜಿಸಿದ್ದಾರೆ. ಮಹೇಶ್ ಬಾಬು ಈ ವರ್ಷದಲ್ಲಿ ತಾನು ಹೆಚ್ಚು ಪ್ರೀತಿಸುತ್ತಿದ್ದ ಮೂವರು ಸದಸ್ಯರನ್ನು ಕಳೆದುಕೊಂಡು ನೋವಿನಲ್ಲಿದ್ದಾರೆ.