Don't Miss!
- News ಮೈತ್ರಿ ಹೆಸರಿನಲ್ಲಿ ಬೆನ್ನಿಗೆ ಚೂರಿ ಹಾಕಿದರು; ಎಚ್.ಡಿ. ಕುಮಾರಸ್ವಾಮಿ ಆಕ್ರೋಶ
- Automobiles KTM Duke 125 ಬೆಲೆಗೆ ಯಾವೆಲ್ಲಾ ಬೈಕ್ಗಳು ಸಿಗುತ್ತೆ ಗೊತ್ತಾ?: ಪಲ್ಸರ್ನಿಂದ ಹಿಡಿದು MT 15 ವರೆಗೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Lifestyle ವಿಭಿನ್ನ ಶೈಲಿಯಲ್ಲಿ ಮೊಟ್ಟೆ ಸಾಂಬಾರ್ ಮಾಡಿ..! ಇಲ್ಲಿದೆ ಸಿಂಪಲ್ ಅಡುಗೆ
- Sports IPL 2024: ಕೆಕೆಆರ್ ವಿರುದ್ಧದ ಪಂದ್ಯಕ್ಕೂ ಮುನ್ನ ಕ್ರಿಕೆಟ್ ಬಿಟ್ಟು ಆರ್ಸಿಬಿ ಆಟಗಾರರು ಮಾಡಿದ್ದೇನು?
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಪುಷ್ಪ' ಸಿನಿಮಾಗೆ ವಿಲನ್ ಆಗಲು ಇಷ್ಟೊಂದು ಸಂಭಾವನೆ ಕೇಳಿದ್ರಾ ವಿಜಯ್ ಸೇತುಪತಿ?
ಟಾಲಿವುಡ್ ನಲ್ಲಿ ಸದ್ಯ ಟ್ರೆಂಡಿ ಟಾಪಿಕ್ ಅಲ್ಲು ಅರ್ಜುನ್ ಅಭಿನಯದ ಪುಷ್ಪ ಸಿನಿಮಾ. ಇತ್ತೀಚಿಗೆ ಅಲ್ಲು ಹುಟ್ಟುಹಬ್ಬದ ಪ್ರಯುಕ್ತ ರಿಲೀಸ್ ಆದ ಪೋಸ್ಟರ್ ಚಿತ್ರದ ಮೇಲಿನ ನಿರೀಕ್ಷೆಯನ್ನು ದುಪ್ಪಟ್ಟು ಮಾಡಿದೆ. ಸಿನಿಮಾ ಸೆಟ್ಟೇರಿದಾಗಿನಿಂದಲು ಒಂದಲ್ಲೊಂದು ವಿಚಾರದ ಮೂಲಕ ಸುದ್ದಿಯಲ್ಲಿರುವ ಪುಷ್ಪ ಈಗ ಮತ್ತೊಂದು ವಿಷಯ ಸದ್ದು ಮಾಡುತ್ತಿದೆ.
Recommended Video
ಅಲ್ಲು ವಿರುದ್ಧ ಹೋರಾಡಲು, ವಿಜಯ್ ಸೇತುಪತಿ ಸೇರಿದಂತೆ ಘಟಾನುಘಟಿ ವಿಲನ್ ಗಳು ಜೊತೆಯಾಗಿದ್ದಾರೆ. ಆದರೀಗ ವಿಜಯ್ ಸೇತುಪತಿ ಸಿನಿಮಾದಿಂದ ಹೊರ ನಡೆದಿದ್ದಾರೆ ಎನ್ನುವ ಸುದ್ದಿ ಕೇಳಿ ಬರುತ್ತಿರುವ ಬೆನ್ನಲ್ಲೆ ಈಗ ವಿಜಯ್ ಸಂಭಾವನೆ ವಿಚಾರವು ಸದ್ದು ಮಾಡುತ್ತಿದೆ. ಮುಂದೆ ಓದಿ...
ಪುಷ್ಪ ಸಿನಿಮಾಗೆ ವಿಜಯ್ ಕೇಳಿದ ಸಂಭಾವನೆ ಎಷ್ಟು?
ನಟ ವಿಜಯ್ ಸೇತುಪತಿ ಸಿನಿಮಾದಿಂದ ಹೊರಬರಲು ಸಂಭಾವನೆ ಕೂಡ ಕಾರಣವಾಯಿತಾ ಎನ್ನುವ ಮಾತುಗಳು ಕೇಳಿ ಬರುತ್ತಿದೆ. ಅಷ್ಟಕ್ಕೂ ವಿಜಯ್ ಕೇಳಿದ ಸಂಭಾವನೆ ಎಷ್ಟು ಗೊತ್ತಾ? ಅಲ್ಲು ವಿರುದ್ಧ ಹೋರಾಡಲು ವಿಜಯ್ 10 ಕೋಟಿ ಸಂಭಾವನೆ ಬೇಡಿಕೆ ಇಟ್ಟಿದ್ದಾರಂತೆ. ಇಷ್ಟು ಸಂಭಾವನೆ ಕೊಡಲು ಸಿನಿಮಾ ತಂಡ ಹಿಂದೇಟು ಹಾಕಿದ್ದಾರೆ ಎಂದು ಹೇಳಲಾಗುತ್ತಿದೆ.
ಅಭಿಮಾನಿಗಳಿಗಾಗಿ ಸಿನಿಮಾದಿಂದ ಹೊರಬಂದ್ರಾ ವಿಜಯ್?
ನಟ ವಿಜಯ್ ಸೇತುಪತಿ ಸಿನಿಮಾದಿಂದ ಹೊರಬರಲು ಕಾರಣ ಸಿನಿಮಾ ಬಹುಭಾಷೆಯಲ್ಲಿ ತಯಾರಾಗುತ್ತಿರುವುದು. ವಿಜಯ್ ಸೇತುಪತಿ ಸಿನಿಮಾಗೆ ಗ್ರೀನ್ ಸಿಗ್ನಲ್ ನೀಡುವ ವೇಳೆ ಚಿತ್ರ ತೆಲುಗಿನಲ್ಲಿ ಮಾತ್ರ ರಿಲೀಸ್ ಆಗಲಿದೆ ಎಂದು ಹೇಳಲಾಗಿತ್ತಂತೆ. ಹಾಗಾಗಿ ಸಿನಿಮಾ ಒಪ್ಪಿಕೊಂಡಿದ್ದ ವಿಜಯ್ ನಂತರ ಪ್ಯಾನ್ ಇಂಡಿಯಾ ಸಿನಿಮಾವಾಗಿ ರಿಲೀಸ್ ಆಗುತ್ತಿದೆ ಎಂದು ಗೊತ್ತಾದ ಮೇಲೆ ಸಿನಿಮಾದಿಂದ ಹೊರನಡೆದಿದ್ದಾರಂತೆ. ಅಲ್ಲದೆ ವಿಜಯ್ ಗೆ ತಮಿಳಿನಲ್ಲಿ ವಿಲನ್ ಆಗಿ ಕಾಣಿಸಿಕೊಳ್ಳಲು ಇಷ್ಟವಿಲ್ಲವಂತೆ. ತಮಿಳು ಅಭಿಮಾನಿಗಳಿಗಾಗಿ ವಿಜಯ್ ಪುಷ್ಪ ಸಿನಿಮಾದಿಂದ ಹೊರಬಂದಿದ್ದಾರೆ ಎಂದು ಹೇಳಲಾಗುತ್ತಿದೆ.
ವಿಜಯ್ ಜಾಗಕ್ಕೆ ಎಂಟ್ರಿಕೊಟ್ಟ ನಟ ಯಾರು?
ನಟ ವಿಜಯ್ ಸೇತುಪತಿ ಚಿತ್ರದಿಂದ ಹೊರನಡೆದ ಬಳಿಕ ಆ ಜಾಗಕ್ಕೆ ಕನ್ನಡದ ಖ್ಯಾತ ನಟ ಡಾಲಿ ಧನಂಜಯ್ ಕಾಣಿಸಿಕೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿದೆ. ಇನ್ನೂ ಕೆಲವು ಮಾಹಿತಿ ಪ್ರಕಾರ ನಟ ಬಾಬಿ ಸಿಂಹ ಕಾಣಿಸಿಕೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ ಈ ಬಗ್ಗೆ ಚಿತ್ರತಂಡ ಯಾವುದೆ ಮಾಹಿತಿ ಬಹಿರಂಗ ಪಡಿಸಿಲ್ಲ.
ಮಾಸ್ಟರ್ ರಿಲೀಸ್ ಗೆ ರೆಡಿಯಾಗಿದೆ
ವಿಜಯ್ ಸದ್ಯ ತಮಿಳಿನ ಮಾಸ್ಟರ್ ಸಿನಿಮಾ ರಿಲೀಸ್ ಗೆ ಎದುರು ನೋಡುತ್ತಿದ್ದಾರೆ. ದಳಪತಿ ವಿಜಯ್ ನಾಯಕನಾಗಿ ಕಾಣಿಸಿಕೊಂಡಿರುವ ಸಿನಿಮಾವಿದು. ಇನ್ನೂ ತಮಿಳು, ತೆಲುಗು ಮತ್ತು ಹಿಂದಿ ಸೇರಿದಂತೆ ವಿಜಯ್ ಸೇತುಪತಿ 10ಕ್ಕು ಹೆಚ್ಚು ಚಿತ್ರಗಳಲ್ಲಿ ಬ್ಯುಸಿಯಾಗಿದ್ದಾರೆ.