Don't Miss!
- News ಆಕ್ಸಿಸ್ ಬ್ಯಾಂಕ್ಗೆ ಬರೋಬ್ಬರಿ 7,129 ಕೋಟಿ ರೂಪಾಯಿ ಲಾಭ!
- Sports IPL 2024: ಆರ್ಸಿಬಿಗೆ ವಿರಾಟ್, ಪಾಟಿದಾರ್ ಆಸರೆ: ಹೈದರಾಬಾದ್ಗೆ ಸವಾಲಿನ ಟಾರ್ಗೆಟ್
- Lifestyle ಪುಟ್ಟ ಕಂದಮ್ಮಗಳ ಮುಖದಲ್ಲಿ ನಗು ತರಿಸಲು ಟೀಚರ್ ಮಾಡಿದ ಕೆಲಸ ನೋಡಿ, ಮಕ್ಕಳ ಪಾಲಿನ ದೇವತೆ ಇವರು
- Automobiles Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ತೆಲುಗು ನಟ ವೆಂಕಟೇಶ್, ನಾನಿ ಮನೆ ಮೇಲೆ ಐಟಿ ದಾಳಿ
ಸ್ಯಾಂಡಲ್ ವುಡ್ ಇಂಡಸ್ಟ್ರಿಯಲ್ಲಿ ನಡೆದಿದ್ದ ಐಟಿ ದಾಳಿ ಇನ್ನು ಮರೆತಿಲ್ಲ. ರಾಕ್ ಲೈನ್ ವೆಂಕಟೇಶ್, ವಿಜಯ್ ಕಿರಗಂದೂರ್, ಪುನೀತ್ ರಾಜ್ ಕುಮಾರ್, ಸುದೀಪ್ ಮನೆ ಸೇರಿದಂತೆ ಹಲವು ಕಡೆ ಏಕಕಾಲದಲ್ಲಿ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದರು.
ಸ್ಯಾಂಡಲ್ ವುಡ್ ನ '8' ಶ್ರೀಮಂತ ಮನೆಗಳ ಮೇಲೆ ಐಟಿ ರೈಡ್ l
ಇದೀಗ, ತೆಲುಗು ಇಂಡಸ್ಟ್ರಿಯಲ್ಲಿ ಇಂತಹದ್ದೇ ಐಟಿ ದಾಳಿ ನಡೆದಿದೆ. ತೆಲುಗಿನ ಖ್ಯಾತ ನಿರ್ಮಾಪಕ ಸುರೇಶ್ ಬಾಬು, ನಟ ವೆಂಕಟೇಶ್, ನಟ ನಾನಿ ಅವರಿಗೆ ಸಂಬಂಧಿಸಿದ ಮನೆ ಮತ್ತು ಕಚೇರಿಗಳ ಮೇಲೆ ರೇಡ್ ಆಗಿದೆ. ಮುಂದೆ ಓದಿ.....
ಸುರೇಶ್ ಬಾಬು ಟಾರ್ಗೆಟ್
ಟಾಲಿವುಡ್ ಇಂಡಸ್ಟ್ರಿಯ ಖ್ಯಾತ ನಿರ್ಮಾಪಕ ಸುರೇಶ್ ಬಾಬು ಅವರಿಗೆ ಸೇರಿದ ರಾಮಾನಾಯ್ಡು ಸ್ಟುಡಿಯೋ ಮೇಲೆ ಇಂದು ಬೆಳ್ಳಂಬೆಳಗ್ಗೆ ಐಟಿ ಅಧಿಕಾರಿಗಳು ದಾಳಿ ನಡಸಿ, ಪರಿಶೀಲನೆ ನಡೆಸುತ್ತಿದ್ದಾರೆ. ಸುರೇಶ್ ಬಾಬು ಅವರ ಮನೆ ಮತ್ತು ಕಚೇರಿ ಹಾಗೂ ಸ್ಟುಡಿಯೋದಲ್ಲಿ ಪರಿಶೀಲನೆ ನಡೆಯುತ್ತಿದೆ.
ಐಟಿ ದಾಳಿ ಬಗ್ಗೆ ನನಗೇನು ಆತಂಕವಿಲ್ಲ : ನಟ ಸುದೀಪ್
ವೆಂಕಟೇಶ್ ಮನೆ ಮೇಲೂ ದಾಳಿ
ಸುರೇಶ್ ಬಾಬು ಅವರ ಸಹೋದರ 'ವಿಕ್ಟರಿ' ವೆಂಕಟೇಶ್ ಅವರ ಮನೆ ಮೇಲೂ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಆಸ್ತಿ ಪತ್ರ, ದಾಖಲೆಗಳ ವಿವರಣೆ ಪಡೆದುಕೊಂಡಿದ್ದಾರೆ. ಸಿನಿಮಾಗಳಿಗೆ ಸಂಬಂಧಿಸದಂತೆ, ಅವರ ಲಾಭ, ಬಂಡವಾಳ, ಆದಾಯದ ಲೆಕ್ಕಾಚಾರಕ್ಕೆ ಸಂಬಂಧಿಸದಂತೆ ದಾಳಿ ಆಗಿದೆ ಎನ್ನಲಾಗಿದೆ.
ನಾನಿ ಮತ್ತು ನಾಗಚೈತನ್ಯ ಮನೆ ಮೇಲೂ ದಾಳಿ
ಸುರೇಶ್ ಬಾಬು ಮತ್ತು ವೆಂಕಟೇಶ್ ಮನೆ ಮೇಲೆ ದಾಳಿ ಒಂದು ಕಡೆಯಾದರೆ, ಈ ಕಡೆ ಅಕ್ಕಿನೇನಿ ನಾಗಾರ್ಜುನ ಅವರಿಗೆ ಸಂಬಂಧಿಸಿದ ಅನ್ನಪೂರ್ಣ ಸ್ಟುಡಿಯೋ ಹಾಗೂ ನಾಗಚೈತನ್ಯ ಅವರ ಮನೆ ಮೇಲೂ ದಾಳಿ ಆಗಿದೆ. ಜೊತೆಯಲ್ಲಿ ನಾನಿ ಅವರ ಮನೆ ಮೇಲೂ ರೇಡ್ ಆಗಿದೆ. ಸ್ಟಾರ್ ನಟರ ಆಡಿಟರ್ ಗಳನ್ನ ಜೊತೆಯಲ್ಲಿ ಕೂರಿಸಿಕೊಂಡು ಪರಿಶೀಲನೆ ಮಾಡಲಾಗುತ್ತಿದೆಯಂತೆ.
ನಟರ ಮೇಲೆ ಐಟಿ ದಾಳಿ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸಿದ್ದರಾಮಯ್ಯ
ಐಟಿ ವಂಚಿಸಿರುವ ಆರೋಪ
ದುಬಾರಿ ಚಿತ್ರಗಳನ್ನ ನಿರ್ಮಿಸಿ ಲಾಭ ಮಾಡುತ್ತಿದ್ದರೂ ಸೂಕ್ತವಾದ ಲೆಕ್ಕಾಚಾರ ನೀಡಿಲ್ಲ ಎಂಬ ಆರೋಪ. ಹೆಚ್ಚು ಸಂಭಾವನೆ ಪಡೆಯುತ್ತಿದ್ದರೂ ತೆರಿಗೆ ವಂಚಿಸುತ್ತಿರುವ ಆರೋಪ, ಸಿನಿಮಾ ನಿರ್ಮಾಣ ಹಾಗೂ ಐಟಿ ರಿಟರ್ನ್ ನಲ್ಲಿ ವಂಚನೆ ಮಾಡಿರುವ ಆರೋಪಗಳಲ್ಲಿ ತೆಲುಗು ಸ್ಟಾರ್ ನಟ ಹಾಗೂ ನಿರ್ಮಾಪಕರ ಮನೆ ಹಾಗೂ ಕಚೇರಿಗಳ ಮೇಲೆ ದಾಳಿ ಮಾಡಲಾಗಿದೆ ಎಂದು ತಿಳಿದು ಬಂದಿದೆ.
ವೆಂಕಟೇಶ್-ನಾಗಚೈತನ್ಯ ಮೆಗಾಸಿನಿಮಾ
ಸುರೇಶ್ ಬಾಬು ನಿರ್ಮಾಣದಲ್ಲಿ 'ವೆಂಕಿ ಮಾಮ' ಸಿನಿಮಾ ಶೂಟಿಂಗ್ ನಡೆಯುತ್ತಿದೆ. ವೆಂಕಟೇಶ್, ನಾಗಚೈತನ್ಯ ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ. ತಮಿಳಿನ 'ಅಸುರನ್' ಚಿತ್ರದ ರೀಮೇಕ್ ಹಕ್ಕು ಖರೀದಿಸಿರುವ ಸುರೇಶ್ ಬಾಬು ಅದನ್ನ ಭಾರಿ ಬಜೆಟ್ ನಲ್ಲಿ ನಿರ್ಮಿಸಲಿದ್ದಾರೆ. ಮತ್ತೊಂದೆಡೆ ನಾನಿ ಕೂಡ ಸತತವಾಗಿ ಸಿನಿಮಾಗಳನ್ನ ಮಾಡುತ್ತಿದ್ದು, ಎಲ್ಲವೂ ಯಶಸ್ಸು ಕಾಣುತ್ತಿರುವುದು ಐಟಿ ಅಧಿಕಾರಗಳು ಗಮನಿಸಿದ್ದಾರೆ.