Don't Miss!
- Technology iPhone: ಆಪಲ್ ಅಂತಿಮವಾಗಿ ಐಫೋನ್ 12 ಬಳಕೆದಾರರಿಗೆ ಗುಡ್ ನ್ಯೂಸ್ ನೀಡಿಯೇ ಬಿಟ್ಟಿತು! ಏನದು?
- News Karnataka Lok Sabha Election 2024: ಮೊದಲ ದಿನ ನಾಮಪತ್ರ ಸಲ್ಲಿಸಿದ ಅಭ್ಯರ್ಥಿಗಳ ಪಟ್ಟಿ
- Automobiles Tata Nexon: ಟಾಟಾ ನೆಕ್ಸಾನ್ ಹೊಸ ರೂಪಾಂತರಗಳು ಬಿಡುಗಡೆ, ರೂ.10 ಲಕ್ಷ ಬೆಲೆ.. ಆಕರ್ಷಕ ವೈಶಿಷ್ಟ್ಯಗಳು
- Sports Riyan Parag: 'ಗಾಯದಿಂದ ಮೂರು ದಿನ ಒದ್ದಾಡಿ ಹೋಗಿದ್ದೆ': ರಿಯಾನ್ ಪರಾಗ್
- Finance ಇನ್ಮುಂದೆ ದುಬಾರಿಯಾಗಲಿದೆ ಎಸ್ಬಿಐ ಡೆಬಿಟ್, ಕ್ರೆಡಿಟ್ ಕಾರ್ಡ್ ನಿರ್ವಹಣಾ ಶುಲ್ಕ
- Lifestyle ಗುಡ್ಫ್ರೈಡೆ ಆಚರಣೆ ಹುಟ್ಟಿದ್ದು ಹೇಗೆ? ಇದರ ಮಹತ್ವವೇನು ಗೊತ್ತಾ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮೆಗಾಸ್ಟಾರ್ ಚಿರಂಜೀವಿ ವಿರುದ್ಧ ತೊಡೆತಟ್ಟಲಿದ್ದಾರೆ ಕನ್ನಡದ ಪ್ರತಿಭಾವಂತ ನಟ
ತೆಲುಗಿನ ಮೆಗಾಸ್ಟಾರ್ ಚಿರಂಜೀವಿ 'ಸೈರಾ ನರಸಿಂಹಾ ರೆಡ್ಡಿ' ಬಳಿಕ ಮತ್ತೊಂದು ಐತಿಹಾಸಿಕ ಸಿನಿಮಾದಲ್ಲಿ ನಟಿಸುತ್ತಿದ್ದು, ಆ ಸಿನಿಮಾದಲ್ಲಿ ಮುಖ್ಯ ವಿಲನ್ ಭೂಮಿಕೆಯಲ್ಲಿ ಕನ್ನಡದ ಪ್ರತಿಭಾನ್ವಿತ ನಟ ಕಾಣಿಸಿಕೊಳ್ಳಲಿದ್ದಾರೆ.
Recommended Video
ಚಿರಂಜೀವಿ ಅವರ ಈ ಹಿಂದಿನ ಚಿತ್ರ ಸೈರಾ ನರಸಿಂಹಾ ರೆಡ್ಡಿ ಸಿನಿಮಾದಲ್ಲಿ ಕನ್ನಡಿದ ಸುದೀಪ್ ಮುಖ್ಯಪಾತ್ರವೊಂದರಲ್ಲಿ ಕಾಣಿಸಿಕೊಂಡಿದ್ದರು. ಈಗ ಹೊಸ ಸಿನಿಮಾದಲ್ಲೂ ಕನ್ನಡಿಗ ನಟ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.
ಚಿರಂಜೀವಿ ಅವರು ಆಚಾರ್ಯ ಸಿನಿಮಾದಲ್ಲಿ ನಟಿಸುತ್ತಿದ್ದು, ಲಾಕ್ಡೌನ್ ಮುಗಿದ ಬಳಿಕ ಚಿತ್ರೀಕರಣ ಮುಂದುವರೆಯಲಿದೆ. ಈ ಸಿನಿಮಾದಲ್ಲಿ ವಿಲನ್ ಆಗಿ ಕನ್ನಡದ ಪ್ರತಿಭಾವಂತ ನಟ ಕಿಶೋರ್ ಕಾಣಿಸಿಕೊಳ್ಳಲಿದ್ದಾರೆ.
ರಜನೀಕಾಂತ್, ಧನುಶ್ ಸಿನಿಮಾಗಳಲ್ಲಿ ನಟಿಸಿರುವ ಕಿಶೋರ್
ನಟ ಕಿಶೋರ್ ಅವರು ಈ ಹಿಂದೆ ರಜನೀಕಾಂತ್ ಸಿನಿಮಾದಲ್ಲೂ ಸಹ ವಿಲನ್ ಪಾತ್ರ ನಿರ್ವಹಿಸಿದ್ದರು. ಕಬಾಲಿ ಸಿನಿಮಾದಲ್ಲಿ ಅವರು ನಟಿಸಿದ್ದರು. ನಟ ಧನುಶ್ ಅವರೊಂದಿಗೆ ಆಡುಕುಲಂನಲ್ಲಿ ಪಾತ್ರ ಮಾಡಿದ್ದರು. ಕಿಶೋರ್ ಅವರಿಗೆ ಪರಭಾಷೆಯ ಪ್ರಮುಖ ಸಿನಿಮಾಗಳಲ್ಲಿ ಅವಕಾಶ ಸಿಗುತ್ತಿರುವುದು ಇದು ಮೊದಲೇನೂ ಅಲ್ಲ.
ಬಹು ಮಹತ್ವದ ಪಾತ್ರದಲ್ಲಿ ನಟನೆ
ಆಚಾರ್ಯ ಸಿನಿಮಾ ಬಗ್ಗೆ ಮಾಧ್ಯಮದೊಟ್ಟಿಗೆ ಮಾತಾಡಿರುವ ಅವರು, 'ಆಚಾರ್ಯದ ನನ್ನ ಭಾಗದ ಚಿತ್ರೀಕರಣ ಈಗಾಗಲೇ ಸ್ವಲ್ಪ ಮುಗಿದಿದೆ. ಲಾಕ್ಡೌನ್ ಮುಗಿದ ಬಳಿಕ ಇನ್ನುಳಿದ ಭಾಗದ ಚಿತ್ರೀಕರಣ ಆಗಲಿದೆ. ತುಂಬಾ ದೊಡ್ಡ ಪಾತ್ರವಲ್ಲದಿದ್ದರೂ ಬಹಳ ಮಹತ್ವದ ಪಾತ್ರ' ಎಂದು ಕಿಶೋರ್ ಹೇಳಿದ್ದಾರೆ.
''ಚಿರಂಜೀವಿ ಜೊತೆ ನಟಿಸುವ ಅವಕಾಶ ಬೇಡವೆನ್ನಲಿ ಹೇಗೆ''
ಚಿರಂಜೀವಿ ಚಿತ್ರದಲ್ಲಿ ನಟಿಸುವ ಅವಕಾಶ ದೊರೆತ ಬಗೆಯ ಬಗ್ಗೆ ಮಾಹಿತಿ ನೀಡಿರುವ ಕಿಶೋರ್, ಆಚಾರ್ಯ ಸಿನಿಮಾದ ನಿರ್ದೇಶಕ ಕೊರಟಾಲ ಶಿವ ನನ್ನ ಗೆಳೆಯ , ಈ ಹಿಂದೆ ಎರಡು ಸಿನಿಮಾದಲ್ಲಿ ನಟಿಸಬೇಕಿತ್ತು, ಆದರೆ ಡೇಟ್ಸ್ ಹೊಂದಾಣಿಕೆ ಆಗಿರಲಿಲ್ಲ. ಈಗ ಚಿರಂಜೀವಿ ಅವರೊಟ್ಟಿಗೆ ನಟಿಸುವ ಅವಕಾಶ ದೊರೆತಾಗ ಬಿಡುವುದುಂಟೆ ಎಂದಿದ್ದಾರೆ ಕಿಶೋರ್.
ಸ್ವಂತ ನಿರ್ಮಾಣ ಸಂಸ್ಥೆ ಆರಂಭಿಸಿರುವ ಕಿಶೋರ್ಸ
ಇನ್ನು ಕನ್ನಡದಲ್ಲಿ ಬೈ1 ಗೆಟ್ 1 ಫ್ರೀ ಎನ್ನುವ ಹೊಸ ಸಿನಿಮಾದಲ್ಲಿ ನಟಿಸುತ್ತಿರುವ ಕಿಶೋರ್, ಸ್ವಂತ ನಿರ್ಮಾಣ ಸಂಸ್ಥೆಯ ಅಡಿಯಲ್ಲಿ ಸಿನಿಮಾಗಳನ್ನು ಮಾಡುತ್ತಿದ್ದಾರೆ. ಅವರೇ ನಿರ್ದೇಶನದ ಬ್ಲಾಕ್ ಆಂಡ್ ವೈಟ್ ಸಿನಿಮಾ ಪೋಸ್ಟ್ ಪ್ರೊಡಕ್ಷನ್ ನಲ್ಲಿದ್ದರೆ, ಸಹ ನಿರ್ಮಾಣದ ವೈಫೈ ಸಿನಿಮಾ ಬಿಡುಗಡೆಗೆ ತಯಾರಾಗುತ್ತಿದೆ.