Don't Miss!
- Technology ಸದ್ಯ ನೀವೇನಾದರೂ ಹೊಸ ರೆಡ್ಮಿ ಫೋನ್ ಖರೀದಿಸ್ತೀರಾ?..ಹಾಗಿದ್ರೆ, ಇಲ್ಲಿ ಗಮನಿಸಿ!
- News ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು: ಕಾರಣವೇನು?
- Lifestyle ದುಬೈ ಪ್ರವಾಹದ ವೈರಲ್ ವೀಡಿಯೋಗಳು: ಒಂದೊಂದು ದೃಶ್ಯವೂ ಬದುಕಿನ ಪಾಠ ಹೇಳುತ್ತೆ
- Finance Binance: ಫೈನ್ ಕಟ್ಟಿ ಭಾರತಕ್ಕೆ ಮರಳಿ ಬರಲಿದೆ ಕ್ರಿಫ್ಟೋಕರೆನ್ಸಿ ವಿನಿಮಯ ಕೇಂದ್ರ!
- Automobiles Tata: ಮಧ್ಯಮ ವರ್ಗದವರಿಗೆ ಸಿಹಿಸುದ್ದಿ.. ಮುಂಬರಲಿರುವ ಟಾಟಾ ಕಾರುಗಳಿವು, ಒಂದಕ್ಕಿಂತ ಒಂದು ಭರ್ಜರಿಯಾಗಿವೆ!
- Sports ಟಿ20 ವಿಶ್ವಕಪ್ ಬಗ್ಗೆ ಸ್ಪಷ್ಟನೆ ಕೇಳಿದ ವಿರಾಟ್ ಕೊಹ್ಲಿ; ಕಹಾನಿ ಮೇ ಟ್ವಿಸ್ಟ್ ನೀಡಿದ ಬಿಸಿಸಿಐ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ತೆಲುಗು ಚಿತ್ರರಂಗಕ್ಕೆ ಎಂಟ್ರಿ ಕೊಟ್ಟ ಶಶಿ ಕುಮಾರ್ ಪುತ್ರ
ನಟ ಶಶಿ ಕುಮಾರ್ ಪುತ್ರ ಆದಿತ್ಯ ಈಗಾಗಲೇ ಚಿತ್ರರಂಗಕ್ಕೆ ಬಂದಿದ್ದಾರೆ. 'ಮೊಡವೆ' ಎಂಬ ಸಿನಿಮಾದ ಮೂಲಕ ಆದಿತ್ಯ ಲಾಂಚ್ ಆಗಿದ್ದಾರೆ. ಆದರೆ, ಈ ಸಿನಿಮಾ ಬಿಡುಗಡೆಗೂ ಮೊದಲೇ ಅವರ ಮತ್ತೊಂದು ಸಿನಿಮಾ ಸಿದ್ಧವಾಗಿದೆ.
'ಸೀತಾಯಣಂ' ಎಂಬ ಸಿನಿಮಾದಲ್ಲಿ ಆದಿತ್ಯ ನಟಿಸುತ್ತಿದ್ದಾರೆ. ಪ್ರಭಾಕರ್ ಆರಿಷ್ಕಾ ನಿರ್ದೇಶನ ಮಾಡಿದ್ದಾರೆ. ಈಗಾಗಲೇ ಸಿನಿಮಾದ ಚಿತ್ರೀಕರಣ ಕೂಡ ಮುಕ್ತಾಯವಾಗಿದೆಯಂತೆ. ಕನ್ನಡ ಮತ್ತೆ ತೆಲುಗು ಎರಡು ಭಾಷೆಗಳಲ್ಲಿ ಈ ಸಿನಿಮಾ ಬಿಡುಗಡೆ ಆಗುತ್ತಿದೆ. ಹೀಗಾಗಿ ಈ ಚಿತ್ರದ ಮೂಲಕ ಆದಿತ್ಯ ತೆಲುಗು ಚಿತ್ರರಂಗಕ್ಕೆ ಕಾಲಿಟ್ಟಿದ್ದಾರೆ.
ಚಿತ್ರರಂಗಕ್ಕೆ ಬರ್ತಿರೋ ಶಶಿ ಕುಮಾರ್ ಮಗನಿಗೆ ಸಿಕ್ಕಿದೆ ದರ್ಶನ್ ಬೆಂಬಲ
ಸಿನಿಮಾದ ಟೈಟಲ್ ಕೇಳಿದಾಗ ರಾಮಾಯಣಕ್ಕೂ 'ಸೀತಾಯಣಂ' ಕ್ಕೂ ಏನಾದರೂ ಸಂಬಂಧ ಇದೆಯೇ ಎನ್ನುವ ಪ್ರಶ್ನೆ ಮೂಡುವುದು ಸಹಜ. ಆದರೆ, ಈ ಸಿನಿಮಾಗೆ ಯಾವುದೇ ಪೌರಾಣಿಕ ಹಿನ್ನಲೆ ಇಲ್ಲವಂತೆ. ಇಂದಿನ ಕಾಲಘಟ್ಟದಲ್ಲಿ ಸಿನಿಮಾದ ಕಥೆ ನಡೆಯುತ್ತದೆಯಂತೆ.
ಅನಹಿತ ಭೂಷಣ್ ಸಿನಿಮಾದ ನಾಯಕಿಯಾಗಿದ್ದಾರೆ. ಅನಹಿತ ಮುಂಬೈನವರಾಗಿದ್ದು, ಕನ್ನಡದಲ್ಲಿ ಮೊದಲ ಬಾರಿಗೆ ಕಾಣಿಸಿಕೊಳ್ಳುತ್ತಿದ್ದಾರೆ. ಸಿನಿಮಾ ಒಂದು ಪ್ರೇಮಕಥೆಯನ್ನು ಹೊಂದಿದ್ದು, ಆದಿತ್ಯ ಹಾಗೂ ಅನಹಿತ ಜೋಡಿ ತುಂಬ ಚೆನ್ನಾಗಿ ಇರಲಿದೆಯಂತೆ.
ಅಂದಹಾಗೆ, 'ಸೀತಾಯಣಂ' ಸಿನಿಮಾ 'ಮೊಡವೆ' ಸಿನಿಮಾಗೂ ಮೊದಲೇ ಬಿಡುಗಡೆ ಆಗಲಿದೆ. ಕಾರಣ 'ಮೊಡವೆ' ಸಿನಿಮಾ ನಿಂತು ಹೋಗಿದೆ ಎನ್ನುವ ಸುದ್ದಿ ಇದೆ.