Don't Miss!
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- News ಮಂಡ್ಯದ ‘ಹಲವು ಸುಮಲತಾ’ ತಂತ್ರ ಬೆಂಗಳೂರು ಗ್ರಾಮಾಂತದಲ್ಲೂ ಬಂತಾ? ಮತ್ತೊಬ್ಬ ಡಾ ಸಿಎನ್ ಮಂಜುನಾಥ್ ಕಣಕ್ಕೆ!
- Sports IPL 2024: ರಾಜಸ್ಥಾನ್ ರಾಯಲ್ಸ್ vs ಡೆಲ್ಲಿ ಕ್ಯಾಪಿಟಲ್ಸ್ ರೋಚಕ ಪಂದ್ಯದ ಟಾಸ್ ವರದಿ, ಆಡುವ 11ರ ಬಳಗ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Lifestyle ವಿಭಿನ್ನ ಶೈಲಿಯಲ್ಲಿ ಮೊಟ್ಟೆ ಸಾಂಬಾರ್ ಮಾಡಿ..! ಇಲ್ಲಿದೆ ಸಿಂಪಲ್ ಅಡುಗೆ
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ತೆಲುಗು ಚಿತ್ರರಂಗಕ್ಕೆ ಎಂಟ್ರಿ ಕೊಟ್ಟ ಶಶಿ ಕುಮಾರ್ ಪುತ್ರ
ನಟ ಶಶಿ ಕುಮಾರ್ ಪುತ್ರ ಆದಿತ್ಯ ಈಗಾಗಲೇ ಚಿತ್ರರಂಗಕ್ಕೆ ಬಂದಿದ್ದಾರೆ. 'ಮೊಡವೆ' ಎಂಬ ಸಿನಿಮಾದ ಮೂಲಕ ಆದಿತ್ಯ ಲಾಂಚ್ ಆಗಿದ್ದಾರೆ. ಆದರೆ, ಈ ಸಿನಿಮಾ ಬಿಡುಗಡೆಗೂ ಮೊದಲೇ ಅವರ ಮತ್ತೊಂದು ಸಿನಿಮಾ ಸಿದ್ಧವಾಗಿದೆ.
'ಸೀತಾಯಣಂ' ಎಂಬ ಸಿನಿಮಾದಲ್ಲಿ ಆದಿತ್ಯ ನಟಿಸುತ್ತಿದ್ದಾರೆ. ಪ್ರಭಾಕರ್ ಆರಿಷ್ಕಾ ನಿರ್ದೇಶನ ಮಾಡಿದ್ದಾರೆ. ಈಗಾಗಲೇ ಸಿನಿಮಾದ ಚಿತ್ರೀಕರಣ ಕೂಡ ಮುಕ್ತಾಯವಾಗಿದೆಯಂತೆ. ಕನ್ನಡ ಮತ್ತೆ ತೆಲುಗು ಎರಡು ಭಾಷೆಗಳಲ್ಲಿ ಈ ಸಿನಿಮಾ ಬಿಡುಗಡೆ ಆಗುತ್ತಿದೆ. ಹೀಗಾಗಿ ಈ ಚಿತ್ರದ ಮೂಲಕ ಆದಿತ್ಯ ತೆಲುಗು ಚಿತ್ರರಂಗಕ್ಕೆ ಕಾಲಿಟ್ಟಿದ್ದಾರೆ.
ಚಿತ್ರರಂಗಕ್ಕೆ ಬರ್ತಿರೋ ಶಶಿ ಕುಮಾರ್ ಮಗನಿಗೆ ಸಿಕ್ಕಿದೆ ದರ್ಶನ್ ಬೆಂಬಲ
ಸಿನಿಮಾದ ಟೈಟಲ್ ಕೇಳಿದಾಗ ರಾಮಾಯಣಕ್ಕೂ 'ಸೀತಾಯಣಂ' ಕ್ಕೂ ಏನಾದರೂ ಸಂಬಂಧ ಇದೆಯೇ ಎನ್ನುವ ಪ್ರಶ್ನೆ ಮೂಡುವುದು ಸಹಜ. ಆದರೆ, ಈ ಸಿನಿಮಾಗೆ ಯಾವುದೇ ಪೌರಾಣಿಕ ಹಿನ್ನಲೆ ಇಲ್ಲವಂತೆ. ಇಂದಿನ ಕಾಲಘಟ್ಟದಲ್ಲಿ ಸಿನಿಮಾದ ಕಥೆ ನಡೆಯುತ್ತದೆಯಂತೆ.
ಅನಹಿತ ಭೂಷಣ್ ಸಿನಿಮಾದ ನಾಯಕಿಯಾಗಿದ್ದಾರೆ. ಅನಹಿತ ಮುಂಬೈನವರಾಗಿದ್ದು, ಕನ್ನಡದಲ್ಲಿ ಮೊದಲ ಬಾರಿಗೆ ಕಾಣಿಸಿಕೊಳ್ಳುತ್ತಿದ್ದಾರೆ. ಸಿನಿಮಾ ಒಂದು ಪ್ರೇಮಕಥೆಯನ್ನು ಹೊಂದಿದ್ದು, ಆದಿತ್ಯ ಹಾಗೂ ಅನಹಿತ ಜೋಡಿ ತುಂಬ ಚೆನ್ನಾಗಿ ಇರಲಿದೆಯಂತೆ.
ಅಂದಹಾಗೆ, 'ಸೀತಾಯಣಂ' ಸಿನಿಮಾ 'ಮೊಡವೆ' ಸಿನಿಮಾಗೂ ಮೊದಲೇ ಬಿಡುಗಡೆ ಆಗಲಿದೆ. ಕಾರಣ 'ಮೊಡವೆ' ಸಿನಿಮಾ ನಿಂತು ಹೋಗಿದೆ ಎನ್ನುವ ಸುದ್ದಿ ಇದೆ.