Don't Miss!
- News K Sudhakar: ದಲಿತ ಕಾರ್ಯಕರ್ತನ ಮನೆಯಲ್ಲಿ ಉಪಾಹಾರ ಸೇವಿಸಿದ ಕೆ ಸುಧಾಕರ್
- Sports KKR vs LSG IPL 2024: ಸಾಲ್ಟ್, ಅಯ್ಯರ್ ಭರ್ಜರಿ ಬ್ಯಾಟಿಂಗ್; ಲಕ್ನೋ ವಿರುದ್ಧ ಕೋಲ್ಕತ್ತಾಗೆ ಚೊಚ್ಚಲ ಗೆಲುವು
- Lifestyle ಬೇಸಿಗೆಯಲ್ಲಿ ನಿತ್ಯ ಸೌತೆಕಾಯಿ ತಿಂದರೆ ಏನಾಗುತ್ತೆ? ರಾತ್ರಿ ಸೇವಿಸಬಾರದು ಏಕೆ.?
- Finance ಅಮೇರಿಕನ್ ಕಂಪನಿಗಳಿಗೆ ಸೆಡ್ಡು ಹೊಡೆಯಲು ಮುಂದಾದ ಆರ್ಬಿಐ, ಫೋನ್ಪೇ, ಗೂಗಲ್ಗೆ ಆತಂಕ!
- Technology Poco: ಶೀಘ್ರದಲ್ಲೇ ಲಾಂಚ್ ಆಗಲಿದೆ ಪೊಕೊ F6 ಸ್ಮಾರ್ಟ್ಫೋನ್: ನಿರೀಕ್ಷಿತ ಫೀಚರ್ಸ್ ಏನು?
- Automobiles ಬಿಡುಗಡೆಗೆ ಸಜ್ಜಾದ ಫೋರ್ಸ್ ಗೂರ್ಖಾ 5-ಡೋರ್ ಎಸ್ಯುವಿ: ಮಹೀಂದ್ರಾ ಥಾರ್ಗೆ ಎದೆಬಡಿತ ಶುರು
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬಿಗ್ಬಾಸ್ ಆಯೋಜಕರ ಮೇಲೆ ಗಂಭೀರ ಆರೋಪ ಮಾಡಿದ ಸ್ಪರ್ಧಿ
ತೆಲುಗು ಬಿಗ್ಬಾಸ್ 4 ಪ್ರಸಾರವಾಗಲು ಪ್ರಾರಂಭವಾಗಿ ಎರಡು ವಾರಕ್ಕೂ ಹೆಚ್ಚಾಯಿತು. ನಿರೀಕ್ಷೆಯಂತೆಯೇ ಬಿಗ್ಬಾಸ್ ಶೋ ವಿವಾದಗಳಿಂದ ಗಮನಸೆಳೆಯುತ್ತಿದೆ.
ತೆಲುಗು ಬಿಗ್ಬಾಸ್ ಮನೆಯೊಳಗಿನ ಆಂತರಿಕ ರಾಜಕೀಯ, ಪರಸ್ಪರ ಕಚ್ಚಾಟ ತುಸು ಹೆಚ್ಚೇ ಇವೆ. ಈಗಾಗಲೇ ಇಬ್ಬರು ಸ್ಪರ್ಧಾಳುಗಳು ಎಲಿಮಿನೇಟ್ ಆಗಿದ್ದು, ಹೊರಗೆ ಬಂದವರು ಒಳಗಿರುವವರ ವಿರುದ್ಧ ಕೆಲ ಆರೋಪಗಳನ್ನು ಸಹ ಮಾಡಿದ್ದಾರೆ.
ಬಿಗ್ಬಾಸ್ನಿಂದ ಎರಡನೇ ವಾರ ಬಿಗ್ಬಾಸ್ ಮನೆಯಿಂದ ಎಲಿಮಿನೇಟ್ ಆದ ಸ್ಪರ್ಧಿ ಕರಾಟೆ ಕಲ್ಯಾಣಿ, ಹೊರಗೆ ಬಂದು ಬಿಗ್ಬಾಸ್ ಆಯೋಜಕರ ಮೇಲೆಯೇ ಆರೋಪ ಮಾಡಿದ್ದಾರೆ.
'ಆಯೋಜಕರು ನನ್ನನ್ನು ಉದ್ದೇಶಪೂರ್ವಕವಾಗಿ ಹೊರಹಾಕಿದ್ದಾರೆ'
'ಬಿಗ್ಬಾಸ್ ಶೋ ಆಯೋಜಕರು, ಉದ್ದೇಶಪೂರ್ವಕವಾಗಿ ನನ್ನನ್ನು ಎಲಿಮಿನೇಟ್ ಮಾಡಿದ್ದಾರೆ. ನನಗೆ ಬಂದ ಮತಗಳನ್ನು ಬೇರೆ ಸ್ಪರ್ಧಿಗೆ ನೀಡಿದ್ದಾರೆ. ನನಗೆ ಕಡಿಮೆ ಮತಗಳು ಬಂದಿವೆ ಎಂದು ತೋರಿಸಿ ನನ್ನನ್ನು ಎಲಿಮಿನೇಟ್ ಮಾಡಿದ್ದಾರೆ' ಎಂದು ಆರೋಪಿಸಿದ್ದಾರೆ ಕರಾಟೆ ಕಲ್ಯಾಣಿ.
ನನಗೆ ಜನರ ಬೆಂಬಲ ಇತ್ತು: ಕರಾಟೆ ಕಲ್ಯಾಣಿ
'ನಾನು ಒಳ್ಳೆಯ ಸ್ಪರ್ಧಿಯಾಗಿದ್ದೆ, ನನಗೆ ಜನರ ಬೆಂಬಲವೂ ಇತ್ತು, ಆದರೆ ನನಗೆ ಬಂದ ಮತಗಳನ್ನು ಬೇರೆ ಸ್ಪರ್ಧಿಗೆ ವರ್ಗಾವಣೆ ಮಾಡಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ನನ್ನ ಬಳಿ ಸಾಕ್ಷ್ಯವೂ ಇದೆ, ಇದು ಯಾರು, ಏಕೆ ಮಾಡಿದ್ದಾರೋ ಗೊತ್ತಿಲ್ಲ' ಎಂದಿದ್ದಾರೆ ನಟಿ ಕರಾಟೆ ಕಲ್ಯಾಣಿ.
ಉದ್ದೇಶಪೂರ್ವಕವಾಗಿ ನನ್ನನ್ನು ನಾಮಿನೇಟ್ ಮಾಡಿದರು: ಕಲ್ಯಾಣಿ
ಬಿಗ್ಬಾಸ್ ಮನೆಯಲ್ಲಿ ನಾನು ಅತ್ಯುತ್ತಮ ಸ್ಪರ್ಧಿ ಆಗಿದ್ದೆ. ನನ್ನನ್ನು ನೋಡಿದರೆ ಕೆಲವು ಸ್ಪರ್ಧಿಗಳು ಹೆದರುತ್ತಿದ್ದರು. ಹಾಗಾಗಿಯೇ ಅವರು ನನ್ನನ್ನು ಹೊರಗೆ ಕಳಿಸಲು ನಿರ್ಧರಿಸಿ ನನ್ನನ್ನು ನಾಮಿನೇಟ್ ಮಾಡಿದರು ಎಂದು ಸಹ ಕಲ್ಯಾಣಿ ಹೇಳಿದ್ದಾರೆ.
Recommended Video
'ನನ್ನ ಮಾತುಗಳನ್ನನು ನೆಗೆಟಿವ್ ಆಗಿ ತೆಗೆದುಕೊಂಡರು'
ಬಿಗ್ಬಾಸ್ ಆಯೋಜಕರು ಮೊದಲೇ ಸೀಸನ್ಗೆ ನನ್ನನ್ನು ಕೇಳಿದ್ದರು, ಆದರೆ ಸಿನಿಮಾ ಚಿತ್ರೀಕರಣ ಇದ್ದ ಕಾರಣ ನಾನು ಭಾಗವಹಿಸಿರಲಿಲ್ಲ. ಈ ಬಾರಿ ಬಿಗ್ಬಾಸ್ ಮನೆಯಲ್ಲಿ ನಾನು ಅಂದುಕೊಂಡತೆ ಇರಲು ಸಾಧ್ಯವಾಗಲಿಲ್ಲ. ಮನೆಯಲ್ಲಿ ನಾನು ಹೇಳಿದ ಮಾತುಗಳನ್ನು ನೆಗೆಟಿವ್ ಆಗಿ ತೆಗೆದುಕೊಂಡರು. ಹಾಗಾಗಿಯೇ ನನ್ನ ವಿರುದ್ಧ ಕೆಲವು ಜಗಳಗಳಾದವು' ಎಂದಿದ್ದಾರೆ ಕಲ್ಯಾಣಿ.