Don't Miss!
- News ಜನ ಸೇವಕನಾಗಿ ದುಡಿಯಲು ನನಗೊಂದು ಅವಕಾಶ ಕೊಡಿ: ವಿನೋದ್ ಅಸೂಟಿ
- Technology OnePlus: ಒನ್ಪ್ಲಸ್ 13 ಸ್ಮಾರ್ಟ್ಫೋನ್ ಡಿಸ್ಪ್ಲೇ, ವಿನ್ಯಾಸ ಲೀಕ್!..ಯಾವಾಗ ಲಾಂಚ್?
- Automobiles ಭೂಮಿಯ ಸ್ವರ್ಗ: 1.50 ಕೋಟಿಯ ಟೊಯೊಟಾ ವೆಲ್ಫೈರ್ಗೆ ಮನಸೋತ ಖ್ಯಾತ ನಟ.. ಈ ಕಾರಿನಲ್ಲಿ ಏನಿದೆ?
- Sports RCB: ಯುಜ್ವೇಂದ್ರ ಚಹಾಲ್ ಮರಳಿ ಬರುವಂತೆ ಬೇಡಿಕೊಳ್ಳಿ; ಆರ್ಸಿಬಿಗೆ ಸಲಹೆ ನೀಡಿದ ರಾಬಿನ್ ಉತ್ತಪ್ಪ
- Lifestyle ಗರಿ ಗರಿಯಾದ ಕೋಡುಬಳೆ ಮನೆಯಲ್ಲೇ ಮಾಡಿ.! 4 ವಸ್ತು ಇದ್ದರೆ ಸಾಕು
- Finance ಝಿಲಿಂಗೋನ ಸಹ-ಸಂಸ್ಥಾಪಕ ಹಾಗೂ ಮಾಜಿ ಸಿಒಒ ವಿರುದ್ಧ ಲೈಂಗಿಕ ಕಿರುಕುಳ ಕೇಸ್ ದಾಖಲಿಸಿದ ಅಂಕಿತಿ ಬೋಸ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನಟ ರಾಮ್ ಚರಣ್ ಗೆ ನಾಯಕಿಯಾಗ್ತಾರಾ 'ಮಹಾನಟಿ' ಕೀರ್ತಿ ಸುರೇಶ್?
ಟಾಲಿವುಡ್ ನ ಖ್ಯಾತ ನಟ ರಾಮ್ ಚರಣ್ ಸದ್ಯ ಆರ್ ಆರ್ ಆರ್ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಅಭಿನಯದ ಜೊತೆಗೆ ನಿರ್ಮಾಣದಲ್ಲಿಯೂ ನಿರತರಾಗಿದ್ದಾರೆ. ಚಿರಂಜೀವಿ ಅಭಿನಯದ ಆಚಾರ್ಯ ಸಿನಿಮಾ ನಿರ್ಮಾಣದ ಹೊಣೆಹೊತ್ತಿರುವ ರಾಮ್ ಚರಣ್ ಅಪ್ಪನ ಸಿನಿಮಾದ ಕಡೆಯು ಗಮನ ಹರಿಸುತ್ತಿದ್ದಾರೆ.
Recommended Video
ಆಚಾರ್ಯ ಸಿನಿಮಾದ ಚಿತ್ರೀಕರಣ ಈಗಾಗಲೆ ಪ್ರಾರಂಭವಾಗಿದೆ. ಆದರೆ ಕೊರೊನಾ ಲಾಕ್ ಡೌನ್ ನಿಂದ ಸಿನಿಮಾ ಚಿತ್ರೀಕರಣ ಸ್ಥಗಿತವಾಗಿದೆ. ಆಚಾರ್ಯ ಸಿನಿಮಾ ಕಲಾವಿದರ ಆಯ್ಕೆ ವಿಚಾರದಲ್ಲಿ ಸಿಕ್ಕಾಪಟ್ಟೆ ಸದ್ದು ಮಾಡುತ್ತಿದೆ. ಚಿರಂಜೀವಿಗೆ ನಾಯಕಿಯಾಗಿ ಯಾರು ಕಾಣಿಸಿಕೊಳ್ಳಲಿದ್ದಾರೆ ಎನ್ನುವ ಕುತೂಹಲ ಅಭಿಮಾನಿಗಳಲ್ಲಿತ್ತು. ಆದರೀಗ ಕಾಜಲ್ ಅಗರವಾಲ್ ನಾಯಕಿಯಾಗಿ ಕಾಣಿಸಿಕೊಳ್ಳುವುದು ಬಹುತೇಕ ಖಚಿತವಾಗಿದೆ.
ಕಾತರದಿಂದ ಕಾಯುತ್ತಿದ್ದ ಅಭಿಮಾನಿಗಳಿಗೆ ಮತ್ತೆ ನಿರಾಸೆ ಮೂಡಿಸಿದ ರಾಜಮೌಳಿ
ಸಿನಿಮಾದಲ್ಲಿ ನಟ ರಾಮ್ ಚರಣ್ ಸಹ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ರಾಮ್ ಚರಣ್ ಗೆ ಯಾರು ನಾಯಕಿಯಾಗಲಿದ್ದಾರೆ ಎನ್ನುವ ಚರ್ಚೆ ಜೋರಾಗಿ ನಡೆಯುತ್ತಿದೆ. ಮೂಲಗಳ ಪ್ರಕಾರ ನಟಿ ಕೀರ್ತಿ ಸುರೇಶ್ ರಾಮ್ ಚರಣ್ ಜೊತೆ ರೊಮ್ಯಾನ್ಸ್ ಮಾಡಲಿದ್ದಾರೆ ಎಂದು ಹೇಳಲಾಗುತ್ತಿದೆ.
ಆದರೆ ಈ ಬಗ್ಗೆ ಸಿನಿಮಾತಂಡ ಅಥವಾ ಕೀರ್ತಿ ಸುರೇಶ್ ಎಲ್ಲಿಯೂ ಹೇಳಿಕೊಂಡಿಲ್ಲ. ಕೀರ್ತಿ ಸುರೇಶ್ ಅಥವಾ ಕಿಯಾರ ಅಡ್ವಾನಿ ಇಬ್ಬರಲ್ಲಿ ಒಬ್ಬರು ಕಾಣಿಸಿಕೊಳ್ಳಲಿದ್ದಾರೆ ಎನ್ನುವ ಮಾತು ಕೇಳಿಬರುತ್ತಿದೆ. ಆದರೆ ಎಂದು ಇನ್ನೂ ಫೈನಲ್ ಆಗಿಲ್ಲ. ಕೀರ್ತಿ ಸುರೇಶ್ ಕಾಣಿಸಿಕೊಳ್ಳುವುದು ಬಹುತೇಕ ಖಚಿತ ಎಂದು ಹೇಳಲಾಗುತ್ತಿದೆ.
ಕೀರ್ತಿ ಸುರೇಶ್ ಸದ್ಯ ರಜನಿಕಾಂತ್ ಅಭಿನಯದ ಅಣ್ಣಾತೆ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಜೊತೆಗೆ ಮಹೇಶ್ ಬಾಬು ಸಿನಿಮಾದಲ್ಲಿಯೂ ನಟಿಸಲಿದ್ದಾರೆ ಎಂದು ಹೇಳಲಾಗುತ್ತಿದೆ. ಇದೀಗ ರಾಮ್ ಚರಣ್ ಗೂ ನಾಯಕಿಯಾಗಲಿದ್ದಾರೆ ಎನ್ನುವ ಮಾತು ಹರಿದಾಡುತ್ತಿದೆ. ಇದು ನಿಜವೇ ಆದರೆ ರಾಮ್ ಚರಣ್ ಅಭಿಮಾನಿಗಳ ಸಂತಸ ಇಮ್ಮಡಿಯಾಗಲಿದೆ.