Don't Miss!
- Lifestyle ನರಿ ಮತ್ತು ಕೋಳಿಗೂ ಮೂರ್ಖರ ದಿನಕ್ಕೂ ಇದೆ ನಂಟು..! ಏನದು.?
- News RBI: ಬ್ಯಾಂಕ್ ಕೆಲಸ ಮುಗಿದಿಲ್ವಾ? ಭಯ ಬೇಡ ಮಾರ್ಚ್ 30, 31ಕ್ಕೂ ಓಪನ್ ಇರುತ್ತೆ ಆರ್ಬಿಐ ಕಚೇರಿಗಳು!
- Automobiles ಶಿಯೋಮಿಯ ಈ ಎಲೆಕ್ಟ್ರಿಕ್ ಕಾರು ಸ್ಮಾರ್ಟ್ಫೋನ್ಗಳಂತೆ ಅಗ್ಗದ ಬೆಲೆ: ರೇಂಜ್ ಕೇಳಿದ್ರೆ ತಲೆ ತಿರುಗುತ್ತೆ!
- Technology ಈ Amoled ಡಿಸ್ಪ್ಲೇ ಫೋನ್ ಬೆಲೆಯಲ್ಲಿ ಭಾರೀ ಇಳಿಕೆ!..ಈ ಆಫರ್ಗೆ ನೀವು ಫಿದಾ ಆಗ್ತೀರಾ!
- Finance ಮೊದಲ ಬಾರಿಗೆ ಅಂಬಾನಿ ಅದಾನಿ ಸೇರಿ ವ್ಯಾಪಾರ ಒಪ್ಪಂದ, ಇಲ್ಲಿದೆ ಒಪ್ಪಂದ ವಿವರ
- Sports IPL 2024: ವಿರಾಟ್ ಕೊಹ್ಲಿ ಕೆಕೆಆರ್ ಡಗೌಟ್ ನೋಡಿದ್ರೆ ಉರಿದು ಬೀಳ್ತಾರೆ; ಆರ್ಸಿಬಿ ಮಾಜಿ ಕ್ರಿಕೆಟಿಗ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಜ್ಯೂನಿಯರ್ ಎನ್ಟಿಆರ್ 30ನೇ ಸಿನಿಮಾ ನಿರ್ದೇಶಕ ಬದಲು!
ಆರ್ಆರ್ಆರ್ ಸಿನಿಮಾದ ಚಿತ್ರೀಕರಣ ಅಂತಿಮ ಹಂತಕ್ಕೆ ಬರುತ್ತಿದ್ದಂತೆ ಮುಂದಿನ ಪ್ರಾಜೆಕ್ಟ್ ಮೇಲೆ ಚಿತ್ತ ನೆಟ್ಟಿದ್ದಾರೆ ಜೂ.ಎನ್ಟಿಆರ್.
ಆರ್ಆರ್ಆರ್ ನಂತರ ಜೂ.ಎನ್ಟಿಆರ್ ನಟಿಸುವ ಸಿನಿಮಾ ಅವರ ವೃತ್ತಿ ಬದುಕಿನ ಮೂವತ್ತನೇ ಸಿನಿಮಾ ಆಗಿರಲಿದ್ದು, ಆ ಸಿನಿಮಾಕ್ಕಾಗಿ ಸೂಪರ್-ಡೂಪರ್ ಹಿಟ್ ನಿರ್ದೇಶಕರೊಬ್ಬರ ಜೊತೆ ಕೈ ಜೋಡಿಸಲಿದ್ದಾರೆ ಆದರೆ ಅಂತಿಮ ಹಂತದಲ್ಲಿ ನಿರ್ದೇಶಕನ ಬದಲಾವಣೆ ಆಗಿದೆ ಎನ್ನಲಾಗುತ್ತಿದೆ.
ನಿರ್ದೇಶಕನಾಗಿ ಬಹುತೇಕ ಹಿಟ್ ಸಿನಿಮಾಗಳನ್ನೇ ನೀಡಿರುವ ತ್ರಿವಿಕ್ರಮ್ ಅವರು ಜೂ.ಎನ್ಟಿಆರ್ ಅವರ 30ನೇ ಸಿನಿಮಾ ನಿರ್ದೇಶನ ಮಾಡಲಿದ್ದಾರೆ ಎನ್ನಲಾಗಿತ್ತು. ಆದರೆ ಹಠಾತ್ ಆಗಿ ತ್ರಿವಿಕ್ರಮ್ ಜಾಗಕ್ಕೆ ನಿರ್ದೇಶಕ ಕೊರಟಾಲ ಶಿವ ಬಂದಿದ್ದಾರೆ.
ಕೊರಟಾಲ ಶಿವ ನಿರ್ದೇಶನ ಮಾಡಲಿದ್ದಾರೆ
ಜೂ.ಎನ್ಟಿಆರ್ ನಟಿಸುತ್ತಿರುವ 30 ನೇ ಸಿನಿಮಾವನ್ನು ನಿರ್ದೇಶಕ ಕೊರಟಾಲ ಶಿವ ನಿರ್ದೇಶನ ಮಾಡಲಿದ್ದಾರೆ. ಈ ಹಿಂದೆ ಜೂ ಎನ್ಟಿಆರ್ಗಾಗಿ 'ಜನತಾ ಗ್ಯಾರೆಜ್' ಸಿನಿಮಾವನ್ನು ಕೊರಟಾಲ ಶಿವ ನಿರ್ದೇಶನ ಮಾಡಿದ್ದರು. ಆ ಸಿನಿಮಾ ಸೂಪರ್ ಹಿಟ್ ಆಗಿತ್ತು.
ಜೂ.ಎನ್ಟಿಆರ್ ಸಿನಿಮಾ ನಿರ್ದೇಶನ ಮಾಡುತ್ತಿದ್ದಾರೆ
ತಾವು ಮತ್ತೊಮ್ಮೆ ಜೂ.ಎನ್ಟಿಆರ್ ಸಿನಿಮಾವನ್ನು ನಿರ್ದೇಶನ ಮಾಡುತ್ತಿರುವ ಖುಷಿಯ ಸಂಗತಿಯನ್ನು ಕೊರಟಾಲ ಶಿವ ಅವರು ಟ್ವಿಟ್ಟರ್ನಲ್ಲಿ ಹಂಚಿಕೊಂಡಿದ್ದಾರೆ. ಈ ಸಿನಿಮಾವನ್ನು ಜೂ.ಎನ್ಟಿಆರ್ ಅವರ ಸಹೋದರ ಕಲ್ಯಾಣ್ ರಾಮ್ ಅವರೇ ನಿರ್ಮಾಣ ಮಾಡಲಿದ್ದಾರೆ.
ಮೆಗಾಸ್ಟಾರ್ ಚಿರಂಜೀವಿ ಸಿನಿಮಾ ನಿರ್ದೇಶಿಸುತ್ತಿರುವ ಶಿವ
ಮೆಗಾಸ್ಟಾರ್ ಚಿರಂಜೀವಿ ಮತ್ತು ರಾಮ್ಚರಣ್ ತೇಜ ಒಟ್ಟಿಗೆ ಅಭಿನಯಿಸುತ್ತಿರುವ 'ಆಚಾರ್ಯ' ಸಿನಿಮಾ ನಿರ್ದೇಶಿಸುತ್ತಿರುವ ಕೊರಟಾಲ ಶಿವ ಈ ಹಿಂದೆ, ಪ್ರಭಾಸ್ ನಟನೆಯ 'ಮಿರ್ಚಿ', ಮಹೇಶ್ ಬಾಬು ನಟನೆಯ 'ಶ್ರೀಮಂತುಡು', 'ಭರತ್ ಅನೆ ನೇನು' ಸಿನಿಮಾಗಳನ್ನು ನಿರ್ದೇಶಿಸಿದ್ದರು. 'ಆಚಾರ್ಯ' ಸಿನಿಮಾದ ಬಿಡುಗಡೆ ಬಳಿಕ ಜೂ.ಎನ್ಟಿಆರ್ ಜೊತೆಗಿನ ಸಿನಿಮಾದ ಚಿತ್ರೀಕರಣ ಪ್ರಾರಂಭವಾಗಲಿದೆ. ಆ ವೇಳೆಗೆ ಜೂ.ಎನ್ಟಿಆರ್ ಅವರು ಆರ್ಆರ್ಆರ್ ಸಿನಿಮಾ ಚಿತ್ರೀಕರಣ ಮುಗಿಸಿರುತ್ತಾರೆ.
Recommended Video
ಪ್ರಶಾಂತ್ ನೀಲ್ ಸಿನಿಮಾದಲ್ಲಿ ನಟಿಸಬೇಕಿತ್ತು ಜೂ.ಎನ್ಟಿಆರ್
ಕರ್ನಾಟಕದ ಪ್ರಶಾಂತ್ ನೀಲ್ ನಿರ್ದೇಶನದ ಸಿನಿಮಾದಲ್ಲಿ ಜೂ.ಎನ್ಟಿಆರ್ ನಟಿಸಲಿದ್ದಾರೆ ಎನ್ನಲಾಗಿತ್ತು, ಸಿನಿಮಾಕ್ಕೆ 'ನ್ಯೂಕ್ಲಿಯರ್' ಎಂಬ ಹೆಸರು ಸಹ ಫಿಕ್ಸ್ ಆಗಿತ್ತು. ಆದರೆ ಪ್ರಾಜೆಕ್ಟ್ ಮುಂದಕ್ಕೆ ಹೋಯಿತು. ಇದೀಗ ಪ್ರಶಾಂತ್ ನೀಲ್ ಅವರು ಪ್ರಭಾಸ್ ನಟನೆಯ 'ಸಲಾರ್' ಸಿನಿಮಾ ನಿರ್ದೇಶನ ಮಾಡುತ್ತಿದ್ದಾರೆ.