Don't Miss!
- Automobiles ಸಾಮಾನ್ಯರಂತೆ ಹಳ್ಳಿಯಲ್ಲಿರುವ ದೇಶದ 55ನೇ ಶ್ರೀಮಂತ ಶ್ರೀಧರ್ ವೆಂಬು: ಕಚೇರಿಗೆ ಹೋಗಲು ಎಲೆಕ್ಟ್ರಿಕ್ ಆಟೋ ಖರೀದಿ!
- News Helicopters Crash: ಸೇನೆಯ ಎರಡು ಹೆಲುಕಾಪ್ಟರ್ ಡಿಕ್ಕಿ: 10 ಜನರ ಸಾವು
- Finance ಬೆಂಗಳೂರಿನಲ್ಲಿ ಈ ಜಾಗದಲ್ಲಿ ಸೈಟು ಖರೀದಿಸಬೇಡಿ: BDAಯಿಂದ 279 ಅಕ್ರಮ ಬಡಾವಣೆ ಪತ್ತೆ
- Technology Google Chrome: ಗೂಗಲ್ ಕ್ರೋಮ್ ಬಳಕೆದಾರರು ಹ್ಯಾಕಿಂಗ್ ಅಪಾಯದಲ್ಲಿ! ಸುರಕ್ಷಿತವಾಗಿರೋದು ಹೇಗೆ?
- Sports IPL 2024: ವಿರಾಟ್ ಕೊಹ್ಲಿ ವಿವಾದಾತ್ಮಕ ಔಟ್; ಅಂಪೈರಿಂಗ್ ವಿರುದ್ಧ ಕೆಂಡಕಾರಿದ ಮೊಹಮ್ಮದ್ ಕೈಫ್!
- Lifestyle ಮನೆಯಲ್ಲಿ ಘಮ ಘಮಿಸುವ ಮಲ್ಲಿಗೆ ಗಿಡ ಬೆಳೆಸೋದು ಹೇಗೆ..? ಇಲ್ಲಿದೆ ಮಾಹಿತಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಪ್ರಭಾಸ್ ಗೆ ನಾಯಕಿಯಾಗಿ ಆಯ್ಕೆಯಾಗಿದ್ದೀರಿ' ಎಂದು ನಂಬಿಸಿ ಖ್ಯಾತ ನಟಿಯ ಕಿಡ್ನಾಪ್
ಟಾಲಿವುಡ್ ನ ಸ್ಟಾರ್ ನಟ ಪ್ರಭಾಸ್ ಜೊತೆ ನಟಿಸುವ ಅವಕಾಶ ಸಿಗುತ್ತೆ ಎಂದರೆ ಯಾವ ನಟಿಯರು ಮಿಸ್ ಮಾಡಿಕೊಳ್ಳುವುದಿಲ್ಲ. ಹಾಗೆ ಪ್ರಭಾಸ್ ಗೆ ನಾಯಕಿಯಾಗಿ ಕಾಣಿಸಿಕೊಳ್ಳುವ ಅವಕಾಶ ಸಿಕ್ಕಿದೆ ಎಂದು ನಂಬಿ ಮೋಸ ಹೋದ ಬಾಲಿವುಡ್ ನ ನಟಿ ಈಗ ಕಾಣೆಯಾಗಿದ್ದು, ಕಿಡ್ನಾಪ್ ಆಗಿರುವ ಶಂಕೆ ವ್ಯಕ್ತವಾಗಿದೆ.
ಮೋಸ ಹೋದ ನಟಿ ತೆಲುಗಿನ ರಾಹು ಸಿನಿಮಾದ ಖ್ಯಾತಿಯ ನಾಯಕಿ ನಟಿ ಕೃತಿ ಗರ್ಗ್. ಅರ್ಜುನ್ ರೆಡ್ಡಿ ಖ್ಯಾತಿಯ ನಿರ್ದೇಶಕ ಸಂದೀಪ್ ರೆಡ್ಡಿ ವಾಂಗ ಹೆಸರಿನಲ್ಲಿ ನಟಿ ಕೃತಿಗೆ ಫೋನ್ ಮಾಡಿ ಮೋಸ ಮಾಡಲಾಗಿದೆ ಎನ್ನುವ ವಿಚಾರ ಕೇಳಿ ಬರುತ್ತಿದೆ. "ನಟ ಪ್ರಭಾಸ್ ಜೊತೆ ನಟಿಸುವ ಅವಕಾಶ ಸಿಕ್ಕಿದೆ. ನೀವು ತುಂಬ ಅದ್ಭುತವಾಗಿ ನಟಿಸುತ್ತೀರಾ. ನಿಮ್ಮಂತ ನಟಿ ನಮ್ಮ ಸಿನಿಮಾಗೆ ಬೇಕು. ಚಿತ್ರದಕಥೆ ಬಗ್ಗೆ ಮಾತನಾಡಬೇಕು ಬನ್ನಿ" ಎಂದು ಕೃತಿಗೆ ಫೋನ್ ಮಾಡಿದ ವ್ಯಕ್ತಿ ಹೇಳಿದ್ದಾರೆ.
ಲೆಜೆಂಡರಿ ನಿರ್ದೇಶಕರ ಮಗನ ಜೊತೆ ಅನುಷ್ಕಾ ಶೆಟ್ಟಿ ಮದುವೆ?
ಈ ವಿಚಾರವನ್ನು 'ರಾಹು' ಖ್ಯಾತಿಯ ನಿರ್ದೇಶಕ ಸುಬ್ಬು ವೇದುಲ ಬಳಿಯೂ ಕೇಳಿಕೊಂಡಿದ್ದಾರೆ. ಅಲ್ಲದೆ ಪ್ರಭಾಸ್ ಜೊತೆ ನಟಿಸುವ ಅವಕಾಶವನ್ನು ಕಳೆದುಕೊಳ್ಳಬಾರದು ಎಂದು ಕೃತಿ ಸೀದಾ ಕರೆ ಮಾಡಿದ ನಿರ್ದೇಶಕರ ಬಳಿ ಮಾತನಾಡಲು ಹೋಗಿದ್ದಾರೆ. ಅದೆ ಕೊನೆ ಆನಂತರ ಕೃತಿ ಯಾರ ಫೋನಿಗೂ ಸಿಕ್ಕಿಲ್ಲ. ಕುಟುಂಬದವರು ಮತ್ತು ಸ್ನೇಹಿತರು ಕರೆ ಮಾಡಿದರೆ ಮೊಬೈಲ್ ಸ್ವಿಚ್ ಆಫ್ ಆಗಿದೆಯಂತೆ.
ಕೃತಿ ಸಂಪರ್ಕಕ್ಕೆ ಸಿಗದೆ ಇರುವುದು ಕುಟುಂಬದವರಲ್ಲಿ ಆತಂಕ ಮನೆಮಾಡಿದೆ. ಕೃತಿಯನ್ನು ಅಪಹರಣ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ಈ ಸಂಬಂಧ ನಿರ್ದೇಶಕ ಸುಬ್ಬು ದೂರು ದಾಖಲಿಸಿದ್ದಾರೆ. ಹೈದರಾಬಾದ್ ನ ಪಂಜಾಗುಟ್ಟ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.