Don't Miss!
- News ಉಕ್ರೇನ್ ವಿರುದ್ಧ ರಷ್ಯಾ ಗಂಭೀರ ಆರೋಪ!
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಪ್ರಭಾಸ್ ಗೆ ನಾಯಕಿಯಾಗಿ ಆಯ್ಕೆಯಾಗಿದ್ದೀರಿ' ಎಂದು ನಂಬಿಸಿ ಖ್ಯಾತ ನಟಿಯ ಕಿಡ್ನಾಪ್
ಟಾಲಿವುಡ್ ನ ಸ್ಟಾರ್ ನಟ ಪ್ರಭಾಸ್ ಜೊತೆ ನಟಿಸುವ ಅವಕಾಶ ಸಿಗುತ್ತೆ ಎಂದರೆ ಯಾವ ನಟಿಯರು ಮಿಸ್ ಮಾಡಿಕೊಳ್ಳುವುದಿಲ್ಲ. ಹಾಗೆ ಪ್ರಭಾಸ್ ಗೆ ನಾಯಕಿಯಾಗಿ ಕಾಣಿಸಿಕೊಳ್ಳುವ ಅವಕಾಶ ಸಿಕ್ಕಿದೆ ಎಂದು ನಂಬಿ ಮೋಸ ಹೋದ ಬಾಲಿವುಡ್ ನ ನಟಿ ಈಗ ಕಾಣೆಯಾಗಿದ್ದು, ಕಿಡ್ನಾಪ್ ಆಗಿರುವ ಶಂಕೆ ವ್ಯಕ್ತವಾಗಿದೆ.
ಮೋಸ ಹೋದ ನಟಿ ತೆಲುಗಿನ ರಾಹು ಸಿನಿಮಾದ ಖ್ಯಾತಿಯ ನಾಯಕಿ ನಟಿ ಕೃತಿ ಗರ್ಗ್. ಅರ್ಜುನ್ ರೆಡ್ಡಿ ಖ್ಯಾತಿಯ ನಿರ್ದೇಶಕ ಸಂದೀಪ್ ರೆಡ್ಡಿ ವಾಂಗ ಹೆಸರಿನಲ್ಲಿ ನಟಿ ಕೃತಿಗೆ ಫೋನ್ ಮಾಡಿ ಮೋಸ ಮಾಡಲಾಗಿದೆ ಎನ್ನುವ ವಿಚಾರ ಕೇಳಿ ಬರುತ್ತಿದೆ. "ನಟ ಪ್ರಭಾಸ್ ಜೊತೆ ನಟಿಸುವ ಅವಕಾಶ ಸಿಕ್ಕಿದೆ. ನೀವು ತುಂಬ ಅದ್ಭುತವಾಗಿ ನಟಿಸುತ್ತೀರಾ. ನಿಮ್ಮಂತ ನಟಿ ನಮ್ಮ ಸಿನಿಮಾಗೆ ಬೇಕು. ಚಿತ್ರದಕಥೆ ಬಗ್ಗೆ ಮಾತನಾಡಬೇಕು ಬನ್ನಿ" ಎಂದು ಕೃತಿಗೆ ಫೋನ್ ಮಾಡಿದ ವ್ಯಕ್ತಿ ಹೇಳಿದ್ದಾರೆ.
ಲೆಜೆಂಡರಿ ನಿರ್ದೇಶಕರ ಮಗನ ಜೊತೆ ಅನುಷ್ಕಾ ಶೆಟ್ಟಿ ಮದುವೆ?
ಈ ವಿಚಾರವನ್ನು 'ರಾಹು' ಖ್ಯಾತಿಯ ನಿರ್ದೇಶಕ ಸುಬ್ಬು ವೇದುಲ ಬಳಿಯೂ ಕೇಳಿಕೊಂಡಿದ್ದಾರೆ. ಅಲ್ಲದೆ ಪ್ರಭಾಸ್ ಜೊತೆ ನಟಿಸುವ ಅವಕಾಶವನ್ನು ಕಳೆದುಕೊಳ್ಳಬಾರದು ಎಂದು ಕೃತಿ ಸೀದಾ ಕರೆ ಮಾಡಿದ ನಿರ್ದೇಶಕರ ಬಳಿ ಮಾತನಾಡಲು ಹೋಗಿದ್ದಾರೆ. ಅದೆ ಕೊನೆ ಆನಂತರ ಕೃತಿ ಯಾರ ಫೋನಿಗೂ ಸಿಕ್ಕಿಲ್ಲ. ಕುಟುಂಬದವರು ಮತ್ತು ಸ್ನೇಹಿತರು ಕರೆ ಮಾಡಿದರೆ ಮೊಬೈಲ್ ಸ್ವಿಚ್ ಆಫ್ ಆಗಿದೆಯಂತೆ.
ಕೃತಿ ಸಂಪರ್ಕಕ್ಕೆ ಸಿಗದೆ ಇರುವುದು ಕುಟುಂಬದವರಲ್ಲಿ ಆತಂಕ ಮನೆಮಾಡಿದೆ. ಕೃತಿಯನ್ನು ಅಪಹರಣ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ಈ ಸಂಬಂಧ ನಿರ್ದೇಶಕ ಸುಬ್ಬು ದೂರು ದಾಖಲಿಸಿದ್ದಾರೆ. ಹೈದರಾಬಾದ್ ನ ಪಂಜಾಗುಟ್ಟ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.