Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರಾಷ್ಟ್ರ ಪ್ರಶಸ್ತಿ ಬಂದ ಖುಷಿಯನ್ನು ಹಂಚಿಕೊಂಡ ಮಹೇಶ್ ಬಾಬು ಮತ್ತು ನಾನಿ
67ನೇ ರಾಷ್ಟ್ರೀಯ ಸಿನಿಮಾ ಪ್ರಶಸ್ತಿ ನಿನ್ನೆ (ಮಾರ್ಚ್ 22) ಘೋಷಣೆ ಆಗಿದೆ. ವಿಶ್ವದಲ್ಲಿಯೇ ಅತಿ ಹೆಚ್ಚು ಸಿನಿಮಾ ಉತ್ಪಾದಿಸುವ ಭಾರತದಲ್ಲಿ ಹಲವಾರು ಸಿನಿಮಾ ಸಂಬಂಧಿ ಪ್ರಶಸ್ತಿಗಳಿವೆ ಆದರೆ ರಾಷ್ಟ್ರೀಯ ಸಿನಿಮಾ ಪ್ರಶಸ್ತಿಗೆ ವಿಶೇಷ ಗೌರವಿದೆ.
ಕಳೆದ ವರ್ಷವೇ ಅನೌನ್ಸ್ ಆಗಬೇಕಿತ್ತು. ಆದರೆ ಕೋವಿಡ್ ಕಾರಣ ಮುಂದೂಡಲಾಗಿತ್ತು. ಅತ್ಯುತ್ತಮ ನಟ ಪ್ರಶಸ್ತಿ ಮನೋಜ್ ಬಾಜಪೇಯಿ ಮತ್ತು ಧನುಷ್ ಪಾಲಾದರೆ ಅತ್ಯುತ್ತಮ ನಟಿ ಪ್ರಶಸ್ತಿ ಕಂಗನಾ ರಣಾವತ್ ಪಾಲಾಗಿದೆ. ಕಂಗನಾ 4ನೇ ಬಾರಿ ರಾಷ್ಟ್ರ ಪ್ರಶಸ್ತಿ ಗೆದ್ದು ಬೀಗಿದ್ದಾರೆ.
67ನೇ ರಾಷ್ಟ್ರೀಯ ಸಿನಿಮಾ ಪ್ರಶಸ್ತಿ ಪೂರ್ಣ ಪಟ್ಟಿ ಇಲ್ಲಿದೆ
ಪ್ರಶಸ್ತಿ ಗೆದ್ದ ಖುಷಿಯನ್ನು ಕಲಾವಿದರು ಮತ್ತು ಸಿನಿಮಾತಂಡ ಹಂಚಿಕೊಳ್ಳುತ್ತಿದ್ದಾರೆ. ತೆಲುಗು ನಟ ಮಹೇಶ್ ಬಾಬು ಅಭಿನಯದ ಮಹರ್ಷಿ ಚಿತ್ರಕ್ಕೆ ಅತ್ಯುತ್ತಮ ಮನರಂಜನಾತ್ಮಕ ಸಿನಿಮಾ ಪ್ರಶಸ್ತಿ ಸಿಕ್ಕಿದೆ. ಮತ್ತು ಅತ್ಯುತ್ತಮ ನೃತ್ಯ ಸಂಯೋಜನೆ ವಿಭಾಗದಲ್ಲೂ ಪ್ರಶಸ್ತಿ ಗೆದ್ದುಕೊಂಡಿದೆ.
ತಮ್ಮ ಸಿನಿಮಾಗೆ ಎರಡು ಪ್ರಶಸ್ತಿ ಬಂದಿರುವ ಬಗ್ಗೆ ಮಹೇಶ್ ಬಾಬು ಸಾಮಾಜಿಕ ಜಾಲತಾಣದಲ್ಲಿ ಸಂತಸ ಹಂಚಿಕೊಂಡಿದ್ದಾರೆ. ತನ್ನ ವೃತ್ತಿ ಜೀವನದಲ್ಲಿ ಮಹರ್ಷಿ ವಿಶೇಷ ಸಿನಿಮಾವಾಗಿದೆ ಎಂದು ಹೇಳಿದ್ದಾರೆ. ಪ್ರತಿಷ್ಠಿತ ಮನ್ನಣೆ ಪಡೆದಿದ್ದಕ್ಕೆ ಗೌರವ ಎಂದಿದ್ದಾರೆ. ನಿರ್ದೇಶಕ ವಂಶಿ, ಇಡೀ ಮಹರ್ಷಿತಂಡಕ್ಕೆ ಹಾಗೂ ಪ್ರೇಕ್ಷಕರಿಗೆ ಧನ್ಯವಾದ ತಿಳಿಸಿದ್ದಾರೆ.
Recommended Video
ಇನ್ನು ಜರ್ಸಿ ಸಿನಿಮಾಗೆ ಪ್ರಶಸ್ತಿ ಬಂದ ಸಂತಸವನ್ನು ನಾನಿ ವಿಡಿಯೋ ಮೂಲಕ ಹಂಚಿಕೊಂಡಿದ್ದಾರೆ. ಶ್ಯಾಮ್ ಸಿಂಗ ರಾಯ್ ಸಿನಿಮಾ ಚಿತ್ರೀಕರಣದಲ್ಲಿದ್ದ ನಾನಿ, 'ನಮ್ಮ ನಿರ್ಮಾಣದಲ್ಲಿ ಬಂದ Awe ಸಿನಿಮಾ ರಾಷ್ಟ್ರಪ್ರಶಸ್ತಿ ಗೆದ್ದಿತ್ತು. ಈಗ ಜರ್ಸಿಗೆ ಬಂದಿರುವುದು ಮತ್ತಷ್ಟು ಕಿಕ್ ನೀಡಿದೆ. ಮುಂಬರುವ ವರ್ಷಗಳಲ್ಲಿ ತೆಲುಗು ಚಿತ್ರರಂಗ ಹೆಚ್ಚಿನ ಪ್ರಶಸ್ತಿ ಗೆಲ್ಲಬೇಕೆಂದು ಬಯಸುತ್ತೇನೆ' ಎಂದು ಹೇಳಿದ್ದಾರೆ.