Don't Miss!
- News ಬಕ್ರಾ ಮಾಡಲು ಇಲ್ಲಿಗೆ ಬಂದಿದ್ದೀರಾ?, ಬೆಳಗಾವಿಗೆ ನಿಮ್ಮ ಕೊಡುಗೆ ಏನು?: ಲಕ್ಷ್ಮೀ ಹೆಬ್ಬಾಳ್ಕರ್ ಪ್ರಶ್ನೆ
- Automobiles KTM Duke 125 ಬೆಲೆಗೆ ಯಾವೆಲ್ಲಾ ಬೈಕ್ಗಳು ಸಿಗುತ್ತೆ ಗೊತ್ತಾ?: ಪಲ್ಸರ್ನಿಂದ ಹಿಡಿದು MT 15 ವರೆಗೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Lifestyle ವಿಭಿನ್ನ ಶೈಲಿಯಲ್ಲಿ ಮೊಟ್ಟೆ ಸಾಂಬಾರ್ ಮಾಡಿ..! ಇಲ್ಲಿದೆ ಸಿಂಪಲ್ ಅಡುಗೆ
- Sports IPL 2024: ಕೆಕೆಆರ್ ವಿರುದ್ಧದ ಪಂದ್ಯಕ್ಕೂ ಮುನ್ನ ಕ್ರಿಕೆಟ್ ಬಿಟ್ಟು ಆರ್ಸಿಬಿ ಆಟಗಾರರು ಮಾಡಿದ್ದೇನು?
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಪ್ರೀತಿಯ ತಂದೆ ಕೃಷ್ಣ ಹುಟ್ಟುಹಬ್ಬಕ್ಕೆ ಮಹೇಶ್ ಬಾಬು ಹೃದಯಸ್ಪರ್ಶಿ ಸಂದೇಶ
ಟಾಲಿವುಡ್ ಪ್ರಿನ್ಸ್ ಮಹೇಶ್ ಬಾಬು ತಂದೆ, ಟಾಲಿವುಡ್ ನ ಎವರ್ ಗ್ರೀನ್ ಸೂಪರ್ ಸ್ಟಾರ್ ಶಿವ ರಾಮ ಕೃಷ್ಣ ಅವರಿಗೆ ಇಂದು ಹುಟ್ಟುಹಬ್ಬದ ಸಂಭ್ರಮ. 77ನೇ ವರ್ಷದ ಹುಟ್ಟುಹಬ್ಬ ಆಚರಿಸಕೊಳ್ಳುತ್ತಿರುವ ಕೃಷ್ಣ ಅವರಿಗೆ ಚಿತ್ರರಂಗದ ಗಣ್ಯರು ಮತ್ತು ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಶುಭಹಾರೈಸುತ್ತಿದ್ದಾರೆ.
Recommended Video
ಟಾಲಿವುಡ್ ಸ್ಟಾರ್ ನಟ ಮತ್ತು ನಿರ್ಮಾಪಕ ಕೃಷ್ಣ ಸುಮಾರು 350ಕ್ಕೂ ಹೆಚ್ಚು ಸಿನಿಮಾಗಳನ್ನು ಮಾಡಿದ್ದಾರೆ. ಲೆಜೆಂಡರಿ ಸ್ಟಾರ್ ಗೆ ಪುತ್ರ ಮಹೇಶ್ ಬಾಬು ಮತ್ತು ಪತ್ನಿ ನಮ್ರತಾ ಇಬ್ಬರು ಹೃದಯಸ್ಪರ್ಶಿ ಸಂದೇಶ ಕಳುಹಿಸಿದ್ದಾರೆ.
ಮಹೇಶ್ ಬಾಬು ಹೊಸ ಸಿನಿಮಾದ ಟೈಟಲ್ ಲೀಕ್: ಗರಂ ಆದ ಪ್ರಿನ್ಸ್
ಸಾಮಾಜಿಕ ಜಾಲತಾಣದಲ್ಲಿ ಅಪ್ಪನಿಗೆ ಹುಟ್ಟುಹಬ್ಬದ ಶುಭಾಶಯತಿಳಿಸಿದ್ದಾರೆ. ಅಪ್ಪನ ಜೊತೆ ಇರುವ ಹಳೆಯ ಫೋಟೋವೊಂದನ್ನು ಶೇರ್ ಮಾಡಿ "ನಾನು ಪ್ರಯತ್ನಿಸುತ್ತಿದ್ದೀನಿ. ನಾನು ನಿಮಗೆ ಎಲ್ಲದಕ್ಕೂ ಋಣಿಯಾಗಿದ್ದೀನಿ. ಹುಟ್ಟುಹಬ್ಬದ ಶುಭಾಶಯಗಳು ಅಪ್ಪ ನನ್ನ ಎವರ್ ಗ್ರೀನ್ ಸೂಪರ್ ಸ್ಟಾರ್" ಎಂದು ವಿಶ್ ಮಾಡಿದ್ದಾರೆ.
ಇನ್ನೂ ಮಹೇಶ್ ಪತ್ನಿ ನಮ್ರತಾ ಕೂಡ ಮಾವನ ಹುಟ್ಟುಹಬ್ಬಕ್ಕೆ ಪ್ರೀತಿಯ ಸಂದೇಶ ಕಳುಹಿಸಿದ್ದಾರೆ. ಸೂಪರ್ ಸ್ಟಾರ್, ಐಕಾನ್, ಲೆಜೆಂಡ್ ಮತ್ತು ಲಕ್ಷಾಂತರ ಜನರ ಸ್ಫೂರ್ತಿ..ಎಲ್ಲರಿಗೂ. ಆದರೆ ನನಗೆ ಅವರೊಬ್ಬರು ಪ್ರೀತಿಯ ತಂದೆ. ಯಾರು ನನ್ನ ಮತ್ತು ನನ್ನ ಕುಟುಂಬದ ಬಗ್ಗೆ ಮಾತನಾಡುತ್ತಾರೊ. ಆಗ ನನಗೆ ಸಲಹೆ ಮತ್ತು ಪ್ರೀತಿ ತೋರಿಸಿ ನನ್ನ ಪರ ನಿಲ್ಲುವ ವ್ಯಕ್ತಿ. ಯಾವಾಗಲು ನನ್ನ ಪರ ಇರುವುದಕ್ಕೆ ನಾನು ಯಾವಾಗಲು ಕೃತಜ್ಞನಾಗಿದ್ದೇನೆ. ಹುಟ್ಟುಹಬ್ಬದ ಶುಭಾಶಗಳು ಮಾವಯ್ಯಗಾರು. ನಿಮ್ಮನ್ನು ಮಾವನಾಗಿ ಪಡೆಯಲು ನಾನು ನಿಜಕ್ಕು ಪುಣ್ಯ ಮಾಡಿದ್ದೀನಿ" ಎಂದು ಬರೆದುಕೊಂಡಿದ್ದಾರೆ.
ಮಹೇಶ್ ಬಾಬು ಮಕ್ಕಳು ಸಹ ತಾತನಿಗೆ ಪ್ರೀತಿಯ ಶುಭಾಶಯ ತಿಳಿಸಿದ್ದಾರೆ. 2009ರಲ್ಲಿ ಭಾರತ ಸರ್ಕಾರ ಕೃಷ್ಣ ಅವರಿಗೆ ಪದ್ಮ ಭೂಷಣ ಪ್ರಶಸ್ತಿ ನೀಡಿ ಗೌರವಿಸಿದೆ. ಅಪ್ಪನ ಹುಟ್ಟುಹಬ್ಬದ ಸಂಭ್ರಮದಲ್ಲಿಯೆ ಮಹೇಶ್ ಅಭಿನಯದ ಮುಂದಿನ ಸಿನಿಮಾದ ಟೈಟಲ್ ಮತ್ತು ಪೋಸ್ಟರ್ ರಿಲೀಸ್ ಮಾಡಲಾಗಿದೆ. ಚಿತ್ರಕ್ಕೆ ಸರ್ಕಾರ ವಾರಿ ಪಾಟ ಎಂದು ಟೈಟಲ್ ಇಡಲಾಗಿದೆ.