Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಪ್ರೀತಿಯ ತಂದೆ ಕೃಷ್ಣ ಹುಟ್ಟುಹಬ್ಬಕ್ಕೆ ಮಹೇಶ್ ಬಾಬು ಹೃದಯಸ್ಪರ್ಶಿ ಸಂದೇಶ
ಟಾಲಿವುಡ್ ಪ್ರಿನ್ಸ್ ಮಹೇಶ್ ಬಾಬು ತಂದೆ, ಟಾಲಿವುಡ್ ನ ಎವರ್ ಗ್ರೀನ್ ಸೂಪರ್ ಸ್ಟಾರ್ ಶಿವ ರಾಮ ಕೃಷ್ಣ ಅವರಿಗೆ ಇಂದು ಹುಟ್ಟುಹಬ್ಬದ ಸಂಭ್ರಮ. 77ನೇ ವರ್ಷದ ಹುಟ್ಟುಹಬ್ಬ ಆಚರಿಸಕೊಳ್ಳುತ್ತಿರುವ ಕೃಷ್ಣ ಅವರಿಗೆ ಚಿತ್ರರಂಗದ ಗಣ್ಯರು ಮತ್ತು ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಶುಭಹಾರೈಸುತ್ತಿದ್ದಾರೆ.
Recommended Video
ಟಾಲಿವುಡ್ ಸ್ಟಾರ್ ನಟ ಮತ್ತು ನಿರ್ಮಾಪಕ ಕೃಷ್ಣ ಸುಮಾರು 350ಕ್ಕೂ ಹೆಚ್ಚು ಸಿನಿಮಾಗಳನ್ನು ಮಾಡಿದ್ದಾರೆ. ಲೆಜೆಂಡರಿ ಸ್ಟಾರ್ ಗೆ ಪುತ್ರ ಮಹೇಶ್ ಬಾಬು ಮತ್ತು ಪತ್ನಿ ನಮ್ರತಾ ಇಬ್ಬರು ಹೃದಯಸ್ಪರ್ಶಿ ಸಂದೇಶ ಕಳುಹಿಸಿದ್ದಾರೆ.
ಮಹೇಶ್ ಬಾಬು ಹೊಸ ಸಿನಿಮಾದ ಟೈಟಲ್ ಲೀಕ್: ಗರಂ ಆದ ಪ್ರಿನ್ಸ್
ಸಾಮಾಜಿಕ ಜಾಲತಾಣದಲ್ಲಿ ಅಪ್ಪನಿಗೆ ಹುಟ್ಟುಹಬ್ಬದ ಶುಭಾಶಯತಿಳಿಸಿದ್ದಾರೆ. ಅಪ್ಪನ ಜೊತೆ ಇರುವ ಹಳೆಯ ಫೋಟೋವೊಂದನ್ನು ಶೇರ್ ಮಾಡಿ "ನಾನು ಪ್ರಯತ್ನಿಸುತ್ತಿದ್ದೀನಿ. ನಾನು ನಿಮಗೆ ಎಲ್ಲದಕ್ಕೂ ಋಣಿಯಾಗಿದ್ದೀನಿ. ಹುಟ್ಟುಹಬ್ಬದ ಶುಭಾಶಯಗಳು ಅಪ್ಪ ನನ್ನ ಎವರ್ ಗ್ರೀನ್ ಸೂಪರ್ ಸ್ಟಾರ್" ಎಂದು ವಿಶ್ ಮಾಡಿದ್ದಾರೆ.
ಇನ್ನೂ ಮಹೇಶ್ ಪತ್ನಿ ನಮ್ರತಾ ಕೂಡ ಮಾವನ ಹುಟ್ಟುಹಬ್ಬಕ್ಕೆ ಪ್ರೀತಿಯ ಸಂದೇಶ ಕಳುಹಿಸಿದ್ದಾರೆ. ಸೂಪರ್ ಸ್ಟಾರ್, ಐಕಾನ್, ಲೆಜೆಂಡ್ ಮತ್ತು ಲಕ್ಷಾಂತರ ಜನರ ಸ್ಫೂರ್ತಿ..ಎಲ್ಲರಿಗೂ. ಆದರೆ ನನಗೆ ಅವರೊಬ್ಬರು ಪ್ರೀತಿಯ ತಂದೆ. ಯಾರು ನನ್ನ ಮತ್ತು ನನ್ನ ಕುಟುಂಬದ ಬಗ್ಗೆ ಮಾತನಾಡುತ್ತಾರೊ. ಆಗ ನನಗೆ ಸಲಹೆ ಮತ್ತು ಪ್ರೀತಿ ತೋರಿಸಿ ನನ್ನ ಪರ ನಿಲ್ಲುವ ವ್ಯಕ್ತಿ. ಯಾವಾಗಲು ನನ್ನ ಪರ ಇರುವುದಕ್ಕೆ ನಾನು ಯಾವಾಗಲು ಕೃತಜ್ಞನಾಗಿದ್ದೇನೆ. ಹುಟ್ಟುಹಬ್ಬದ ಶುಭಾಶಗಳು ಮಾವಯ್ಯಗಾರು. ನಿಮ್ಮನ್ನು ಮಾವನಾಗಿ ಪಡೆಯಲು ನಾನು ನಿಜಕ್ಕು ಪುಣ್ಯ ಮಾಡಿದ್ದೀನಿ" ಎಂದು ಬರೆದುಕೊಂಡಿದ್ದಾರೆ.
ಮಹೇಶ್ ಬಾಬು ಮಕ್ಕಳು ಸಹ ತಾತನಿಗೆ ಪ್ರೀತಿಯ ಶುಭಾಶಯ ತಿಳಿಸಿದ್ದಾರೆ. 2009ರಲ್ಲಿ ಭಾರತ ಸರ್ಕಾರ ಕೃಷ್ಣ ಅವರಿಗೆ ಪದ್ಮ ಭೂಷಣ ಪ್ರಶಸ್ತಿ ನೀಡಿ ಗೌರವಿಸಿದೆ. ಅಪ್ಪನ ಹುಟ್ಟುಹಬ್ಬದ ಸಂಭ್ರಮದಲ್ಲಿಯೆ ಮಹೇಶ್ ಅಭಿನಯದ ಮುಂದಿನ ಸಿನಿಮಾದ ಟೈಟಲ್ ಮತ್ತು ಪೋಸ್ಟರ್ ರಿಲೀಸ್ ಮಾಡಲಾಗಿದೆ. ಚಿತ್ರಕ್ಕೆ ಸರ್ಕಾರ ವಾರಿ ಪಾಟ ಎಂದು ಟೈಟಲ್ ಇಡಲಾಗಿದೆ.