Don't Miss!
- News ಮಠಗಳಿಗೆ ಭೇಟಿ ನೀಡಿ ಸ್ವಾಮೀಜಿಗಳ ಆಶೀರ್ವಾದ ಪಡೆದ ಡಾ. ಕೆ. ಸುಧಾಕರ್
- Lifestyle ಏಪ್ರಿಲ್ನಲ್ಲಿ 14 ದಿನ ರಜೆ, ಏಪ್ರಿಲ್ 1ಕ್ಕೆ ಬ್ಯಾಂಕ್ಗಳಿಗೆ ರಜೆ ಇರಲು ಕಾರಣವೇನು?
- Sports ರೋಹಿತ್ vs ಹಾರ್ದಿಕ್: ಸತತ ಸೋಲಿನ ನಡುವೆಯೇ ಮುಂಬೈ ಇಂಡಿಯನ್ಸ್ ಇಬ್ಭಾಗ!?
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮಹೇಶ್ ಬಾಬು ನಟನೆಯ ಸೂಪರ್ ಹಿಟ್ ಸಿನಿಮಾ ರೀ ರಿಲೀಸ್: ಅಪ್ಪು ಮೆಚ್ಚಿದ್ದ ಸಿನಿಮಾ ಇದು!
ಸೂಪರ್ ಸ್ಟಾರ್ ಮಹೇಶ್ ಬಾಬು ಸಿನಿಕರಿಯರ್ಗೆ ದೊಡ್ಡ ತಿರುವು ಕೊಟ್ಟ ಸಿನಿಮಾ 'ಒಕ್ಕಡು'. 2003ರಲ್ಲಿ ತೆರೆಕಂಡಿದ್ದ ಸಿನಿಮಾ ಹೊಸ ದಾಖಲೆ ಬರೆದಿತ್ತು. ಮಹೇಶ್ ಬಾಬು ಮಾಸ್ ಹೀರೊ ಆಗಿ ಅಭಿಮಾನಿಗಳ ಹೃದಯದಲ್ಲಿ ಸ್ಥಾನ ಪಡೆಯಲು ಕಾರಣವಾಗಿತ್ತು. ಈ ಚಿತ್ರವನ್ನು ಮತ್ತೆ ರೀ ರಿಲೀಸ್ ಮಾಡಲಾಗ್ತಿದೆ.
'ಒಕ್ಕಡು' ಚಿತ್ರ 20 ವರ್ಷ ಪೂರೈಸುತ್ತಿರುವ ಸಂದರ್ಭದಲ್ಲಿ ನಿರ್ಮಾಪಕರು ಈ ಚಿತ್ರವನ್ನು ಹೊಸ ರೂಪದಲ್ಲಿ ಪ್ರೇಕ್ಷಕರ ಮುಂದೆ ತರುವ ಪ್ರಯತ್ನ ಮಾಡುತ್ತಿದ್ದಾರೆ. ಜನವರಿ 7ಕ್ಕೆ ಚಿತ್ರವನ್ನು ಆಯ್ದು ಥಿಯೇಟರ್ಗಳಲ್ಲಿ 4K ವರ್ಷನ್ ಪ್ರದರ್ಶಿಸಲು ತೀರ್ಮಾನಿಸಲಾಗಿದೆ. ಈ ವರ್ಷ ಮಹೇಶ್ ಬಾಬು ಹುಟ್ಟುಹಬ್ಬದ ಸಂಭ್ರಮದಲ್ಲಿ 'ಪೋಕಿರಿ' ಸಿನಿಮಾ ರಿಲೀಸ್ ರಿಲೀಸ್ ಆಗಿ ಸದ್ದು ಮಾಡಿತ್ತು. ನಂತರ ಪವನ್ ಕಲ್ಯಾಣ್ ನಟನೆಯ 'ಜಲ್ಸಾ' ಸಿನಿಮಾ ಕೂಡ ಹೊಸ ರೂಪದಲ್ಲಿ ಪ್ರೇಕ್ಷಕರ ಮುಂದೆ ಬಂದಿತ್ತು.
'ಪುಷ್ಪ- 2' ಚಿತ್ರೀಕರಣ ಆರಂಭ.. ಮೇಕಿಂಗ್ ಸ್ಟಿಲ್ ಲೀಕ್: ಸರ್ಪ್ರೈಸ್ ಟೀಸರ್ ರಿಲೀಸ್ ಪ್ಲ್ಯಾನ್
ಟಾಲಿವುಡ್ನಲ್ಲಿ ಸೂಪರ್ ಹಿಟ್ ಸಿನಿಮಾಗಳನ್ನು ರೀ ರಿಲೀಸ್ ಮಾಡುವ ಟ್ರೆಂಡ್ ನಡೀತಿದೆ. ಅದೇ ಸಾಲಿಗೆ ಈಗ 'ಒಕ್ಕಡು' ಕೂಡ ಸೇರಿಕೊಳ್ತಿದೆ. ಗುಣಶೇಖರ್ ನಿರ್ದೇಶನದ ಈ ಆಕ್ಷನ್ ಎಂಟರ್ಟೈನರ್ ಚಿತ್ರದಲ್ಲಿ ಭೂಮಿಕಾ ಚಾವ್ಲಾ ನಾಯಕಿಯಾಗಿ ಮಿಂಚಿದ್ದರು. ಪ್ರಕಾಶ್ ರಾಜ್ ವಿಲನ್ ಆಗಿ ಅಬ್ಬರಿಸಿದ್ದರು. ಕಬ್ಬಡ್ಡಿ ಕ್ರೀಡೆಯನ್ನು ಹಿನ್ನೆಲೆಯಲ್ಲಿ ಇಟ್ಟುಕೊಂಡು ಚಿತ್ರವನ್ನು ಬಹಳ ಸೊಗಸಾಗಿ ಡಿಸೈನ್ ಮಾಡಿದ್ದರು. ಮಣಿಶರ್ಮ ಮ್ಯೂಸಿಕ್ ಚಿತ್ರಕ್ಕೆ ಪ್ಲಸ್ ಆಗಿತ್ತು. ಅವತ್ತಿನ ಕಾಲಕ್ಕೆ ಸಿನಿಮಾ ವಿತರಕರಿಗೆ 30 ಕೋಟಿ ರೂ. ಶೇರ್ ತಂದುಕೊಟ್ಟಿತ್ತು.
'ಒಕ್ಕಡು' ಸಿನಿಮಾ ಸಕ್ಸಸ್ ಕ್ರೇಜ್ ಹೇಗಿತ್ತು ಅಂದರೆ ಮುಂದೆ ಈ ಸಿನಿಮಾ ತಮಿಳು, ಕನ್ನಡ, ಬೆಂಗಾಳಿ, ಹಿಂದಿ, ಒಡಿಯಾ ಭಾಷೆಗಳಿಗೆ ರೀಮೆಕ್ ಆಗಿತ್ತು. ತಮಿಳಿನಲ್ಲಿ ದಳಪತಿ ವಿಜಯ್ 'ಗಿಲ್ಲಿ' ಹೆಸರಿನಲ್ಲಿ ಸಿನಿಮಾ ಮಾಡಿ ಗೆದ್ದರು. ಕನ್ನಡದಲ್ಲಿ ಪುನೀತ್ ರಾಜ್ಕುಮಾರ್ 'ಅಜಯ್' ಆಗಿ ಬಂದರು. ಆದರೆ ಅಷ್ಟಾಗಿ ಸಕ್ಸಸ್ ಸಿಕ್ಕಿರಲಿಲ್ಲ. ವಿಶೇಷ ಅಂದರೆ ಕನ್ನಡ ಹಾಗೂ ತಮಿಳಿನಲ್ಲೂ ಪ್ರಕಾಶ್ ರಾಜ್ ವಿಲನ್ ಆಗಿ ನಟಿಸಿದ್ದರು. ಒಟ್ಟಾರೆ 'ಒಕ್ಕಡು' ಸಿನಿಮಾ ರೀ ರಿಲೀಸ್ ವಿಚಾರ ಅಭಿಮಾನಿಗಳಿಗೆ ಸಂತಸ ತಂದಿದೆ.