Don't Miss!
- Automobiles ಜೀವದ ಗೆಳೆಯನಿಗೆ ಸರ್ಪ್ರೈಸ್ ಆಗಿ 'ಬೈಕ್' ಉಡುಗೊರೆ ನೀಡಿದ ವಧು.. ಆತನ ಸಂತೋಷಕ್ಕೆ ಪಾರವೇ ಇರಲಿಲ್ಲ!
- Finance 25ನೇ ವಯಸ್ಸಿನಲ್ಲಿ 25,000 ರೂ.ನಿಂದ 7,000 ಕೋಟಿ ಗಳಿಸಿದ ವ್ಯಕ್ತಿ ಬಗ್ಗೆ ತಿಳಿಯಿರಿ
- Lifestyle ಮೈ ತೂಕ ಕಡಿಮೆಯಾಗಲು ಈ ಪುದೀನಾ ನೀರು ಸಹಕಾರಿಯೇ? ಇದರ ಇತರ ಪ್ರಯೋಜನಗಳೇನು?
- News Poornachandra Tejaswi: ವಿಸ್ಮಯಲೋಕವನ್ನೇ ತೆರೆದಿಡುವ ತೇಜಸ್ವಿಯವರ ಪುಸ್ತಕಗಳು
- Technology ಬಜೆಟ್ ದರದಲ್ಲಿ ಬೆಸ್ಟ್ 5G ಫೋನ್ ಬೇಕಿದ್ರೆ, ಈ ಲಿಸ್ಟ್ ಒಮ್ಮೆ ಗಮನಿಸಿ!
- Sports Kohli vs Gambhir: ಹೈ-ವೋಲ್ಟೇಜ್ ಪಂದ್ಯದ ಬಗ್ಗೆ ಕೌಂಟರ್ ನೀಡಿದ ದಿನೇಶ್ ಕಾರ್ತಿಕ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸಂಕ್ರಾಂತಿ ಹಬ್ಬದಂದು ಅನಾಥಾಶ್ರಮಕ್ಕೆ ಭೇಟಿ ಕೊಟ್ಟ ತೆಲುಗು ನಟ ಮಂಚು ಮನೋಜ್
ಹಬ್ಬ ಬಂತು ಅಂದ್ರೆ ಸಾಂಪ್ರದಾಯಿಕ ಉಡುಗೆ ತೊಟ್ಟು, ಕುಟುಂಬದ ಜೊತೆಗೆ ನಟ-ನಟಿಯರು ಆಚರಣೆ ಮಾಡುವುದು ಸಾಮಾನ್ಯ. ಆದ್ರೆ, ಇದರ ಹೊರತಾಗಿ ತೆಲುಗು ನಟ ಮಂಚು ಮನೋಜ್ ಈ ಬಾರಿಯ ಸಂಕ್ರಾಂತಿ ಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಿದ್ದಾರೆ.
ತಿರುಪತಿ ಬಳಿಯಿರುವ ಅಭಯ ಕ್ಷೇತ್ರಂ ಎನ್ನುವ ಅನಾಥಾಶ್ರಮಕ್ಕೆ ಭೇಟಿ ಕೊಟ್ಟು, ಅಲ್ಲಿರುವ ಮಕ್ಕಳಿಗೆ ಸರ್ಪ್ರೈಸ್ ನೀಡುವ ಮೂಲಕ ಸಂಕ್ರಾಂತಿ ಹಬ್ಬವನ್ನು ಮಂಚು ಮನೋಜ್ ಸೆಲೆಬ್ರೇಟ್ ಮಾಡಿದ್ದಾರೆ.
''ಈ ಹಬ್ಬ ತುಂಬಾನೇ ವಿಶೇಷ. ಅಭಯ ಕ್ಷೇತ್ರಂ ಅನಾಥಾಶ್ರಮಕ್ಕೆ ಭೇಟಿ ಕೊಟ್ಟು, ಅಲ್ಲಿರುವ ಪ್ರತಿಭಾವಂತ ಮಕ್ಕಳ ಜೊತೆಗೆ ಕಾಲ ಕಳೆದಿದ್ದು ಸ್ಪೆಷಲ್ ಆಗಿತ್ತು. ಆ ಮಕ್ಕಳಿಗೆ ಬೆನ್ನೆಲುಬಾಗಿ ನಾನು ಯಾವಾಗಲೂ ಇರುತ್ತೇನೆ. ದೇವರ ದಯೆ ಆ ಮಕ್ಕಳ ಮೇಲಿರಲಿ'' ಎಂದು ನಟ ಮಂಚು ಮನೋಜ್ ಟ್ವೀಟ್ ಮಾಡಿದ್ದಾರೆ.
ಮಂಚು ಮನೋಜ್ ಸಂಸಾರದಲ್ಲಿ ಬಿರುಗಾಳಿ: ಪತ್ನಿಗೆ ವಿಚ್ಛೇದನ ನೀಡಿದ ನಟ
'ದೊಂಗಾ ದೊಂಗದಿ', 'ರಾಜು ಭಾಯ್', 'ಬಿಂದಾಸ್', 'ವೇದಂ', 'ಪೋಟುಗಾಡು' ಮುಂತಾದ ಚಿತ್ರಗಳ ಮೂಲಕ ಟಾಲಿವುಡ್ ನಲ್ಲಿ ಮಂಜು ಮನೋಜ್ ಗುರುತಿಸಿಕೊಂಡಿದ್ದಾರೆ. 2017 ರಲ್ಲಿ ತೆರೆಗೆ ಬಂದ 'ಗುಂಟುರೋಡು' ಮತ್ತು 'ಒಕ್ಕಡು ಮಿಗಿಲಾಡು' ಬಳಿಕ ಮಂಚು ಮನೋಜ್ ಯಾವುದೇ ಚಿತ್ರದಲ್ಲಿ ಅಭಿನಯಿಸಿಲ್ಲ.
ಎರಡು ವರ್ಷಗಳಿಂದ ತೆರೆ ಮೇಲೆ ನಾಪತ್ತೆ ಆಗಿರುವ ಮಂಚು ಮನೋಜ್ ಈ ವರ್ಷ ಸ್ವಂತ ಪ್ರೊಡಕ್ಷನ್ ಹೌಸ್ ಮೂಲಕ ಕಮ್ ಬ್ಯಾಕ್ ಮಾಡಲಿದ್ದಾರೆ.