Don't Miss!
- News Mallikarjun Kharge: ಕಲಬುರಗಿ ಲೋಕಸಭಾ ಕ್ಷೇತ್ರ; ಅಳಿಯನ ಕಾಳಗದಲ್ಲಿ ಮಲ್ಲಿಕಾರ್ಜುನ ಖರ್ಗೆ ಪ್ರತಿಷ್ಠೆ
- Sports T20 World Cup 2024: ವೀರೇಂದ್ರ ಸೆಹ್ವಾಗ್ ಆಯ್ಕೆಯ ಭಾರತ ತಂಡದಲ್ಲಿ ಪ್ರಮುಖ ಆಟಗಾರರಿಗೆ ಸ್ಥಾನವಿಲ್ಲ!
- Technology Realme: ರಿಯಲ್ಮಿ ನಾರ್ಜೋ 70 5G, ನಾರ್ಜೋ 70x 5G ಸ್ಮಾರ್ಟ್ಫೋನ್ ಲಾಂಚ್! ಸಖತ್ ಫೀಚರ್ಸ್... ಬೆಲೆ ಎಷ್ಟು?
- Automobiles ಮೇಡ್ ಇನ್ ಇಂಡಿಯಾ ಈ ಕಾರಿಗೆ ಜಪಾನ್ನಲ್ಲಿ ಭಾರೀ ಬೇಡಿಕೆ: ವಿಶ್ವಗುರು ಭಾರತಕ್ಕೆ ಎಲ್ಲವೂ ಸಾಧ್ಯ!
- Lifestyle ವಿಕಲಚೇತನರಿಗೆ ಸ್ಕೂಟಿ ಗಿಫ್ಟ್..! ಮನೆ ಕಟ್ಟಿಕೊಡುವ ಭರವಸೆ ನೀಡಿದ ನಟ ಲಾರೆನ್ಸ್..!
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸಂಕ್ರಾಂತಿ ಹಬ್ಬದಂದು ಅನಾಥಾಶ್ರಮಕ್ಕೆ ಭೇಟಿ ಕೊಟ್ಟ ತೆಲುಗು ನಟ ಮಂಚು ಮನೋಜ್
ಹಬ್ಬ ಬಂತು ಅಂದ್ರೆ ಸಾಂಪ್ರದಾಯಿಕ ಉಡುಗೆ ತೊಟ್ಟು, ಕುಟುಂಬದ ಜೊತೆಗೆ ನಟ-ನಟಿಯರು ಆಚರಣೆ ಮಾಡುವುದು ಸಾಮಾನ್ಯ. ಆದ್ರೆ, ಇದರ ಹೊರತಾಗಿ ತೆಲುಗು ನಟ ಮಂಚು ಮನೋಜ್ ಈ ಬಾರಿಯ ಸಂಕ್ರಾಂತಿ ಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಿದ್ದಾರೆ.
ತಿರುಪತಿ ಬಳಿಯಿರುವ ಅಭಯ ಕ್ಷೇತ್ರಂ ಎನ್ನುವ ಅನಾಥಾಶ್ರಮಕ್ಕೆ ಭೇಟಿ ಕೊಟ್ಟು, ಅಲ್ಲಿರುವ ಮಕ್ಕಳಿಗೆ ಸರ್ಪ್ರೈಸ್ ನೀಡುವ ಮೂಲಕ ಸಂಕ್ರಾಂತಿ ಹಬ್ಬವನ್ನು ಮಂಚು ಮನೋಜ್ ಸೆಲೆಬ್ರೇಟ್ ಮಾಡಿದ್ದಾರೆ.
''ಈ ಹಬ್ಬ ತುಂಬಾನೇ ವಿಶೇಷ. ಅಭಯ ಕ್ಷೇತ್ರಂ ಅನಾಥಾಶ್ರಮಕ್ಕೆ ಭೇಟಿ ಕೊಟ್ಟು, ಅಲ್ಲಿರುವ ಪ್ರತಿಭಾವಂತ ಮಕ್ಕಳ ಜೊತೆಗೆ ಕಾಲ ಕಳೆದಿದ್ದು ಸ್ಪೆಷಲ್ ಆಗಿತ್ತು. ಆ ಮಕ್ಕಳಿಗೆ ಬೆನ್ನೆಲುಬಾಗಿ ನಾನು ಯಾವಾಗಲೂ ಇರುತ್ತೇನೆ. ದೇವರ ದಯೆ ಆ ಮಕ್ಕಳ ಮೇಲಿರಲಿ'' ಎಂದು ನಟ ಮಂಚು ಮನೋಜ್ ಟ್ವೀಟ್ ಮಾಡಿದ್ದಾರೆ.
ಮಂಚು ಮನೋಜ್ ಸಂಸಾರದಲ್ಲಿ ಬಿರುಗಾಳಿ: ಪತ್ನಿಗೆ ವಿಚ್ಛೇದನ ನೀಡಿದ ನಟ
'ದೊಂಗಾ ದೊಂಗದಿ', 'ರಾಜು ಭಾಯ್', 'ಬಿಂದಾಸ್', 'ವೇದಂ', 'ಪೋಟುಗಾಡು' ಮುಂತಾದ ಚಿತ್ರಗಳ ಮೂಲಕ ಟಾಲಿವುಡ್ ನಲ್ಲಿ ಮಂಜು ಮನೋಜ್ ಗುರುತಿಸಿಕೊಂಡಿದ್ದಾರೆ. 2017 ರಲ್ಲಿ ತೆರೆಗೆ ಬಂದ 'ಗುಂಟುರೋಡು' ಮತ್ತು 'ಒಕ್ಕಡು ಮಿಗಿಲಾಡು' ಬಳಿಕ ಮಂಚು ಮನೋಜ್ ಯಾವುದೇ ಚಿತ್ರದಲ್ಲಿ ಅಭಿನಯಿಸಿಲ್ಲ.
ಎರಡು ವರ್ಷಗಳಿಂದ ತೆರೆ ಮೇಲೆ ನಾಪತ್ತೆ ಆಗಿರುವ ಮಂಚು ಮನೋಜ್ ಈ ವರ್ಷ ಸ್ವಂತ ಪ್ರೊಡಕ್ಷನ್ ಹೌಸ್ ಮೂಲಕ ಕಮ್ ಬ್ಯಾಕ್ ಮಾಡಲಿದ್ದಾರೆ.