Don't Miss!
- News ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ; ಇಬ್ಬರು ಶಂಕಿತರ ಸುಳಿವು ಕೊಟ್ಟರೆ ₹20 ಲಕ್ಷ ಬಹುಮಾನ
- Sports RCB VS KKR: ಟಾಸ್ ಗೆದ್ದ ಕೆಕೆಆರ್ ಫೀಲ್ಡೀಂಗ್ ಆಯ್ಕೆ: ಆರ್ಸಿಬಿ ತಂಡದಲ್ಲಿ ಇಲ್ಲ ಬದಲಾವಣೆ
- Lifestyle ಏಪ್ರಿಲ್ 1ರಿಂದ 800 ಔಷಧಗಳು ದುಬಾರಿ..! ಎಷ್ಟು ಬೆಲೆ ಹೆಚ್ಚಳ.?
- Automobiles ಭಾರತದಲ್ಲಿ ಬಿಡುಗಡೆಗೆ ಸಜ್ಜಾದ ಬಹುನಿರೀಕ್ಷಿತ ಹೊಸ ಸ್ಕೋಡಾ ಸೂಪರ್ಬ್ ಕಾರು
- Technology WhatsApp: ವಾಟ್ಸಾಪ್ನಲ್ಲಿ ಈ ಕರೆಗಳನ್ನು ಸ್ವೀಕರಿಸದಂತೆ ಕೇಂದ್ರದಿಂದ ಎಚ್ಚರಿಕೆ! ಯಾಕೆ ಗೊತ್ತಾ?
- Finance 25ನೇ ವಯಸ್ಸಿನಲ್ಲಿ 25,000 ರೂ.ನಿಂದ 7,000 ಕೋಟಿ ಗಳಿಸಿದ ವ್ಯಕ್ತಿ ಬಗ್ಗೆ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ತಲಾ ಅಜಿತ್ ಅಭಿನಯದ ಈ ಸೂಪರ್ ಹಿಟ್ ಸಿನಿಮಾದ ತೆಲುಗು ರಿಮೇಕ್ ನಲ್ಲಿ ಮೆಗಾಸ್ಟಾರ್
ತಮಿಳಿನ ಖ್ಯಾತ ನಟ ಅಜಿತ್ ಅಭಿನಯದ ಸೂಪರ್ ಹಿಟ್ 'ವೇದಲಂ' ಸಿನಿಮಾ ತೆಲುಗಿಗೆ ರಿಮೇಕ್ ಆಗುತ್ತಿದೆ. ತೆಲುಗು ರಿಮೇಕ್ ಬಗ್ಗೆ ಈಗಾಗಲೆ ಸಾಕಷ್ಟು ಸುದ್ದಿ ಹರಿದಾಡುತ್ತಿದೆ. 2015ರಲ್ಲಿ ರಿಲೀಸ್ ವೇದಲಂ ತಮಿಳು ಚಿತ್ರರಂಗದಲ್ಲಿ ದೊಡ್ಡ ಮಟ್ಟಕ್ಕೆ ಸದ್ದು ಮಾಡಿದ ಸಿನಿಮಾ. ಸಿನಿ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಪಡೆದುಕೊಂಡ ವೇದಲಂ ತೆಲುಗು ಚಿತ್ರರಂಗದಲ್ಲಿಯೂ ಅಬ್ಬರಿಸಲಿದೆ ಎನ್ನುವ ಮಾತು ವರ್ಷಗಳಿಂದ ಕೇಳಿ ಬರುತ್ತಿದೆ. ಆದರೆ ಇನ್ನೂ ತೆಲುಗಿನಲ್ಲಿ ಸಿನಿಮಾ ಸೆಟ್ಟಿರಿಲ್ಲ.
Recommended Video
ಸದ್ಯ ವೇದಲಂ ತೆಲುಗು ರಿಮೇಕ್ ಬಗ್ಗೆ ಸುದ್ದಿಯೊಂದು ಹರಿದಾಡುತ್ತಿದೆ. ತಲಾ ಅಜಿತ್ ಅಭಿನಯದ ವೇದಲಂ ತೆಲುಗು ರಿಮೇಕ್ ನಲ್ಲಿ ಮೆಗಾಸ್ಟಾರ್ ಚಿರಂಜೀವಿ ಕಾಣಿಸಿಕೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿದೆ. ಅಜಿತ್ ಪಾತ್ರದಲ್ಲಿ ಮೆಗಾಸ್ಟಾರ್ ಮಿಂಚಲಿದ್ದಾರೆ ಎನ್ನುವ ಸುದ್ದಿ ಟಾಲಿವುಡ್ ಅಂಗಳದಲ್ಲಿ ವೈರಲ್ ಆಗಿದೆ.
ಪವನ್ ಕಲ್ಯಾಣ್ ಬಳಿಕ ಅಲ್ಲು ಅರ್ಜುನ್ ಕುಟುಂಬದ ಬುಡಕ್ಕೆ ಕೈ ಹಾಕಿದ ರಾಮ್ ಗೋಪಾಲ್ ವರ್ಮಾ
ಈ ಮೊದಲು ವೇದಲಂ ತೆಲುಗು ರಿಮೇಕ್ ನಲ್ಲಿ ಪವರ್ ಸ್ಟಾರ್ ಪವನ್ ಕಲ್ಯಾಣ್ ನಟಿಸಲಿದ್ದಾರೆ ಎಂದು ಹೇಳಲಾಗಿತ್ತು. ಅಲ್ಲದೆ 'ಜಿಲ್ಲಾ' ಸಿನಿಮಾ ಖ್ಯಾತಿಯ ನಿರ್ದೇಶಕ ನಿಸನ್ ಆಕ್ಷನ್ ಕಟ್ ಹೇಳಲಿದ್ದಾರೆ ಎಂದು ಹೇಳಲಾಗುತ್ತಿತ್ತು. ಆದರೀಗ ಪವನ್ ಕಲ್ಯಾಣ್ ಬದಲು ಚಿರಂಜೀವಿ ಕಾಣಿಸಿಕೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿದೆ.
ವೇದಲಂ ತೆಲುಗು ರಿಮೇಕ್ ಗೆ ನಿರ್ದೇಶಕ ಮೆಹರ್ ರಮೇಶ್ ಆಕ್ಷನ್ ಕಟ್ ಹೇಳುತ್ತಿದ್ದಾರಂತೆ. ಪವನ್ ಕಲ್ಯಾಣ್ ಅಭಿನಯಿಸಬೇಕಿದ್ದ ಸಿನಿಮಾ ಚಿರಂಜೀವಿ ಪಾಲಾಗಿದ್ದೇಕೆ ಎನ್ನುವುದು ಬಹಿರಂಗವಾಗಿಲ್ಲ. ಆದರೆ ವೇದಲಂ ಸಿನಿಮಾದಲ್ಲಿ ಚಿರಂಜೀವಿ ಅಭಿನಯಿಸುವುದು ಬಹುತೇಕ ಖಚಿತವಾಗಿದೆ ಎಂದು ಹೇಳಲಾಗುತ್ತಿದೆ. ಚಿರಂಜೀವಿ ಹುಟ್ಟುಹಬ್ಬದ ದಿನ ಸಿನಿಮಾ ಅಧಿಕೃತವಾಗಿ ಬಹಿರಂಗವಾಗಲಿದೆಯಂತೆ.