Don't Miss!
- News Gold Price: ಇಂದು ಮತ್ತಷ್ಟು ಹೆಚ್ಚಾದ ಬಂಗಾರದ ಬೆಲೆ: ಬೆಳ್ಳಿಯೂ ಬಲು ದುಬಾರಿ
- Technology AI Camera: ಎಐ ಕ್ಯಾಮೆರಾ ಆಯ್ಕೆ ಇರುವ ಅತ್ಯುತ್ತಮ ಸ್ಮಾರ್ಟ್ಫೋನ್ಗಳಿವು! ಬೆಲೆ ಎಷ್ಟು ?
- Sports IPL 2024: RCB vs KKR ಹೆಡ್-ಟು-ಹೆಡ್ ದಾಖಲೆ, ಪಿಚ್ ವರದಿ; ಚಿನ್ನಸ್ವಾಮಿಯಲ್ಲಿ ಗೆಲುವು ಯಾರಿಗೆ?
- Finance ವಿವಿಧ ರಾಜ್ಯಗಳ ನರೇಗಾ ಕಾರ್ಮಿಕರ ವೇತನ ದರ ಪರಿಷ್ಕರಣೆ, ವಿವರ
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮಹೇಶ್ ಬಾಬು ಅಭಿಮಾನಿ ಸಂಘದ ಅಧ್ಯಕ್ಷನಾದ ನಾಗ ಚೈತನ್ಯ
ಟಾಲಿವುಡ್ ಸಿನಿಮಾರಂಗದಲ್ಲಿ ಮಹೇಶ್ ಬಾಬು ಮತ್ತು ನಾಗ ಚೈತನ್ಯ ಇಬ್ಬರೂ ಸ್ಟಾರ್ ನಟನಾಗಿ ಗುರುತಿಸಿಕೊಂಡವರು. ಇಬ್ಬರಿಗೂ ತನ್ನದೆ ಆದ ಅಭಿಮಾನಿ ಬಳಗವಿದೆ. ಅಪಾರ ಸಂಖ್ಯೆಯ ಅಭಿಮಾನಿ ಬಳಗ ಹೊಂದಿರುವ ನಾಗಚೈತನ್ಯ ಮಹೇಶ್ ಬಾಬು ಅಭಿಮಾನಿ ಸಂಘದ ಅಧ್ಯಕ್ಷನಾಗಿದ್ದಾರೆ. ಈ ಸುದ್ದಿ ಈಗ ಮಹೇಶ್ ಮತ್ತು ಚೈ ಅಭಿಮಾನಿಗಳಿಗೆ ಅಚ್ಚರಿ ಮೂಡಿಸಿದೆ.
ಅಷ್ಟಕ್ಕೂ ನಾಗ ಚೈತನ್ಯ, ಮಹೇಶ್ ಬಾಬು ಅಭಿಮಾನಿ ಸಂಘದ ಅಧ್ಯಕ್ಷನಾಗಿರುವುದು ಯಾಕೆ ಎನ್ನುವುದಕ್ಕೆ ಉತ್ತರ ಇಲ್ಲಿದೆ. ನಾಗ ಚೈತನ್ಯ ಮಹೇಶ್ ಬಾಬು ಅಭಿಮಾನಿ ಸಂಘದ ಅಧ್ಯಕ್ಷನಾಗಿರುವುದು ಸಿನಿಮಾದಲ್ಲಿ. ನಾಗ ಚೈತನ್ಯ ಹೊಸ ಸಿನಿಮಾದಲ್ಲಿ ಮಹೇಶ್ ಬಾಬು ಫ್ಯಾನ್ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ.
ಮೊದಲ ಕೊರೊನಾ ಪರೀಕ್ಷೆಯ ಅನುಭವ ಬಿಚ್ಚಿಟ್ಟ ನಟ ಮಹೇಶ್ ಬಾಬು ಪುತ್ರಿ
ನಾಗ ಚೈತನ್ಯ ಹೊಸ ಸಿನಿಮಾಗೆ ಥ್ಯಾಂಕ್ ಯೂ ಎಂದು ಟೈಟಲ್ ಇಡಲಾಗಿದೆ. ಸಿನಿಮಾಗೆ ವಿಕ್ರಮ್ ಕೆ ಆಕ್ಷನ್ ಕಟ್ ಹೇಳಿದ್ದಾರೆ. ಈ ಹಿಂದೆ ಮನಂ, 13 ಬಿ, 24 ಸಿನಿಮಾಗಳನ್ನು ನಿರ್ದೇಶನ ಮಾಡಿರುವ ವಿಕ್ರಮ್ ಇದೀಗ ಥ್ಯಾಂಕ್ ಯೂ ಸಿನಿಮಾ ಮೂಲಕ ಮೋಡಿ ಮಾಡಲು ಸಜ್ಜಾಗಿದ್ದಾರೆ.
ಚಿತ್ರದಲ್ಲಿ ನಾಗಚೈತನ್ಯ, ಅಭಿರಾಮ್ ಎಂದು ಹೇಳಲಾಗುತ್ತಿದೆ. ಈಗಾಗಲೇ ಈ ಸಿನಿಮಾದ ಚಿತ್ರೀಕರಣ ಪ್ರಾರಂಭವಾಗಿದೆ. ಚಿತ್ರಮಂದಿರವೊಂದರಲ್ಲಿ ಚಿತ್ರೀಕರಣ ನಡೆಯುತ್ತಿದ್ದು, ಅಲ್ಲಿ ಮಹೇಶ್ ಬಾಬು ಪೋಸ್ಟರ್ ಗಳನ್ನು ಹಾಕಿದ್ದಾರೆ. ಮಹೇಶ್ ಬಾಬುಗೆ ಶುಭಕೋರುವ ಬ್ಯಾನರ್ ನಲ್ಲಿ ನಾಗ ಚೈತನ್ಯ ಹೆಸರು ಅಭಿರಾಮ್ ಎಂದು ಇದೆ.
ನಿರ್ದೇಶಕ ವಿಕ್ರಮ್ ಮತ್ತು ನಾಗ ಚೈತನ್ಯ ಕಾಂಬಿನೇಷನ್ ನ ಎರಡನೇ ಸಿನಿಮಾ ಇದಾಗಿದೆ. ಮನಂ ನಂತಹ ಅದ್ಭುತ ಸಿನಿಮಾ ಮಾಡಿದ್ದ ವಿಕ್ರಮ್ ಇದೀಗ ಥ್ಯಾಂಕ್ ಯೂ ಮೂಲಕ ಗಮನ ಸೆಳೆಯುತ್ತಿದ್ದಾರೆ. ಚಿತ್ರಕ್ಕೆ ದಿಲ್ ರಾಜು ಬಂಡವಾಳ ಹೂಡಿದ್ದಾರೆ. ಚಿತ್ರದಲ್ಲಿ ಐಶ್ವರ್ಯ ಲಕ್ಷ್ಮೀ ಮತ್ತು ಅವಿಕಾ ಗೋರ್ ನಾಯಕಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ.