Don't Miss!
- News 11 ಕೋಟಿ ಮಹಿಳೆಯರಿಗೆ ಅಡುಗೆ ಅನಿಲ: ಡಾ. ಕೆ. ಸುಧಾಕರ್
- Sports RCB vs KKR IPL 2024: ಕೆಕೆಆರ್ ವಿರುದ್ಧ ಆರ್ಸಿಬಿ ಹಸಿರು ಜೆರ್ಸಿಯಲ್ಲಿ ಕಣಕ್ಕೆ; ಅಂದೇ ಏಕೆ?
- Lifestyle ಮನೆಯಲ್ಲಿ ಸುಲಭವಾಗಿ ಬೀನ್ಸ್ ಬೆಳೆಯಬಹುದು..! ಹೇಗೆ ನೋಡಿ..!
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Finance ಬಿಸಿಲ ಬೇಗೆಯಿಂದ ರಕ್ಷಿಸಿಕೊಳ್ಳಲು ಟ್ರಾಫಿಕ್ ಪೊಲೀಸರಿಗೆ ರಿಲಿಫ್: ಬಂತು ಹವಾನಿಯಂತ್ರಿತ ಎಸಿ ಹೆಲ್ಮೆಟ್!
- Technology Samsung: ಸ್ಯಾಮ್ಸಂಗ್ನ ಈ ಸರಣಿ ಫೋನ್ಗಳಲ್ಲಿ ಗ್ರೀನ್ ಲೈನ್ ಸಮಸ್ಯೆ! ವರದಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನಾಲಿಗೆ ಹಿಡಿತದಲ್ಲಿಟ್ಟಿಕೊ, ಕ್ಷಮೆ ಕೇಳು: ಬಾಲಕೃಷ್ಣಗೆ ಚಿರಂಜೀವಿ ಸಹೋದರ ಎಚ್ಚರಿಕೆ
ಕೊರೊನಾ ಪರಿಣಾಮದಿಂದ ಈಗಾಗಲೇ ಕಂಗೆಟ್ಟಿರುವ ತೆಲುಗು ಚಿತ್ರರಂಗ, ಚಿತ್ರೋದ್ಯಮ ಪುನರ್ಸ್ಥಾಪಿಸುವತ್ತ ಗಮನ ಹರಿಸುವ ಬದಲಿಗೆ ಕ್ಷುಲ್ಲಕ ಜಗಳಲ್ಲಿ ತೊಡಗಿದೆ ಎಂದೆನಿಸುತ್ತಿದೆ.
Recommended Video
ಬಾಲಕೃಷ್ಣ ಹೇಳಿಕೆಯಿಂದ ಎದ್ದ ವಿವಾದ ಈಗ ಚಿರಂಜೀವಿ ಕುಟುಂಬ ವರ್ಸಸ್ ಎನ್ಟಿಆರ್ ಕುಟುಂಬ ಎಂಬಂತಾಗುವತ್ತ ಸಾಗುತ್ತಿದೆ.
ಕಾಂಡೋಮ್ನಿಂದ ಮಾಡಿದ ಬಟ್ಟೆ ಧರಿಸಿದ ಮೆಗಾಸ್ಟಾರ್ ಚಿರಂಜೀವಿ ಸೊಸೆ
ಕೊರೊನಾ ಪರಿಣಾಮದಿಂದಾಗಿ ತತ್ತರಿಸಿರುವ ತೆಲುಗು ಚಿತ್ರೋದ್ಯಮದ ಬಗ್ಗೆ ಚರ್ಚಿಸಲೆಂದು ಚಿರಂಜೀವಿ ಮನೆಯಲ್ಲಿ ತೆಲುಗು ಸಿನಿ ಗಣ್ಯರು ಸಭೆ ಸೇರಿದ್ದರು. ಈ ಸಭೆಗೆ ನನ್ನನ್ನು ಕರೆದಿರಲಿಲ್ಲ, ನನಗೆ ಮಾಹಿತಿಯನ್ನೂ ನೀಡಿರಲಿಲ್ಲ ಎಂದು ಬಾಲಕೃಷ್ಣ ಹೇಳಿದ್ದರು. ಅಷ್ಟೆ ಅಲ್ಲದೆ, ಭೂಮಿ ಹಂಚಿಕೆ ಮಾಡಿಕೊಳ್ಳಲು ಅವರು ಸಿಎಂ ಭೇಟಿ ಮಾಡಿದ್ದರು ಎಂದಿದ್ದರು ಇದು ವಿವಾದಕ್ಕೆ ಕಾರಣವಾಗಿತ್ತು.
ಎಚ್ಚರಿಕೆ ನೀಡಿದ ಚಿರಂಜೀವಿ ಸಹೋದರ
ಆದರೆ ಇದೀಗ ನಟ ಬಾಲಕೃಷ್ಣಗೆ ಚಿರಂಜೀವಿ ಸಹೋದರ ನಾಗಬಾಬು ಎದುರುತ್ತರ ನೀಡಿದ್ದು, ಬಾಲಕೃಷ್ಣ ನಾಲಿಗೆ ಬಿಗಿಹಿಡಿದು ಮಾತನಾಡಬೇಕು, ಕೂಡಲೇ ಬಾಲಕೃಷ್ಣ ಕ್ಷಮೆ ಕೋರಲಿ, ಇಲ್ಲವಾದರೆ ಪರಿಸ್ಥಿತಿ ವಿಕೋಪಕ್ಕೆ ಹೋಗುತ್ತದೆ' ಎಂದು ರೌಡಿ ಭಾಷೆಯಲ್ಲಿ ಎಚ್ಚರಿಕೆ ನೀಡಿದ್ದಾರೆ.
'ಬಾಯಿಗೆ ಬಂದಂತೆ ಮಾತನಾಡುವುದು ಸರಿಯಲ್ಲ'
'ಸಿಎಂ ಜೊತೆ ಸಭೆಗೆ ಬಾಲಕೃಷ್ಣ ಅವರನ್ನು ಕರೆಯದಿರುವುದನ್ನು ನಾನು ಸಮರ್ಥಿಸುವುದಿಲ್ಲ, ಆದರೆ ಭೂಮಿ ಹಂಚಿಕೊಳ್ಳಲು ಸಭೆ ನಡೆಸಿದ್ದಾರೆ ಎಂಬ ಬಾಲಕೃಷ್ಣ ಮಾತು ಸರಿಯಲ್ಲ. ಬಾಲಕೃಷ್ಣ ಬಾಯಿಗೆ ಬಂದಹಾಗೆ ಮಾತನಾಡಬಾರದು' ಎಂದಿದ್ದಾರೆ ನಾಗಬಾಬು.
ತೆಲುಗು ಚಿತ್ರರಂಗದ ನಾಯಕ ಪಟ್ಟ ಚಿರಂಜೀವಿಗೆ: ಬಾಲಕೃಷ್ಣ ಗರಂ
'ಸಿನಿಮಾ ರಂಗವನ್ನು ಅವಮಾನಿಸಿದ್ದಾರೆ ಬಾಲಕೃಷ್ಣ'
ಈ ಕೂಡಲೇ ಬಾಲಕೃಷ್ಣ ತಮ್ಮ ಮಾತನ್ನು ಹಿಂದೆ ಪಡೆಯಬೇಕು. ಭೂಮಿ ಹಂಚಿಕೊಳ್ಳಲು ಸಭೆ ನಡೆಸಿದ್ದಾರೆ ಎನ್ನುವ ಮೂಲಕ ಅವರು ಇಡೀಯ ಸಿನಿಮಾ ರಂಗವನ್ನು ಅವಮಾನಿಸಿದ್ದಾರೆ. ಹೀಗೆ ಸುಖಾ ಸುಮ್ಮನೆ ನಾಲಗೆ ಹರಿಬಿಡುವುದು ಸರಿಯಲ್ಲ ಎಂದು ನಾಗಬಾಬು ಎಚ್ಚರಿಕೆ ನೀಡಿದ್ದಾರೆ.
ಚಿರಂಜೀವಿ ಮನೆಯಲ್ಲಿ ಸಭೆ ವಿವಾದದ ಮೂಲ
ಕೊರೊನಾ ದಿಂದ ಸಂಕಷ್ಟಕ್ಕೆ ಸಿಲುಕಿರುವ ಚಿತ್ರರಂಗದ ಭವಿಷ್ಯದ ಬಗ್ಗೆ ಚಿರಂಜೀವಿ ಅವರ ಮನೆಯಲ್ಲಿ ಚಿತ್ರರಂಗದ ಗಣ್ಯರು ಮತ್ತು ಸಚಿವರುಗಳು ಸಭೆ ನಡೆಸಿದರು. ನಂತರ ಇದೇ ನಿಯೋಗವು ತೆಲಂಗಾಣ ಸಿಎಂ ಮತ್ತು ಆಂಧ್ರಪ್ರದೇಶ ಸಿಎಂ ಅವರುಗಳನ್ನು ಭೇಟಿ ಮಾಡಿದರು. ಇದಕ್ಕೆ ಬಾಲಕೃಷ್ಣಗೆ ಆಹ್ವಾನ ನೀಡಿರಲಿಲ್ಲ ಎಂದು ಬಾಲಕೃಷ್ಣ ಸಿಟ್ಟಾಗಿದ್ದಾರೆ.