Don't Miss!
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- News Mukhtar Ansari: ಗ್ಯಾಂಗ್ಸ್ಟರ್-ರಾಜಕಾರಣಿ ಮುಖ್ತಾರ್ ಅನ್ಸಾರಿ ಸಾವು
- Lifestyle ಏಪ್ರಿಲ್ನಲ್ಲಿ 14 ದಿನ ರಜೆ, ಏಪ್ರಿಲ್ 1ಕ್ಕೆ ಬ್ಯಾಂಕ್ಗಳಿಗೆ ರಜೆ ಇರಲು ಕಾರಣವೇನು?
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಚಿರಂಜೀವಿ ಸಿನಿಮಾ ಮೂಲಕ ತೆಲುಗಿಗೆ ಕಾಲಿಡುತ್ತಿದ್ದಾರೆ ಬಾಲಿವುಡ್ ಸ್ಟಾರ್
ಬಾಲಿವುಡ್ ನಟರು ದಕ್ಷಿಣ ಭಾರತ ಸಿನಿಮಾಗಳಲ್ಲಿ ನಟಿಸುವುದು ಹೊಸದೇನೂ ಅಲ್ಲ. ಅಮಿತಾಬ್ ಬಚ್ಚನ್ ಇಂದ ಹಿಡಿದು ಹಲವು ಸ್ಟಾರ್ ನಟರು ದಕ್ಷಿಣ ಭಾರತ ಸಿನಿಮಾಗಳಲ್ಲಿ ನಟಿಸಿದ್ದಾರೆ. ನಟಿಸುತ್ತಲೂ ಇದ್ದಾರೆ. ಕೆಲವು ಸ್ಟಾರ್ ನಟ-ನಟಿಯರಂತೂ ದಕ್ಷಿಣ ಭಾರತದ ಸಿನಿಮಾಗಳಿಂದಲೇ ತಮ್ಮ ವೃತ್ತಿ ಆರಂಭಿಸಿದ್ದೂ ಇದೆ.
ಇದೀಗ ಹಿಂದಿ ಸಿನಿಮಾಗಳಲ್ಲಿ ಬಹುಬೇಡಿಕೆಯ ನಟರಾಗಿರುವ ನವಾಜುದ್ಧೀನ್ ಸಿದ್ಧಿಕಿ ಅವರನ್ನು ತೆಲುಗಿಗೆ ಕರೆತರಲಾಗುತ್ತಿದೆ. ಅದೂ ಮೆಗಾಸ್ಟಾರ್ ಚಿರಂಜೀವಿ ಸಿನಿಮಾ ಮೂಲಕ.
ಹೌದು, ನವಾಜುದ್ಧೀನ್ ಸಿದ್ಧಿಕಿ ಮೊದಲ ಬಾರಿಗೆ ತೆಲುಗು ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಚಿರಂಜೀವಿ ನಟಿಸುತ್ತಿರುವ 'ಆಚಾರ್ಯ' ಸಿನಿಮಾದಲ್ಲಿ. ಆ ಸಿನಿಮಾದ ಒಂದು ಪ್ರಮುಖ ಪಾತ್ರಕ್ಕೆ ನವಾಜುದ್ಧೀನ್ ಬಣ್ಣ ಹಚ್ಚಲಿದ್ದಾರೆ.
ನವಾಜುದ್ಧೀನ್ ಈ ಹಿಂದೆ ತಮಿಳಿನ 'ಪೆಟ್ಟಾ' ಸಿನಿಮಾದಲ್ಲಿ ವಿಲನ್ ಪಾತ್ರದಲ್ಲಿ ನಟಿಸಿದ್ದರು. ಆ ಸಿನಿಮಾದಲ್ಲಿ ರಜನೀಕಾಂತ್ ನಾಯಕ ನಟ. ಇದೀಗ ದಕ್ಷಿಣದ ಮತ್ತೊಬ್ಬ ಸ್ಟಾರ್ ನಟ ಚಿರಂಜೀವಿ ಅವರೊಟ್ಟಿಗೆ ಪಾತ್ರ ಮಾಡುತ್ತಿದ್ದಾರೆ ನವಾಜುದ್ಧೀನ್.
ಚಿರಂಜೀವಿ ನಟಿಸಿದ್ದ ಈ ಹಿಂದಿನ ಸಿನಿಮಾ 'ಸೈರಾ ನರಸಿಂಹಾ ರೆಡ್ಡಿ'ಯಲ್ಲಿ ಹಿಂದಿ ಸೂಪರ್ ಸ್ಟಾರ್ ಅಮಿತಾಬ್ ಬಚ್ಚನ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದರು. ಅದೇ ಸಿನಿಮಾದಲ್ಲಿ ಸುದೀಪ್ ಸಹ ಮುಖ್ಯ ಪಾತ್ರದಲ್ಲಿದ್ದರು.
Recommended Video
'ಆಚಾರ್ಯ' ಸಿನಿಮಾದಲ್ಲಿ ಹಲವು ಅತ್ಯುತ್ತಮ ನಟರು ಒಟ್ಟಿಗೆ ನಟಿಸುತ್ತಿದ್ದಾರೆ. ಚಿರಂಜೀವಿ, ರಾಮ್ ಚರಣ್ ತೇಜ, ಸೋನು ಸೂದ್, ಕಾಜಲ್, ಪೂಜಾ ಹೆಗ್ಡೆ ಇದೀಗ ನವಾಜುದ್ಧೀನ್ ಸಿದ್ಧಿಕಿ ಸಹ ಅವರಿಗೆ ಜೊತೆಯಾಗಿದ್ದಾರೆ.