Don't Miss!
- Sports IPL 2024: ಸಿಕ್ಸ್ ಹೊಡೆದು ತಪ್ಪಾಯ್ತು ಎಂದಿದ್ದೇಕೆ ರಿಷಬ್ ಪಂತ್ ?
- News Chardham Yatra Guidelines 2024: ಚಾರ್ಧಾಮ್ ಯಾತ್ರೆಗೆ ಹೋಗುವಾಗ ಈ ವಸ್ತುಗಳನ್ನು ಬ್ಯಾಗ್ ಅಲ್ಲಿ ಇಟ್ಟುಕೊಳ್ಳಿ....
- Automobiles ಹೊಸ ಜೀಪ್ ರಾಂಗ್ಲರ್ ಸಂಪೂರ್ಣ ರಿವ್ಯೂ ವಿಡಿಯೋ: ಆಫ್ರೋಡ್ನಲ್ಲಿ ಇದನ್ನು ಮೀರಿಸುವವರಿಲ್ಲ!
- Lifestyle ತಾವರೆಯ ಬೀಜವನ್ನು ಹಾಲಿನ ಜೊತೆ ಸೇವಿಸಿದರೆ ಇಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ?
- Technology HMD ಪಲ್ಸ್ ಸರಣಿ ಅಡಿಯಲ್ಲಿ 3 ಹೊಸ ಸ್ಮಾರ್ಟ್ಫೋನ್ ಲಾಂಚ್! ಫೀಚರ್ಸ್ ಏನಿವೆ?
- Finance April 25 Gold Rate: ಇಂದಿನ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರ ಎಷ್ಟಿದೆ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ತೆಲುಗು ನಿರ್ಮಾಪಕನ ವಿರುದ್ಧ ಜಾಮೀನು ರಹಿತ ವಾರೆಂಟ್
ತೆಲುಗಿನ ಕೆಲವು ಸ್ಟಾರ್ ನಟರ ಸಿನಿಮಾಗಳನ್ನು ನಿರ್ಮಾಣ ಮಾಡಿರುವ ನಿರ್ಮಾಪಕ ಮಿರ್ಯಾಲ ರವೀಂದ್ರ ರೆಡ್ಡಿ ವಿರುದ್ಧ ಜಾಮೀನುರಹಿತ ವಾರೆಂಟ್ ಹೊರಡಿಸಲಾಗಿದೆ.
ಪರತ್ತಿಪಾಡು ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ಮಿರ್ಯಾಲ ರವೀಂದ್ರ ರೆಡ್ಡಿ ವಿರುದ್ಧ ವಂಚನೆ ಪ್ರಕರಣದ ವಿಚಾರಣೆ ನಡೆಯುದ್ದು, ನ್ಯಾಯಾಲಯಕ್ಕೆ ಹಾಜರಾಗುವುದರಿಂದ ಪದೇ-ಪದೇ ತಪ್ಪಿಸಿಕೊಳ್ಳುತ್ತಿದ್ದ ರವೀಂದ್ರ ವಿರುದ್ಧ ಜಾಮೀನು ರಹಿತ ವಾರೆಂಟ್ ಹೊರಡಿಸಲಾಗಿದೆ.
ವಾರೆಂಟ್ ಹೊರಡಿಸಿರುವ ನ್ಯಾಯಾಧೀಶರು, ರವೀಂದ್ರ ರೆಡ್ಡಿಯನ್ನು ಏಪ್ರಿಲ್ 19 ರ ಒಳಗಾಗಿ ನ್ಯಾಯಾಲಯದ ಮುಂದೆಹಾಜರು ಪಡಿಸಬೇಕು ಎಂದು ಪೊಲೀಸರಿಗೆ ಸೂಚಿಸಿದ್ದಾರೆ.
ಅಮೆರಿಕ ಮೂಲದ ವಿತರಕರೊಬ್ಬರಿಂದ 50 ಲಕ್ಷ ಹಣ ಮುಂಗಡ ಪಡೆದು ತಮ್ಮ ನಿರ್ಮಾಣದ 'ಸಾಹಸಂ ಸ್ವಾಸಗಾ ಸಾಗಿಪೋ' ಸಿನಿಮಾದ ವಿತರಣೆ ಹಕ್ಕು ಕೊಡುವುದಾಗಿ ಹೇಳಿದ್ದರಂತೆ ರವೀಂದ್ರ, ಆದರೆ ವಿತರಣೆ ಹಕ್ಕುಗಳನ್ನು ಬೇರೆಯವರಿಗೆ ಮಾರಿಬಿಟ್ಟಿದ್ದಾರೆ. ಮುಂಗಡ ನೀಡಿದ್ದ ವಿತರಕ ಪ್ರಶ್ನಿಸಿದಾಗ, ಕೇವಲ ಹತ್ತು ಲಕ್ಷ ಹಣ ಮಾತ್ರವನ್ನೇ ಮರಳಿ ನೀಡುವುದಾಗಿ ಹೇಳಿದ್ದಾರೆ. ಇದರಿಂದ ಸಿಟ್ಟಿಗೆದ್ದ ಅಮೆರಿಕ ಮೂಲದ ವಿತರಕ ದೂರು ದಾಖಲಿಸಿದ್ದರುಸ.
Recommended Video
ರವೀಂದ್ರ ರೆಡ್ಡಿ ಅವರು ನಾಗ ಚೈತನ್ಯ ನಟನೆಯ 'ಸಾಹಸಂ ಸ್ವಾಸಗಾ ಸಾಗಿಪೋ', ಬೆಲ್ಲಂಕೊಂಡ ಸಾಯಿ ಶ್ರೀನಿವಾಸ್, ರಾಕುಲ್ ಪ್ರೀತ್ ನಟನೆಯ 'ಜಯ ಜಾನಕಿ ರಾಮ' ಇನ್ನೂ ಕೆಲವು ಸಿನಿಮಾಗಳನ್ನು ನಿರ್ಮಿಸಿದ್ದಾರೆ. ನಂದಮೂರಿ ಬಾಲಕೃಷ್ಣ ನಟಿಸಿ ಬೋಯಪಾಟಿ ಶ್ರೀನು ನಿರ್ದೇಶಿಸಲಿರುವ ಇನ್ನೂ ಹೆಸರಿಡ ಸಿನಿಮಾವನ್ನು ಇದೇ ರವೀಂದ್ರ ರೆಡ್ಡಿ ನಿರ್ಮಾಣ ಮಾಡುತ್ತಿದ್ದಾರೆ.