Don't Miss!
- Sports KKR vs RCB: ವಿರಾಟ್ ಕೊಹ್ಲಿ ಔಟಾಗಿದ್ದು ಏಕೆ 'ನೋ ಬಾಲ್' ಕೊಡಲಿಲ್ಲ?; ಐಸಿಸಿ ರೂಲ್ಸ್ ಬುಕ್ ಹೇಳೋದೇನು?
- Technology OPPO: ಒಪ್ಪೋ K12 ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಏನಿವೆ?
- Automobiles ಕಡಿಮೆ ಬೆಲೆಗೆ ಲಕ್ಷುರಿ ಫೀಚರ್ ಪರಿಚಯಿಸಲಿದೆ ಮಹೀಂದ್ರಾ: ದುಬಾರಿ ಕಾರುಗಳಿಗೆ ಎದೆನಡುಕ ಶುರು!
- News 2024 ರ ಲೋಕಸಭಾ ಚುನಾವಣೆಯ ಫಲಿತಾಂಶ; ಬಿಜೆಪಿ ಲೆಕ್ಕಾಚಾರದಲ್ಲಿ ಕಾಂಗ್ರೆಸ್ಗೆ ಎಷ್ಟು ಸ್ಥಾನ?
- Finance Namma metro: ಬಿಎಂಆರ್ಸಿಎಲ್ಗೆ ಬಂತು ಹರಿದು ಬಂದು ಐತಿಹಾಸಿಕ ಆದಾಯ!
- Lifestyle 85ರ ವಯಸ್ಸಲ್ಲೂ ಕುಕ್ಕಿಂಗ್ ಚಾನಲ್ ತೆರೆದ ಅಜ್ಜಿ..! ಈಗ 5 ಲಕ್ಷ ಚಂದಾದಾರರು.!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕತೆ ಕೇಳಿ ನಿದ್ದೆ ಹೋದ ಪವನ್ ಕಲ್ಯಾಣ್: ತಪ್ಪಿ ಹೋಯ್ತು ಹಿಟ್ ಸಿನಿಮಾ!
ನಿರ್ದೇಶಕರು ಕತೆ ಹೇಳುವಾಗ ನಿರ್ಮಾಪಕರು, ನಟರು ನಿದ್ರೆ ಹೋಗುವ ದೃಶ್ಯಗಳು ಸಿನಿಮಾಗಳಲ್ಲಿ ಹಾಸ್ಯ ದೃಶ್ಯಗಳಾಗಿ ಸಾಕಷ್ಟು ಬಾರಿ ಬಳಕೆ ಆಗಿವೆ. ಹಾಗೆಂದು ಇವು ಸುಳ್ಳಲ್ಲ. ಹಲವು ನಿರ್ದೇಶಕರು ಆ ಸಂದರ್ಭವನ್ನು ನಿಜವಾಗಿಯೂ ಎದುರಿಸಿದ್ದಾರೆ.
ಖ್ಯಾತ ನಟರುಗಳೇ ಒಮ್ಮೊಮ್ಮೆ ಕತೆ ಕೇಳುವ ಸಮಯದಲ್ಲಿ ನಿದ್ದೆಗೆ ಜಾರಿ ಬಿಡುತ್ತಾರೆ. ನಿರ್ಮಾಪಕರದ್ದೂ ಇದೇ ಕತೆ. ಹಲವು ನಿರ್ದೇಶಕರುಗಳು ತಮಗೆ ಆದ ಇಂಥಹಾ ಅನುಭವಗಳ ಬಗ್ಗೆ ಹೇಳಿಕೊಂಡಿದ್ದಾರೆ. ಖ್ಯಾತ ನಿರ್ದೇಶಕರು ಸಹ ಇಂಥಹಾ ಆರಂಭದಲ್ಲಿ ಇಂಥಹಾ ಅವಮಾನಗಳನ್ನು ಅನುಭವಿಸಿದವರೆ.
ತೆಲುಗಿನ ಸೂಪರ್ ಹಿಟ್ ನಿರ್ದೇಶಕರಲ್ಲಿ ಒಬ್ಬರಾದ ತ್ರಿವಿಕ್ರಮ್ ಶ್ರೀನಿವಾಸ್ ಸಹ ಇಂಥಹುದೇ ಸಂದರ್ಭ ಎದುರಿಸಿದ್ದರಂತೆ. ಸೂಪರ್ ಸ್ಟಾರ್ ಪವನ್ ಕಲ್ಯಾಣ್ಗೆ ಸಿನಿಮಾ ಕತೆ ಹೇಳಬೇಕಾದರೆ ಅವರು ನಿದ್ದೆಗೆ ಜಾರಿದ್ದಾರೆ. ಆದರೆ ಅಂದು ಪವನ್ ನಿದ್ದೆಗೆ ಜಾರಿದ್ದರಿಂದಲೇ ದೊಡ್ಡ ಹಿಟ್ ಒಂದನ್ನು ಮಿಸ್ ಮಾಡಿಕೊಂಡಿದ್ದಾರೆ.
ಕತೆ ಕೇಳುತ್ತಲೇ ನಿದ್ದೆ ಹೋದ ಪವನ್ ಕಲ್ಯಾಣ್
2005 ರಲ್ಲಿ ನಿರ್ದೇಶಕ ತ್ರಿವಿಕ್ರಮ್ ತಮ್ಮ ನಿರ್ದೇಶನದ ಎರಡನೇ ಸಿನಿಮಾವನ್ನು ಪವನ್ ಕಲ್ಯಾಣ್ ಜೊತೆಗೆ ಮಾಡುವ ಆಸೆಯಿಂದ ಪವನ್ ಕಲ್ಯಾಣ್ಗೆ ಕತೆ ಹೇಳಿದ್ದರು. ಆದರೆ ಕತೆ ಕೇಳುತ್ತಾ-ಕೇಳುತ್ತಾ ಪವನ್ ಕಲ್ಯಾಣ್ ನಿದ್ದೆ ಮಾಡಿಬಿಟ್ಟರಂತೆ. ಆ ಕತೆಯನ್ನೂ ಅವರು ಒಪ್ಪಿಕೊಳ್ಳಲಿಲ್ಲ. ಆದರೆ ಆ ಸಿನಿಮಾದಲ್ಲಿ ಬೇರೊಬ್ಬರು ನಟಿಸಿ ಆ ಸಿನಿಮಾ ಸೂಪರ್-ಡೂಪರ್ ಹಿಟ್ ಆಯಿತು.
ಕತೆ ಮಹೇಶ್ ಬಾಬು ಬಳಿಗೆ ಹೋಯಿತು
ಪವನ್ ಕಲ್ಯಾಣ್ ಹೀಗೆ ನಿದ್ದೆ ಹೋಗಿದ್ದರಿಂದ ಆ ಕತೆ ಮಹೇಶ್ ಬಾಬು ಬಳಿಗೆ ಹೋಯಿತು. ಬುದ್ಧಿವಂತ ಮಹೇಶ್ ಬಾಬು ನಿದ್ದೆ ಮಾಡಲಿಲ್ಲ. ಕತೆ ಕೇಳಿ ಒಪ್ಪಿಕೊಂಡು ನಟಿಸಿದರು. ಸಿನಿಮಾ ಸೂಪರ್-ಡೂಪರ್ ಹಿಟ್ ಆಯಿತು. ಆ ಸಿನಿಮಾದ ಹೆಸರು 'ಅತಡು'. ಮಹೇಶ್, ಸೋನು ಸೂದ್, ತ್ರಿಷಾ, ಪ್ರಕಾಶ್ ರೈ, ನಾಸರ್ ಮುಖ್ಯ ಭೂಮಿಕೆಯಲ್ಲಿದ್ದ ಸಿನಿಮಾ ಅದ್ಭುತ ಆಕ್ಷನ್-ಥ್ರಿಲ್ಲರ್ ಸಿನಿಮಾ.
ತ್ರಿವಿಕ್ರಮ್ ಪ್ರತಿಭೆ ಮೇಲೆ ನಂಬಿಕೆ ಬಂತು
ಆದರೆ ಆ ನಂತರ ತ್ರಿವಿಕ್ರಮ್ ಶ್ರೀನಿವಾಸ್ ಪ್ರತಿಭೆ ಮೇಲೆ ನಂಬಿಕೆ ಇಟ್ಟು 'ಅತಡು' ನಂತರ ತ್ರಿವಿಕ್ರಮ್ ನಿರ್ದೇಶಿಸಿದ ಮೂರನೇ ಸಿನಿಮಾಕ್ಕೆ ಡೇಟ್ಸ್ ನೀಡಿದರು. ಅದೇ 'ಜಲ್ಸಾ'. ಆ ಸಿನಿಮಾ ಸಹ ಸೂಪರ್ ಹಿಟ್ ಆಯಿತು. ಪವನ್ ಕಲ್ಯಾಣ್-ಇಲಿಯಾನ, ಪ್ರಕಾಶ್ ರೈ, ಬ್ರಹ್ಮಾನಂದಂ ನಟಿಸಿದ್ದ ಆ ಸಿನಿಮಾ ಪವನ್ ವೃತ್ತಿಜೀವನದ ದೊಡ್ಡ ಹಿಟ್ಗಳಲ್ಲಿ ಒಂದು.
Recommended Video
ತೀವ್ರವಾಗಿ ನೆಲಕಚ್ಚಿದ 'ಅಜ್ಞಾತವಾಸಿ'
ಅದರ ನಂತರ ಮತ್ತೆ 'ತೀನ್ಮಾರ್' ಎಂಬ ಹಿಂದಿ ರೀಮೇಕ್ ಸಿನಿಮಾ ಹಾಗೂ 'ಅತ್ತಾರಿಂಟಿಕಿ ದಾರೇದಿ' ಸಿನಿಮಾಗಳನ್ನು ತ್ರಿವಿಕ್ರಮ್ ಪವನ್ ಕಲ್ಯಾಣ್ಗಾಗಿ ನಿರ್ದೇಶಿಸಿದರು. 'ತೀನ್ ಮಾರ್' ಸಾಧಾರಣ ಯಶಸ್ಸು ಕಂಡರೆ 'ಅತ್ತಾರಿಂಟಿಕಿ ದಾರೇದಿ' ಸಿನಿಮಾ ಸೂಪರ್-ಡೂಪರ್ ಹಿಟ್ ಆಯಿತು. ಆದರೆ ಅದರ ಬಳಿಕ ತ್ರಿವಿಕ್ರಮ್ ನಿರ್ದೇಶಿಸಿ, ಪವನ್ ನಟಿಸಿದ 'ಅಜ್ಞಾತವಾಸಿ' ಸಿನಿಮಾ ಇನ್ನಿಲ್ಲದಂತೆ ನೆಲಕಚ್ಚಿತು.