Don't Miss!
- Sports RCB vs KKR: ಯಶ್ ಮೇಲೆ 'ದಯೆ' ತೋರುತ್ತಾರಾ ರಿಂಕು ಸಿಂಗ್?; ಜಿದ್ದು ತೀರಿಸಿಕೊಳ್ತಾರಾ ಆರ್ಸಿಬಿ ವೇಗಿ?
- Technology ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಡೀಪ್ಫೇಕ್ ದೊಡ್ಡ ಕಳವಳಕಾರಿ ಎಂದ ಮೋದಿ
- News ಚಿತ್ರದುರ್ಗದಲ್ಲಿ ಬಿಜೆಪಿಗೆ ಬಂಡಾಯದ ಬಿಸಿ: ಅಭ್ಯರ್ಥಿ ಬದಲಿಸದಿದ್ದರೆ ಪಕ್ಷೇತರ ಸ್ಪರ್ಧೆ, ಏ.3ಕ್ಕೆ ನಾಮಪತ್ರ ಸಲ್ಲಿಕೆ?
- Automobiles 20 ವರ್ಷದ ಬಳಿಕ ಲ್ಯಾಂಬೋರ್ಗಿನಿ ಲೋಗೋಗೆ ಹೊಸ ಟಚ್: ಈ ಕಂಪನಿಯ ಕಾರುಗಳು ಯಾಕೆ ಫೇಮಸ್?
- Lifestyle ಯಾವ ದಿಕ್ಕಿಗೆ ತಲೆ ಇಟ್ಟು ಮಲಗಬಾರದು..? ಹಿರಿಯರು ಈ ರೀತಿ ಹೇಳೋದೇಕೆ.?
- Finance 25ನೇ ವಯಸ್ಸಿನಲ್ಲಿ 25,000 ರೂ.ನಿಂದ 7,000 ಕೋಟಿ ಗಳಿಸಿದ ವ್ಯಕ್ತಿ ಬಗ್ಗೆ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರಾಮ ಮಂದಿರ ನಿರ್ಮಾಣ: ಪವನ್ ಕಲ್ಯಾಣ್ ಭಾರಿ ಮೊತ್ತ ದೇಣಿಗೆ
ತೆಲುಗಿನ ಖ್ಯಾತ ನಟ, ರಾಜಕಾರಣಿ ಪವನ್ ಕಲ್ಯಾಣ್ ರಾಮ ಮಂದಿರ ನಿರ್ಮಾಣಕ್ಕೆ ಭಾರಿ ಮೊತ್ತದ ದೇಣಿಗೆ ನೀಡಿದ್ದಾರೆ.
ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ಸಂಗ್ರಹಣೆ ಅಭಿಯಾನ ನಡೆಯುತ್ತಿದ್ದು, ಪವನ್ ಕಲ್ಯಾಣ್ ಅವರು 30 ಲಕ್ಷ ರೂಪಾಯಿ ಹಣವನ್ನು ಮಂದಿರ ನಿರ್ಮಾಣಕ್ಕೆ ದೇಣಿಗೆ ನೀಡಲಿದ್ದಾರೆ.
ತಿರುಪತಿ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ತಿರುಮಲ ವೆಂಕಟೇಶ್ವರ ಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿದ್ದ ಪವನ್ ಕಲ್ಯಾಣ್, ರಾಮ ಮಂದಿರ ನಿರ್ಮಾಣಕ್ಕೆ 30 ಲಕ್ಷ ರೂಪಾಯಿ ದೇಣಿಗೆ ನೀಡುವುದಾಗಿ ಘೋಷಿಸಿದ್ದಾರೆ.
ಜನಸೇನಾ ಪಕ್ಷದ ಸಂಸ್ಥಾಪಕರಾಗಿರುವ ಪವನ್ ಕಲ್ಯಾಣ್, ಬಿಜೆಪಿ ಯೊಂದಿಗೆ ಮೈತ್ರಿ ಮಾಡಿಕೊಂಡಿದ್ದಾರೆ. ತಿರುಪತಿ ಲೋಕಸಭೆ ಕ್ಷೇತ್ರದ ಚುನಾವಣೆ ನಡೆಯುತ್ತಿದ್ದು, ಚುನಾವಣಾ ಪ್ರಚಾರಕ್ಕಾಗಿ ಇಂದು ತಿರುಪತಿಗೆ ಭೇಟಿ ನೀಡಿದ್ದರು.
ಹಲವಾರು ಸೆಲೆಬ್ರಿಟಿಗಳು ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ನೀಡಿದ್ದಾರೆ. ಕನ್ನಡದ ನಟಿ ಪ್ರಣಿತಾ ಸಹ ಒಂದು ಲಕ್ಷ ಹಣವನ್ನು ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ನೀಡಿದ್ದಾರೆ.
Recommended Video
ಬಾಲಿವುಡ್ ನಟ ಅಕ್ಷಯ್ ಕುಮಾರ್ ಸಹ ರಾಮ ಮಂದಿರ ನಿರ್ಮಾಣಕ್ಕೆ ದೊಡ್ಡ ಮೊತ್ತ ದೇಣಿಗೆ ನೀಡಿದ್ದು, 'ರಾಮ ಮಂದಿರ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಿ' ಎಂದು ಮನವಿ ಸಹ ಮಾಡಿದ್ದಾರೆ.