ಪವನ್ಸ್ಟಾರ್ ಪವನ್ ಕಲ್ಯಾಣ್ಗೆ ಅನಾರೋಗ್ಯ: ಜನವಾಣಿ ಕಾರ್ಯಕ್ರಮ ರದ್ದು!
ಟಾಲಿವುಡ್ನ ಪವರ್ಸ್ಟಾರ್ ಪವನ್ ಕಲ್ಯಾಣ್ ಹಾಗೂ ಜನಸೇನಾ ಪಕ್ಷದ ಮುಖ್ಯಸ್ಥ ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಈ ಕಾರಣಕ್ಕೆ ಪವನ್ ಕಲ್ಯಾಣ್ ಆರೋಜಿಸಿದ್ದ ಜನವಾಣಿ ಜನಸೇನಾ ಭರೋಸ ಕಾರ್ಯಕ್ರಮವನ್ನು ಒಂದು ವಾರಗಳ ಕಾಲ ಮುಂದೂಡಲಾಗಿದೆ.
ಇತ್ತೀಚೆಗೆ ಪವನ್ ಕಲ್ಯಾಣ್ ಜನವಾಣಿ ಕಾರ್ಯಕ್ರಮದ ಅಂಗವಾಗಿ ಎರಡೂ ಗೋದಾವರಿ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಂಡಿದ್ದರು. ಈ ವೇಳೆ ಪವನ್ ಕಲ್ಯಾಣ್ ಆರೋಗ್ಯ ಹದಗೆಟ್ಟಿದೆ ಎಂದು ಹೇಳಲಾಗಿದೆ.
ಪವನ್ ಕಲ್ಯಾಣ್ಗೆ ವೈರಲ್ ಫೀವರ್
ಪವನ್ ಕಲ್ಯಾಣ್ ಒಬ್ಬರೇ ಅಲ್ಲ ಇವರೊಂದಿಗೆ ಪಕ್ಷದ ಕೆಲ ನಾಯಕರು, ಕಾರ್ಯಕಾರಿ ಸಮಿತಿ ಸದಸ್ಯರು, ಭದ್ರತಾ ಸಿಬ್ಬಂದಿ ಕೂಡ ಜ್ವರದಿಂದ ಬಳಲುತ್ತಿದ್ದಾರೆ. ಈ ಕಾರಣಕ್ಕೆ ಜನವಾಣಿ ಜನಸೇನಾ ಭರೋಸ ಕಾರ್ಯಕ್ರಮವನ್ನು ಜುಲೈ 24ರ ಬದಲಿಗೆ ಜುಲೈ 31ರಂದು ನಡೆಸಲಾಗುವುದು ಜನಸೇನಾ ರಾಜಕೀಯ ಪಕ್ಷ ತೀರ್ಮಾನಿಸಿದೆ. ಜನವಾಣಿಯ ಸ್ಥಳ, ಮತ್ತಿತರ ವಿವರಗಳನ್ನು ಅತೀ ಶೀಘ್ರದಲ್ಲೇ ಬಹಿರಂಗಪಡಿಸಲಾಗುವುದು ಎಂದು ಹೇಳಿದೆ.

ಪವನ್ ಕಲ್ಯಾಣ್ ಪ್ರತಿ ಭಾನುವಾರ ಜನವಾಣಿ-ಜನಸೇನಾ ಭರೋಸಾ ಎಂಬ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಿದ್ದರು. ಆದರೆ ವೈರಲ್ ಫೀವರ್ನಿಂದ ಈ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು. ವಿಜಯವಾಡ ಮತ್ತು ಭೀಮಾವರಂನಲ್ಲಿ ಈಗಾಗಲೇ ಮೂರು ಹಂತದಲ್ಲಿ ಜನವಾಣಿ ಕಾರ್ಯಕ್ರಮ ಪೂರ್ಣಗೊಂಡಿದೆ. ರಾಯಲಸೀಮಾ ಮತ್ತು ಉತ್ತರಾಂಧ್ರದಲ್ಲಿ ಇನ್ನೆರಡು ಕಾರ್ಯಕ್ರಮಗಳನ್ನು ಪವನ್ ಕಲ್ಯಾಣ್ ಹಮ್ಮಿಕೊಂಡಿದ್ದರು. ಆದರೆ ಅಷ್ಟರಲ್ಲಿ ಅವರು ಅನಾರೋಗ್ಯಕ್ಕೆ ತುತ್ತಾಗಿದ್ದಾರೆ. ಈ ಕಾರ್ಯಕ್ರಮವನ್ನು ಮುಂದೂಡಲಾಗಿದೆ.
Recommended Video


Click it and Unblock the Notifications











