Don't Miss!
- Sports CSK vs LSG IPL 2024: ಮಾರ್ಕಸ್ ಸ್ಟೋಯಿನಿಸ್ ಆರ್ಭಟಕ್ಕೆ ಸಿಎಸ್ಕೆ ಥಂಡಾ; ಚೆನ್ನೈಗೆ ನೀರು ಕುಡಿಸಿದ ಲಕ್ನೋ
- News ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ: ಕಾರಣ ತಿಳಿಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್
- Lifestyle ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಪವನ್ಸ್ಟಾರ್ ಪವನ್ ಕಲ್ಯಾಣ್ಗೆ ಅನಾರೋಗ್ಯ: ಜನವಾಣಿ ಕಾರ್ಯಕ್ರಮ ರದ್ದು!
ಟಾಲಿವುಡ್ನ ಪವರ್ಸ್ಟಾರ್ ಪವನ್ ಕಲ್ಯಾಣ್ ಹಾಗೂ ಜನಸೇನಾ ಪಕ್ಷದ ಮುಖ್ಯಸ್ಥ ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಈ ಕಾರಣಕ್ಕೆ ಪವನ್ ಕಲ್ಯಾಣ್ ಆರೋಜಿಸಿದ್ದ ಜನವಾಣಿ ಜನಸೇನಾ ಭರೋಸ ಕಾರ್ಯಕ್ರಮವನ್ನು ಒಂದು ವಾರಗಳ ಕಾಲ ಮುಂದೂಡಲಾಗಿದೆ.
ಇತ್ತೀಚೆಗೆ ಪವನ್ ಕಲ್ಯಾಣ್ ಜನವಾಣಿ ಕಾರ್ಯಕ್ರಮದ ಅಂಗವಾಗಿ ಎರಡೂ ಗೋದಾವರಿ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಂಡಿದ್ದರು. ಈ ವೇಳೆ ಪವನ್ ಕಲ್ಯಾಣ್ ಆರೋಗ್ಯ ಹದಗೆಟ್ಟಿದೆ ಎಂದು ಹೇಳಲಾಗಿದೆ.
ఈ నెల 31న తదుపరి జనవాణి - JanaSena Party PAC Chairman Shri @mnadendla pic.twitter.com/k9mWoMNt3Q
— JanaSena Party (@JanaSenaParty) July 20, 2022
ಪವನ್ ಕಲ್ಯಾಣ್ಗೆ ವೈರಲ್ ಫೀವರ್
ಪವನ್ ಕಲ್ಯಾಣ್ ಒಬ್ಬರೇ ಅಲ್ಲ ಇವರೊಂದಿಗೆ ಪಕ್ಷದ ಕೆಲ ನಾಯಕರು, ಕಾರ್ಯಕಾರಿ ಸಮಿತಿ ಸದಸ್ಯರು, ಭದ್ರತಾ ಸಿಬ್ಬಂದಿ ಕೂಡ ಜ್ವರದಿಂದ ಬಳಲುತ್ತಿದ್ದಾರೆ. ಈ ಕಾರಣಕ್ಕೆ ಜನವಾಣಿ ಜನಸೇನಾ ಭರೋಸ ಕಾರ್ಯಕ್ರಮವನ್ನು ಜುಲೈ 24ರ ಬದಲಿಗೆ ಜುಲೈ 31ರಂದು ನಡೆಸಲಾಗುವುದು ಜನಸೇನಾ ರಾಜಕೀಯ ಪಕ್ಷ ತೀರ್ಮಾನಿಸಿದೆ. ಜನವಾಣಿಯ ಸ್ಥಳ, ಮತ್ತಿತರ ವಿವರಗಳನ್ನು ಅತೀ ಶೀಘ್ರದಲ್ಲೇ ಬಹಿರಂಗಪಡಿಸಲಾಗುವುದು ಎಂದು ಹೇಳಿದೆ.
ಪವನ್ ಕಲ್ಯಾಣ್ ಪ್ರತಿ ಭಾನುವಾರ ಜನವಾಣಿ-ಜನಸೇನಾ ಭರೋಸಾ ಎಂಬ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಿದ್ದರು. ಆದರೆ ವೈರಲ್ ಫೀವರ್ನಿಂದ ಈ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು. ವಿಜಯವಾಡ ಮತ್ತು ಭೀಮಾವರಂನಲ್ಲಿ ಈಗಾಗಲೇ ಮೂರು ಹಂತದಲ್ಲಿ ಜನವಾಣಿ ಕಾರ್ಯಕ್ರಮ ಪೂರ್ಣಗೊಂಡಿದೆ. ರಾಯಲಸೀಮಾ ಮತ್ತು ಉತ್ತರಾಂಧ್ರದಲ್ಲಿ ಇನ್ನೆರಡು ಕಾರ್ಯಕ್ರಮಗಳನ್ನು ಪವನ್ ಕಲ್ಯಾಣ್ ಹಮ್ಮಿಕೊಂಡಿದ್ದರು. ಆದರೆ ಅಷ್ಟರಲ್ಲಿ ಅವರು ಅನಾರೋಗ್ಯಕ್ಕೆ ತುತ್ತಾಗಿದ್ದಾರೆ. ಈ ಕಾರ್ಯಕ್ರಮವನ್ನು ಮುಂದೂಡಲಾಗಿದೆ.
Recommended Video