Don't Miss!
- News Government Employees; ಸರ್ಕಾರಿ ನೌಕರರ ಜೀವ ವಿಮೆ ಪಾಲಿಸಿ ಅವಧಿ ಏರಿಕೆ
- Lifestyle ಬಾಯಿ ರುಚಿಗೆ ಗರಿ ಗರಿ ನಿಪ್ಪಟ್ಟು..! ಮನೆಯಲ್ಲೇ ಮಾಡಿ ಟೆಸ್ಟಿ ತಿಂಡಿ
- Automobiles Kia: ಬ್ರೇಕ್ ಇಲ್ಲದ ಟ್ರಕ್ನಂತೆ ಮುನ್ನುಗ್ಗುತ್ತಿದೆ ಕಿಯಾ: ಈಗ ಸಣ್ಣ ಪಟ್ಟಣಗಳಲ್ಲೂ ಸಿಗಲಿದೆ!
- Sports RCB vs KKR: ಯಶ್ ಮೇಲೆ 'ದಯೆ' ತೋರುತ್ತಾರಾ ರಿಂಕು ಸಿಂಗ್?; ಜಿದ್ದು ತೀರಿಸಿಕೊಳ್ತಾರಾ ಆರ್ಸಿಬಿ ವೇಗಿ?
- Technology ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಡೀಪ್ಫೇಕ್ ದೊಡ್ಡ ಕಳವಳಕಾರಿ ಎಂದ ಮೋದಿ
- Finance 25ನೇ ವಯಸ್ಸಿನಲ್ಲಿ 25,000 ರೂ.ನಿಂದ 7,000 ಕೋಟಿ ಗಳಿಸಿದ ವ್ಯಕ್ತಿ ಬಗ್ಗೆ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ವೇಶ್ಯಾವಾಟಿಕೆ ಜಾಲ : ಕಿರುತೆರೆ ನಟಿ ಬಂಧನ
ಮಾಂಸ ದಂಧೆ ನಡೆಯುತ್ತಿದೆ ಎಂದು ಮಾಹಿತಿ ಬಂದ ಹಿನ್ನೆಲೆಯಲ್ಲಿ ಬಂಜಾರಾ ಹಿಲ್ಸ್ ಪೊಲೀಸರು ಯಲ್ಲಾರೆಡ್ಡಿಗುಡದಲ್ಲಿರುವ ಪ್ರಗತಿ ನಗರದಲ್ಲಿನ ಮನೆಯೊಂದರ ಮೇಲೆ ದಾಳಿ ಮಾಡಿದಾಗ ಪುಷ್ಪಾಂಜಲಿ ಅಲಿಯಾಸ್ ಪುಷ್ಪಾ ಎಂಬ 22 ವರ್ಷದ ಟಿವಿ ನಟಿ ಮತ್ತು ಶ್ರೀಕಾಕುಲಂನ ಮತ್ತೊಬ್ಬ ನಹನಟಿ 24 ವರ್ಷದ ಸಪ್ನಾ ಎಂಬಾಕೆಯನ್ನು ಬಂಧಿಸಿದರು.
ಇವರಿಬ್ಬರ ಜೊತೆ ರಾಜು ಅಲಿಯಾಸ್ ರಾಜೇಶ್ ಎಂಬ ನಿರ್ಮಾಪಕನನ್ನೂ ತಮ್ಮ ವಶಕ್ಕೆ ಪೊಲೀಸರು ತೆಗೆದುಕೊಂಡಿದ್ದಾರೆ. ಮನೆಯಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಲೋಕೇಶ್ ಎಂಬ ಪಿಂಪ್ನನ್ನೂ ಪೊಲೀಸರು ಬಂಧಿಸಿದ್ದಾರೆ. ಯುವ ನಟಿಯರನ್ನು ಕರೆತರುವ ಕೆಲಸ ರಾಜು ಮಾಡುತ್ತಿದ್ದರೆ, ವಿಟರನ್ನು ಸೆಳೆಯುವ ಕೆಲಸ ಲೋಕೇಶ್ ಮಾಡುತ್ತಿದ್ದ.
ಟಿವಿ ಮತ್ತು ಸಿನೆಮಾದಲ್ಲಿ ಕೆಲಸ ಕೊಡಿಸುವುದಾಗಿ ಆಮಿಷವೊಡ್ಡಿ ನಿರ್ಮಾಪಕ ರಾಜೇಶ್ ಯುವ ಮತ್ತು ಅಮಾಯಕ ನಟಿಯರನ್ನು ಈ ಜಾಲದಲ್ಲಿ ಎಳೆದುತರುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಹಿರಿತೆರೆ ಮತ್ತು ಕಿರುತೆರೆಯಲ್ಲಿ ಯುವ ನಟಿಯರನ್ನು ನಿರ್ಮಾಪಕರು ದುರ್ಬಳಸಿಕೊಳ್ಳುತ್ತಿರುವುದಕ್ಕೆ ಈ ಘಟನೆ ಮತ್ತೊಂದು ಸಾಕ್ಷಿಯಾಗಿದೆ.
ಕಳೆದ ವರ್ಷ ಬೆಂಗಳೂರಿನ ಲೊಟ್ಟೆಗೊಲ್ಲನಹಳ್ಳಿಯಲ್ಲಿ ನಡೆದ ದಾಳಿಯಲ್ಲಿ ಕನ್ನಡದ ಕಿರುತೆರೆ ನಟಿ ರೂಪಾ ಎಂಬಾಕೆಯನ್ನು ಸಂಜಯನಗರ ಪೊಲೀಸರು ಬಂಧಿಸಿದ್ದರು. ಆಕೆಯ ಜೊತೆ ಮೂವರು ನಿರೂಪಕಿಯರನ್ನು ಕೂಡ ಪೊಲೀಸರು ಬಂಧಿಸಿದ್ದರು.