Don't Miss!
- News ಲೋಕಸಭಾ ಚುನಾವಣೆ: ಮೈಸೂರು ಜಿಲ್ಲೆಯಲ್ಲಿ ಭದ್ರತೆಗೆ 5 ಸಾವಿರ ಪೊಲೀಸರ ನಿಯೋಜನೆ
- Sports IPL 2024: ಆರ್ಸಿಬಿಗೆ ವಿರಾಟ್, ಪಾಟಿದಾರ್ ಆಸರೆ: ಹೈದರಾಬಾದ್ಗೆ ಸವಾಲಿನ ಟಾರ್ಗೆಟ್
- Lifestyle ಪುಟ್ಟ ಕಂದಮ್ಮಗಳ ಮುಖದಲ್ಲಿ ನಗು ತರಿಸಲು ಟೀಚರ್ ಮಾಡಿದ ಕೆಲಸ ನೋಡಿ, ಮಕ್ಕಳ ಪಾಲಿನ ದೇವತೆ ಇವರು
- Automobiles Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಪುಷ್ಪ' ಸಿನಿಮಾದ ಹಾಡಿನ ದೃಶ್ಯ ಲೀಕ್: ಬಹಳ ಕಷ್ಟಪಡುತ್ತಿದ್ದಾರೆ ಅಲ್ಲು ಅರ್ಜುನ್
ಅಲ್ಲು ಅರ್ಜುನ್ ನಟನೆಯ 'ಪುಷ್ಪ' ಸಿನಿಮಾದ ಚಿತ್ರೀಕರಣ ಬಲು ಜೋರಾಗಿ ನಡೆಯುತ್ತಿದೆ. ಸಿನಿಮಾದ ಮೊದಲ ಪೋಸ್ಟರ್ ಬಿಡುಗಡೆ ಆದಾಗಿನಿಂದಲೂ ಸಿನಿಮಾದ ಬಗ್ಗೆ ಭಾರಿ ಕುತೂಹಲ ಎದ್ದಿದೆ. ಅದಕ್ಕೆ ತಕ್ಕಂತೆ ಗುಟ್ಟಾಗಿ ಚಿತ್ರೀಕರಣ ಮಾಡುತ್ತಿದ್ದಾರೆ ನಿರ್ದೇಶಕ ಸುಕುಮಾರ್.
Recommended Video
ಆದರೆ ಇದೀಗ 'ಪುಷ್ಪ' ಸಿನಿಮಾದ ಹಾಡಿನ ಚಿತ್ರೀಕರಣದ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಈ ವಿಡಿಯೋವನ್ನು ಯಾರೊ ಪ್ರೇಕ್ಷಕರು ಹಂಚಿಕೊಂಡಿದ್ದಾರೆಯೇ ವಿನಃ, ಚಿತ್ರತಂಡದ ಸದಸ್ಯರಿಂದ ಆದ ಪ್ರಮಾದವಲ್ಲ.
ಆರ್ಆರ್ಆರ್, ಅಣ್ಣಾತ್ತೆ ಬಳಿಕ ಪುಷ್ಪ ಚಿತ್ರದ ಬಿಡುಗಡೆ ದಿನಾಂಕವೂ ಘೋಷಣೆ
'ಪುಷ್ಪ' ಸಿನಿಮಾದ ಹಾಡಿನ ಚಿತ್ರೀಕರಣ ಮಾಡುವ ವೇಳೆ ಚಿತ್ರೀಕರಣ ನೋಡಲೆಂದು ಮರ ಹತ್ತಿದ್ದ ಅಭಿಮಾನಿಯೊಬ್ಬ ಚಿತ್ರೀಕರಣದ ವಿಡಿಯೋ ಮಾಡಿ ಅದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾನೆ.
ವಿಡಿಯೋ ಅಸ್ಪಷ್ಟವಾಗಿದೆ
ವಿಡಿಯೋ ಬಹಳ ಅಸ್ಪಷ್ಟವಾಗಿದೆ, ಆದರೆ ಹಾಡಿನ ಸಂಗೀತ ಸ್ಪಷ್ಟವಾಗಿ ಕೇಳುತ್ತದೆ. ಹಾಡಿನ ಸಾಹಿತ್ಯ ಕೇಳುವುದಿಲ್ಲ. ಚಿತ್ರೀಕರಣದ ಕೆಲವು ಚಿತ್ರಗಳು ಸಹ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಅತ್ಯಂತ ಕೊಳಕಾದ ಉಡುಗೆ ತೊಟ್ಟು ಖರಾಬ್ ಆಗಿ ಕಾಣುತ್ತಿದ್ದಾರೆ ನಟ ಅಲ್ಲು ಅರ್ಜುನ್.
ಚಿತ್ರಗಳು ಕೆಲವು ಲೀಕ್ ಆಗಿವೆ
ಘನ ಅರಣ್ಯದಲ್ಲಿ, ಅತ್ಯಂತ 'ರಿಮೋಟ್' ಜಾಗಗಳಲ್ಲಿ ಪುಷ್ಪ ಸಿನಿಮಾದ ಚಿತ್ರೀಕರಣ ಮಾಡಲಾಗುತ್ತಿತ್ತು. ಪ್ರಸ್ತುತ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಚಿತ್ರಗಳನ್ನು ನೋಡಿದರೆ ಗೊತ್ತಾಗುತ್ತಿದೆ ಅಲ್ಲು ಅರ್ಜುನ್ ಪಡುತ್ತಿರುವ ಶ್ರಮ.
ಇಬ್ಬರು ನಟರು ನಿರಾಕರಿಸಿದ್ದ ಸಿನಿಮಾದಲ್ಲಿ ಅಲ್ಲು ಅರ್ಜುನ್, ವಿಜಯ್ ದೇವರಕೊಂಡ
ಅಲ್ಲು ಅರ್ಜುನ್ ಜೊತೆಗೆ ಮೂರನೇ ಸಿನಿಮಾ
'ಪುಷ್ಪ' ಸಿನಿಮಾ ತೆಲುಗಿನ ಬಹುನಿರೀಕ್ಷಿತ ಸಿನಿಮಾ ಆಗಿದ್ದು, ಸಿನಿಮಾವನ್ನು ಖ್ಯಾತ ನಿರ್ದೇಶಕ ಸುಕುಮಾರ್ ನಿರ್ದೇಶಿಸುತ್ತಿದ್ದಾರೆ. ಅಲ್ಲು ಅರ್ಜುನ್ ಜೊತೆಗೆ 'ಆರ್ಯಾ', 'ಆರ್ಯಾ2' ಮಾಡಿರುವ ಸುಕುಮಾರ್ ಗೆ ಅಲ್ಲು ಅರ್ಜುನ್ ಜೊತೆಗಿನ ಮೂರನೇ ಸಿನಿಮಾ ಇದು.
ರಶ್ಮಿಕಾ ಮಂದಣ್ಣ ನಾಯಕಿ
'ಪುಷ್ಪ' ಸಿನಿಮಾವು ರಕ್ತ ಚಂದನ ಕಳ್ಳ ಸಾಗಣೆದಾರನ ಕತೆಯಾಗಿದ್ದು, ಸಿನಿಮಾದಲ್ಲಿ ಕನ್ನಡತಿ ರಶ್ಮಿಕಾ ಮಂದಣ್ಣ ನಾಯಕಿಯಾಗಿದ್ದಾರೆ. ತಮಿಳಿನ ಖ್ಯಾತ ನಟ ಚಿಯಾನ್ ವಿಕ್ರಂ ಸಹ ಸಿನಿಮಾದಲ್ಲಿದ್ದು, ಅವರ ಪಾತ್ರದ ಬಗ್ಗೆ ಚಿತ್ರತಂಡ ಮಾಹಿತಿ ನೀಡಿಲ್ಲ. ವಿಕ್ರಂ ಅವರು ವಿಲನ್ ಪಾತ್ರದಲ್ಲಿ ನಟಿಸಲಿದ್ದಾರೆ ಎನ್ನಲಾಗುತ್ತಿದೆ.
ಕುಟುಂಬದಿಂದ ವಿರೋಧ ಎದುರಿಸಿದ್ದ ಅಲ್ಲು ಅರ್ಜುನ್-ಸ್ನೇಹಾ ರೆಡ್ಡಿ ಲವ್ ಸ್ಟೋರಿ