Don't Miss!
- News 5 ವರ್ಷಗಳಲ್ಲಿ ಕರ್ನಾಟಕ ಸಂಸದರ ಸಾಧನೆ ಏನು? ಅಧ್ಯಯನ ಹೇಳೋದೇನು?
- Sports ಟಿ20 ವಿಶ್ವಕಪ್ಗೆ ಭಾರತ ತಂಡದಲ್ಲಿ ಕೆಎಲ್ ರಾಹುಲ್ಗೆ ಸ್ಥಾನ?; ರಾಬಿನ್ ಉತ್ತಪ್ಪ ಹೇಳಿದ್ದೇನು?
- Technology ಆನ್ಲೈನ್ ಶಾಪಿಂಗ್ ಮಾಡಲು ಇಲ್ಲಿವೇ ನೋಡಿ ಬೆಸ್ಟ್ ವೆಬ್ಸೈಟ್ಗಳು!
- Automobiles Hyundai: ಹಳೆಯ ಹ್ಯುಂಡೈ ಕ್ರೆಟಾವನ್ನು ಮರೆತುಬಿಡಿ... ಹೊಸ ಕ್ರೆಟಾ ಈಗ ಮತ್ತಷ್ಟು ಪ್ರೀಮಿಯಂ SUV
- Finance ಸಂಸ್ಥೆಯ ಎಲ್ಲ 30,000 ಉದ್ಯೋಗಿಗಳಿಗೆ ವರ್ಕ್ ಫಮ್ ಹೋಂ ನೀಡಿದ ಟೆಕ್ ಕಂಪೆನಿ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಈ' ಕಾರಣಕ್ಕಾಗಿ ಪವನ್ ಕಲ್ಯಾಣ್ ಗೆ ನಿರ್ದೇಶನ ಮಾಡುವುದಿಲ್ಲವಂತೆ ರಾಜಮೌಳಿ
ಖ್ಯಾತ ನಿರ್ದೇಶಕ ರಾಜಮೌಳಿ ಸಿನಿಮಾ ಅಂದರೆ ಸಿನಿಪ್ರಿಯರ ನಿರೀಕ್ಷೆ ದುಪ್ಪಟ್ಟಾಗಿರುತ್ತೆ. ರಾಜಮೌಳಿ ಜೊತೆ ಕೆಲಸ ಮಾಡಲು ಭಾರತೀಯ ಚಿತ್ರರಂಗದ ಪ್ರತಿಯೊಬ್ಬ ಸ್ಟಾರ್ ನಟನು ತುದಿಗಾಲಿನಲ್ಲಿ ನಿಂತಿರುತ್ತಾರೆ. ಬಾಹುಬಲಿ ಸಿನಿಮಾ ನಂತರ ಮತ್ತಷ್ಟು ಖ್ಯಾತಿ ಗಳಿಸಿರುವ ರಾಜಮೌಳಿ ಭಾರತೀಯ ಚಿತ್ರರಂಗದ ಹೆಮ್ಮೆಯ ನಿರ್ದೇಶಕ.
Recommended Video
ಕನ್ನಡದ ನಟ ಸುದೀಪ್ ಸೇರಿದಂತೆ ಟಾಲಿವುಡ್ ನ ಬಹುತೇಕ ಸ್ಟಾರ್ ನಟರಿಗೆ ನಿರ್ದೇಶನ ಮಾಡಿರುವ ರಾಜಮೌಳಿ, ಪವರ್ ಸ್ಟಾರ್ ಪವನ್ ಕಲ್ಯಾಣ್ ಗೆ ಮಾತ್ರ ನಿರ್ದೇಶನ ಮಾಡುವುದಿಲ್ಲ ಎನ್ನುವ ಮೂಲಕ ಅಚ್ಚರಿ ಮೂಡಿದ್ದಾರೆ. ಪವನ್ ಕಲ್ಯಾಣ್ ಕಾಲ್ ಶೀಟ್ ಗಾಗಿ ಅನೇಕ ನಿರ್ದೇಶಕರು ಕಾದು ಕುಳಿತಿದ್ದಾರೆ. ಆದರೆ ರಾಜಮೌಳಿ ಮಾತ್ರ ಸಿನಿಮಾ ಮಾಡುವುದಿಲ್ಲವಂತೆ. ಮುಂದೆ ಒದಿ...
ಪವನ್ ಕಲ್ಯಾಣ್ ಗೆ ನಿರ್ದೇಶನ ಮಾಡಲ್ಲ ಎಂದ ರಾಜಮೌಳಿ
ಸಾಕಷ್ಟು ಸ್ಟಾರ್ ನಟರಿಗೆ ನಿರ್ದೇಶನ ಮಾಡಿರುವ ರಾಜಮೌಳಿ ಸದ್ಯ ಜೂ.ಎನ್ ಟಿ ಆರ್ ಮತ್ತು ರಾಮ್ ಚರಣ್ ಜೊತೆ ಆರ್ ಆರ್ ಆರ್ ಸಿನಿಮಾ ಮಾಡುತ್ತಿದ್ದಾರೆ. ಈ ನಡುವೆ ರಾಜಮೌಳಿ ಪವರ್ ಸ್ಟಾರ್ ಪವನ್ ಕಲ್ಯಾಣ್ ಅವರಿಗೆ ನಿರ್ದೇಶನ ಮಾಡಲು ಸಾಧ್ಯವಿಲ್ಲ ಎನ್ನುವ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಅಂದರೆ ಪವನ್ ಕಲ್ಯಾಣ್ ಮತ್ತು ರಾಜಮೌಳಿ ನಡುವೆ ಏನಾಗಿದೆ? ಇಬ್ಬರ ಸ್ನೇಹ ಸಂಬಂಧ ಚೆನ್ನಾಗಿಲ್ಲವಾ?ಅಂತ ಅಂದುಕೊಳ್ಳಬೇಡಿ. ಕಾರಣ ಬೇರೆಯದ್ದೆ ಇದೆ.
ಕಾರಣವೇನು?
ನಟ ಪವನ್ ಕಲ್ಯಾಣ್ ಗೆ ರಾಜಮೌಳಿ ಸಿನಿಮಾ ನಿರ್ದೇಶನ ಮಾಡದಿರಲು ಬಲವಾದ ಕಾರಣವಿದೆ. ರಾಜಮೌಳಿ ಹೇಳುವ ಪ್ರಕಾರ "ಪವನ್ ಕಲ್ಯಾಣ್ ಒಬ್ಬ ಬದ್ಧ ನಾಯಕ. ಅವರ ಮುಖ್ಯ ಗಮನ ರಾಜಕೀಯದ ಕಡೆ. ವರ್ಷದದಲ್ಲಿ ಸಿನಿಮಾಗೆ ನೀಡುವುದು ಕೆಲವೇ ಕೆಲವು ದಿನಗಳು ಮಾತ್ರ. ಆದರೆ ರಾಜಮೌಳಿ ಚಿತ್ರಗಳು ಸಂಪೂರ್ಣವಾಗಿ ಮುಗಿಯಲು ವರ್ಷವೆ ಆಗುತ್ತೆ. ಹಾಗಾಗಿ ಪವನ್ ಕಲ್ಯಾಣ್ ಅವರಿಂದ ಎರಡೂ ಮೂರು ವರ್ಷ ಸಮಯ ಕೇಳುವುದು ಸೂಕ್ತವಲ್ಲ ಎನ್ನುವ ಕಾರಣಕ್ಕೆ ಅವರಿಗೆ ನಿರ್ದೇಶನ ಮಾಡುವುದಿಲ್ಲ" ಎಂದು ಹೇಳಿದ್ದಾರೆ.
ವಕೀಲ್ ಸಾಬ್ ಸಿನಿಮಾದಲ್ಲಿ ಪವನ್ ಕಲ್ಯಾಣ್
ಪವನ್ ಕಲ್ಯಾಣ್ ರಾಜಕೀಯದ ಜೊತೆಗೂ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಸದ್ಯ ಪವನ್ ವಕೀಲ್ ಸಾಬ್ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಬಾಲಿವುಡ್ ನ ಪಿಂಕ್ ಸಿನಿಮಾದ ತೆಲುಗು ರಿಮೇಕ್ ಇದಾಗಿದ್ದು ಚಿತ್ರದಲ್ಲಿ ಅಮಿತಾಬ್ ಬಚ್ಚನ್ ಅಭಿನಯಿಸಿದ್ದ ಪಾತ್ರದಲ್ಲಿ ಪವನ್ ಕಲ್ಯಾಣ್ ಕಾಣಿಸಿಕೊಳ್ಳುತ್ತಿದ್ದಾರೆ.
ಮಹೇಶ್ ಬಾಬುಗೆ ರಾಜಮೌಳಿ ನಿರ್ದೇಶನ
ರಾಜಮೌಳಿ ಸದ್ಯ ಆರ್ ಆರ್ ಆರ್ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಈ ಸಿನಿಮಾ ಮುಗಿಯುತ್ತಿದ್ದಂತೆ ರಾಜಮೌಳಿ ಪ್ರಿನ್ಸ್ ಮಹೇಶ್ ಬಾಬುಗೆ ನಿರ್ದೇಶನ ಮಾಡುತ್ತಿದ್ದಾರೆ. ಮಹೇಶ್ ಬಾಬು ಸದ್ಯ ಪರಶುರಾಮ್ ಸಿನಿಮಾದ ಕಾಣಿಸಿಕೊಳ್ಳುತ್ತಿದ್ದಾರೆ. ಈ ಸಿನಿಮಾ ಮುಗಿದ ಬಳಿಕ ರಾಜಮೌಳಿ ಸಿನಿಮಾ ಪ್ರಾರಂಭವಾಗಲಿದೆ.