Don't Miss!
- News Namma Metro Blue Line: ಇತರ ಮಾರ್ಗಕ್ಕಿಂತಲೂ 'ನೀಲಿ' ಮಾರ್ಗದಲ್ಲಿ ವೇಗವಾಗಿ ಓಡಲಿವೆ ಮೆಟ್ರೋ, ಅಪ್ಡೇಟ್
- Lifestyle UPSCಯಲ್ಲಿ 2ನೇ ರ್ಯಾಂಕ್ ಗಳಿಸಿದ ಸಾಧಕನ ಡ್ಯಾನ್ಸ್ ವೀಡಿಯೋ ವೈರಲ್: ಇವರ ಬದುಕಿನಲ್ಲಿ ನಡೆದಿದೆ ಹಲವು ದುರಂತಗಳು
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Sports CSK vs LSG IPL 2024: ಚೆನ್ನೈ vs ಲಕ್ನೋ ಹೈ-ವೋಲ್ಟೇಜ್ ಪಂದ್ಯದ ಟಾಸ್ ವರದಿ; ಆಡುವ 11ರ ಬಳಗ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಚಿರಂಜೀವಿ 'ಆಚಾರ್ಯ' ಸಿನಿಮಾದಲ್ಲಿ ನಟ ರಾಮ್ ಚರಣ್ ಪಾತ್ರಕ್ಕೆ ಕತ್ತರಿ
ಮೆಗಾ ಸ್ಟಾರ್ ಚಿರಂಜೀವಿ ಅಭಿನಯದ ಬಹು ನಿರೀಕ್ಷೆಯ ಆಚಾರ್ಯ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಈಗಾಗಲೆ ಚಿತ್ರೀಕರಣ ಪ್ರಾರಂಭವಾಗಿದ್ದು, ಕೆಲವು ಪ್ರಮುಖ ಭಾಗದ ಚಿತ್ರೀಕರಣ ಮಾಡಿ ಮುಗಿಸಿದ್ದಾರೆ. ಆದರೆ ಆಗಲೆ ಲಾಕ್ ಡೌನ್ ಆದ ಪರಿಣಾಮ ಚಿತ್ರೀಕರಣ ಸ್ಥಗಿತವಾಗಿದೆ. ಇತ್ತೀಚಿಗೆ ಆಚಾರ್ಯ ಸಿನಿಮಾ ನಾಯಕಿ ವಿಚಾರವಾಗಿ ಸಿಕ್ಕಾಪಟ್ಟೆ ಸದ್ದು ಮಾಡುತ್ತಿತ್ತು.
Recommended Video
ನಟಿ ತ್ರಿಷಾ ಮೊದಲ ನಾಯಕಿಯಾಗಿ ಆಯ್ಕೆಯಾಗಿದ್ದರು. ಆದರೆ ತ್ರಿಷಾ ಸಿನಿಮಾದಿಂದ ಹೊರಬಂದ ಬಳಿಕ ನಾಯಕಿ ಯಾರಗಲಿದ್ದಾರೆ ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಇತ್ತು. ಆದರೀಗ ತ್ರಿಷಾ ಜಾಗಕ್ಕೆ ನಟಿ ಕಾಜಲ್ ಅಗರವಾಲ್ ಕಾಣಿಸಿಕೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿದೆ.
ಮೆಗಾಸ್ಟಾರ್ ಚಿರಂಜೀವಿ ನೀಡಿದ ಆಫರ್ ತಿರಸ್ಕರಿಸಿದರೇ ಸಾಯಿ ಪಲ್ಲವಿ
ವಿಶೇಷ ಅಂದರೆ ಚಿತ್ರದಲ್ಲಿ ನಟ ರಾಮ್ ಚರಣ್ ಅತಿಥಿ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ರಾಮ್ ಚರಣ್ ಅಭಿನಯದ ಜೊತೆಗೆ ನಿರ್ಮಾಣ ಕೂಡ ಮಾಡುತ್ತಿದ್ದಾರೆ. ಇದೀಗ ಸಿನಿಮಾದಿಂದ ಮತ್ತೊಂದು ಸುದ್ದಿ ಕೇಳಿ ಬರುತ್ತಿದೆ. ನಿರ್ದೇಶಕ ಕೊರಟಾಲ ಶಿವ ರಾಮ್ ಚರಣ್ ಪಾತ್ರದ ಬಗ್ಗೆ ಮತ್ತೊಂದು ನಿರ್ಧಾರ ತೆಗೆದುಕೊಂಡಿದ್ದಾರೆ.
ಚಿತ್ರದಲ್ಲಿ ನಟ ರಾಮ್ ಚರಣ್ ಪಾತ್ರಕ್ಕೆ ಕತ್ತರಿ ಹಾಕಿದ್ದಾರಂತೆ. ಪಾತ್ರದ ಅವದಿ ಕಡಿಮೆ ಮಾಡಲು ಕತ್ತರಿ ಪ್ರಯೋಗ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ. ಅಂದ್ಮೇಲೆ ಸಿನಿಮಾದ ಕಥೆಯಲ್ಲಿ ಕೊಂಚ ಬದಲಾವಣೆ ಮಾಡಲಾಗಿದೆಯಂತೆ. ರಾಮ್ ಚರಣ್ ಅತಿಥಿ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವುದು, ಮೊದಲೆ ಪಾತ್ರದ ಅವಧಿ ಕಡಿಮೆ ಇರುತ್ತೆ. ಹೀಗಿರುವಾಗ ಪಾತ್ರಕ್ಕೆ ಕತ್ತರಿ ಹಾಕಿರುವುದು ಅಭಿಮಾನಿಗಳಿಗೆ ಬೇಸರ ಮೂಡಿಸಿದೆ.
ರಾಮ್ ಚರಣ್ ಸದ್ಯ ರಾಮಮೌಳಿ ನಿರ್ದೇಶನದ ಆರ್ ಆರ್ ಆರ್ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಜೂ.ಎನ್ ಟಿ ಆರ್ ಮತ್ತೋರ್ವ ನಾಯಕನಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಅಜಯ್ ದೇವಗನ್ ಕೂಡ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ.