Don't Miss!
- Lifestyle ವೋಟರ್ ಐಡಿ ಇಲ್ಲದೆಯೂ ಮತ ಚಲಾಯಿಸಬಹುದು.! ಹೇಗೆ ಗೊತ್ತಾ?
- Technology SmartGlass: ಮೆಟಾ ರೇ-ಬ್ಯಾನ್ ಸ್ಮಾರ್ಟ್ ಗ್ಲಾಸ್ ಬಳಕೆದಾರರು ಇನ್ಮುಂದೆ ವಿಡಿಯೋ ಕಾಲ್ ಮಾಡಬಹುದು!
- Automobiles ಕ್ರ್ಯಾಶ್ ಟೆಸ್ಟ್ನಲ್ಲಿ ಕಳಪೆ ಪ್ರದರ್ಶನ ನೀಡಿ ನಿರಾಸೆ ಮೂಡಿಸಿದ ಮಧ್ಯಮ ವರ್ಗದ ಮೆಚ್ಚಿನ ಸ್ವದೇಶಿ ಕಾರು
- Sports 2025ರ ಚಾಂಪಿಯನ್ಸ್ ಟ್ರೋಫಿಗಾಗಿ ಭಾರತ ತಂಡ ಪಾಕಿಸ್ತಾನಕ್ಕೆ ಪ್ರಯಾಣಿಸಲಿದೆಯೇ?; ಬಿಸಿಸಿಐ ಹೇಳಿದ್ದೇನು?
- News ಮೋದಿ ಯಾರ ಪರ; ಪ್ರಧಾನಿಯಾಗಿ 16 ಲಕ್ಷ ಕೋಟಿ ಸಾಲ ಮನ್ನಾ ಮಾಡಿದ್ದು ಯಾರದ್ದು? ಸಿದ್ದರಾಮಯ್ಯ
- Finance ಬೆಂಗಳೂರಿನಲ್ಲಿ ಈ ಮೂರು ದಿನಗಳ ಕಾಲ ಮದ್ಯ ಮಾರಾಟ ನಿಷೇಧ, ದಿನಾಂಕ, ಸಮಯ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಶಂಕರ್ ಸಿನಿಮಾ ಮುಗಿದ ಬಳಿಕವೇ ಮತ್ತೆ ದಂಗೆ ಏಳಲು ಸಜ್ಜಾದ ರಾಮ್ ಚರಣ್!
RRR ಸಿನಿಮಾ ಬಳಿಕ ಮೆಗಾ ಪವರ್ಸ್ಟಾರ್ ರಾಮ್ ಚರಣ್ ತೇಜಾ ಯಶಸ್ಸಿನ ಅಲೆಯಲ್ಲಿ ತೇಲುತ್ತಿದ್ದಾರೆ. 'ಆಚಾರ್ಯ' ಸಿನಿಮಾ ಬಾಕ್ಸಾಫೀಸ್ನಲ್ಲಿ ಹೀನಾಯವಾಗಿ ಸೋತರೂ, ರಾಮ್ ಚರಣ್ಗೆ ಅದರ ಬಿಸಿ ಮುಟ್ಟಿಲ್ಲ. ಹೀಗಾಗಿ ಹೊಸ ಸಿನಿಮಾಗಳು ಇವರನ್ನು ಹುಡುಕಿಕೊಂಡು ಬರುತ್ತಲೇ ಇವೆ.
ರಾಮ್ ಚರಣ್ ಸದ್ಯ ದುಬಾರಿ ನಿರ್ದೇಶಕ ಶಂಕರ್ ಜೊತೆ ಸಿನಿಮಾ ಮಾಡುತ್ತಿದ್ದಾರೆ. ಇದು ಶಂಕರ್ ಹಾಗೂ ರಾಮ್ ಚರಣ್ ತೇಜಾ ಕಾಂಬಿನೇಷನ್ನ ಮೊದಲ ಸಿನಿಮಾ. ಈ ಸಿನಿಮಾ ನೋಡುವುದಕ್ಕೆ ಮೆಗಾ ಪವರ್ಸ್ಟಾರ್ ಅಭಿಮಾನಿಗಳು ತುದಿಗಾಲಲ್ಲಿ ನಿಂತಿದ್ದಾರೆ.
'RRR 2' ಸೆಟ್ಟೇರೋದು ಕನ್ಫರ್ಮ್ ಎಂದ ರಾಜಮೌಳಿ: ಮಹೇಶ್ ಬಾಬು ಸಿನಿಮಾ ಕಥೆಯೇನು?
ಈ ಮಧ್ಯೆನೇ ರಾಮ್ ಚರಣ್ ತೇಜಾ ಮತ್ತೊಂದು ಸಿನಿಮಾ ಒಪ್ಪಿಕೊಂಡಿದ್ದಾರೆ. ಇದು ಕೂಡ ಪ್ಯಾನ್ ಇಂಡಿಯಾ ಸಿನಿಮಾನೇ. ಈಗಾಗಲೇ 100 ಕೋಟಿ ಸಿನಿಮಾ ನೀಡಿರುವ ನಿರ್ದೇಶಕರು ರಾಮ್ ಚರಣ್ಗೆ ಆಕ್ಷನ್ ಕಟ್ ಹೇಳುವುದು ಬಹುತೇಕ ಕನ್ಫರ್ಮ್ ಆಗಿದೆ.
'ಉಪ್ಪೆನ' ನಿರ್ದೇಕರಿಂದ ಆಕ್ಷನ್ ಕಟ್
ರಾಮ್ ಚರಣ್ ತೇಜಾ ಈಗ ಸಿಕ್ಕಾಪಟ್ಟೆ ಬ್ಯುಸಿಯಾಗಿಯಾಗಿದ್ದಾರೆ. ಈ ನಡುವೆನೇ ಮತ್ತೊಂದು ಪ್ಯಾನ್ ಇಂಡಿಯಾ ಸಿನಿಮಾಗೆ ಗ್ರೀನ್ ಸಿಗ್ನಲ್ ಕೊಟ್ಟಿದ್ದು, 'ಉಪ್ಪೆನ' ಸಿನಿಮಾದ ನಿರ್ದೇಶಕ ಬುಚ್ಚಿ ಬಾಬು ಸನಾ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಮೆಗಾ ಕುಟುಂಬದ ಕುಡಿ ವೈಷ್ಣವ್ ತೇಜ್ ಅನ್ನು ತೆಲುಗು ಚಿತ್ರರಂಗಕ್ಕೆ ಪರಿಚಯಿಸಿದ್ದರು. ಅದೇ ನಿರ್ದೇಶಕ ಈಗ ರಾಮ್ ಚರಣ್ಗಾಗಿ ಪ್ಯಾನ್ ಇಂಡಿಯಾ ಕಥೆಯನ್ನು ಸಿದ್ಧಪಡಿಸಿದ್ದು, ಅದನ್ನು ರಾಮ್ ಚರಣ್ಗೆ ಹೇಳಿದ್ದಾರೆ. ಆ ಕಥೆನೇ ರಾಮ್ ಚರಣ್ಗೆ ಇಷ್ಟಪಟ್ಟಿದ್ದು, ಸಿನಿಮಾದಲ್ಲಿ ನಟಿಸೋದಕ್ಕೆ ಒಪ್ಪಿಕೊಂಡಿದ್ದಾರೆ.
ಸುಕುಮಾರ್ ಶಿಷ್ಯ ಬುಚಿ ಬಾನು ಸನಾ
ಬುಚಿ ಬಾಬು ಸನಾ ಪ್ಯಾನ್ ಇಂಡಿಯಾ ಡೈರೆಕ್ಟರ್ ಸುಕುಮಾರ್ ಅವರ ಶಿಷ್ಯ. ಸುಕುಮಾರ್ ಜೊತೆ ಕೆಲವು ಸಿನಿಮಾಗಳಲ್ಲಿ ಕೆಲಸ ಮಾಡಿದ್ದಾರೆ. ಅಲ್ಲದೆ 'ಉಪ್ಪೆನ' ಸಿನಿಮಾಗೆ ಸ್ವತ: ಸುಕುಮಾರ್ ಅವರೇ ಕಥೆಯನ್ನು ಬರೆದಿದ್ದರು. ಆ ಸಿನಿಮಾ ಕೂಡ ಬಾಕ್ಸಾಫೀಸ್ನಲ್ಲಿ 100 ಕೋಟಿ ರೂ.ಯನ್ನು ಕಲೆ ಹಾಕಿತ್ತು. 'ಉಪ್ಪೆನ' ಮೂಲಕವೇ ವೈಷ್ಣವ್ ತೇಜಾ ಹಾಗೂ ಕೃತಿ ಶೆಟ್ಟಿ ಇಬ್ಬರೂ ಟಾಲಿವುಡ್ಗೆ ಗ್ರ್ಯಾಂಡ್ ಎಂಟ್ರಿ ಕೊಟ್ಟಿದ್ದರು.
ಶಂಕರ್ ಸಿನಿಮಾ ಬಳಿಕ ಶುರು
ರಾಮ್ ಚರಣ್ ತೇಜಾ ಸದ್ಯ ಶಂಕರ್ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಸದ್ಯ ಈ ಸಿನಿಮಾಗೆ RC 15 ಅಂತ ತಾತ್ಕಾಲಿಕವಾಗಿ ಟೈಟಲ್ ಫಿಕ್ಸ್ ಮಾಡಿದ್ದಾರೆ. ಈ ಟೈಟಲ್ ಇಟ್ಟುಕೊಂಡೇ ಸಿನಿಮಾವನ್ನು ಚಿತ್ರೀಕರಣ ಮಾಡಲಾಗುತ್ತಿದೆ. ಅಲ್ಲದೆ ಸಿನಿಮಾ ಇನ್ನೂ ಚಿತ್ರೀಕರಣದ ಹಂತದಲ್ಲಿಯೇ ಇದೆ. ಈ ಸಿನಿಮಾ ಮುಗಿಯುತ್ತಿದ್ದಂತೆ ಬುಚಿ ಬಾಬು ಸನಾ ನಿರ್ದೇಶನದ ಸಿನಿಮಾ ತಂಡ ಸೇರಿಕೊಳ್ಳಲಿದ್ದಾರೆ. "ಕೆಲವು ವೇಳೆ ದಂಗೆ ಏಳುವುದು ಅನಿವಾರ್ಯ... ರಾಮ್ ಚರಣ್ ಜೊತೆ ನನ್ನ ಹೊಸ ಸಿನಿಮಾವನ್ನು ಅನೌನ್ಸ್ ಮಾಡುತ್ತಿರುವುದು ಅತೀವ ಖುಷಿ ಕೊಟ್ಟಿದೆ. ಇಂತಹದ್ದೊಂದು ಅದ್ಭುತ ಅವಕಾಶ ನೀಡಿದ್ದಕ್ಕೆ ಧನ್ಯವಾದಗಳು." ಎಂದು ಬುಚಿ ಬಾಬು ಸನಾ ಟ್ವೀಟ್ ಮಾಡಿದ್ದಾರೆ.
ಮುಂದಿನ ವರ್ಷ ಸಿನಿಮಾ ಶುರು
ಮೈತ್ರಿ ಮೂವಿ ಮೇಕರ್ಸ್ ಈ ಸಿನಿಮಾಗೆ ಬೆಂಬಲ ನೀಡುತ್ತಿದ್ದಾರೆ. ವೆಂಕಟ ಸತೀಶ್ ಕಿಲಾರು ಅವರ ವೃದ್ಧಿ ಸಿನಿಮಾಸ್ ಹಾಗೂ ಸುಕುಮಾರ್ ರೈಟಿಂಗ್ಸ್ ಈ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದಾರೆ. ಎಲ್ಲಾ ಅಂದುಕೊಂಡಂತೆ ಆದರೆ, ಮುಂದಿನ ವರ್ಷ ಈ ಸಿನಿಮಾ ಅದ್ಧೂರಿಯಾಗಿ ಸೆಟ್ಟೇರಲಿದೆ. ಸದ್ಯ ಕತೆ ಬಗ್ಗೆ ಹೆಚ್ಚಿನ ಮಾಹಿತಿ ನೀಡಿಲ್ಲ. ಮುಂದಿನ ದಿನಗಳಲ್ಲಿ ಎಲ್ಲಾ ಮಾಹಿತಿಗಳನ್ನು ನೀಡುವ ಸಾಧ್ಯತೆಯಿದೆ.