Don't Miss!
- News ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ; ಇಬ್ಬರು ಶಂಕಿತರ ಸುಳಿವು ಕೊಟ್ಟರೆ ₹20 ಲಕ್ಷ ಬಹುಮಾನ
- Sports RCB VS KKR: ಟಾಸ್ ಗೆದ್ದ ಕೆಕೆಆರ್ ಫೀಲ್ಡೀಂಗ್ ಆಯ್ಕೆ: ಆರ್ಸಿಬಿ ತಂಡದಲ್ಲಿ ಇಲ್ಲ ಬದಲಾವಣೆ
- Lifestyle ಏಪ್ರಿಲ್ 1ರಿಂದ 800 ಔಷಧಗಳು ದುಬಾರಿ..! ಎಷ್ಟು ಬೆಲೆ ಹೆಚ್ಚಳ.?
- Automobiles ಭಾರತದಲ್ಲಿ ಬಿಡುಗಡೆಗೆ ಸಜ್ಜಾದ ಬಹುನಿರೀಕ್ಷಿತ ಹೊಸ ಸ್ಕೋಡಾ ಸೂಪರ್ಬ್ ಕಾರು
- Technology WhatsApp: ವಾಟ್ಸಾಪ್ನಲ್ಲಿ ಈ ಕರೆಗಳನ್ನು ಸ್ವೀಕರಿಸದಂತೆ ಕೇಂದ್ರದಿಂದ ಎಚ್ಚರಿಕೆ! ಯಾಕೆ ಗೊತ್ತಾ?
- Finance 25ನೇ ವಯಸ್ಸಿನಲ್ಲಿ 25,000 ರೂ.ನಿಂದ 7,000 ಕೋಟಿ ಗಳಿಸಿದ ವ್ಯಕ್ತಿ ಬಗ್ಗೆ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಆಚಾರ್ಯ' ಸಿನಿಮಾದಲ್ಲಿ ತಮ್ಮ ಪಾತ್ರದ ಗುಟ್ಟು ಬಿಟ್ಟುಕೊಟ್ಟ ರಾಮ್ ಚರಣ್ ತೇಜ
ಮೆಗಾಸ್ಟಾರ್ ಚಿರಂಜೀವಿ ನಟಿಸಿ ಕೊರಟಾಲ ಶಿವ ನಿರ್ದೇಶಿಸುತ್ತಿರುವ 'ಆಚಾರ್ಯ' ಸಿನಿಮಾದಲ್ಲಿ ರಾಮ್ ಚರಣ್ ತೇಜ ಸಹ ನಟಿಸುತ್ತಿರುವುದು ಹಳೆಯ ಸುದ್ದಿ.
ತಂದೆಯ ಸಿನಿಮಾದಲ್ಲಿ ರಾಮ್ ಚರಣ್ ತೇಜ ಅತಿಥಿ ಪಾತ್ರ ನಿರ್ವಹಿಸಲಿದ್ದಾರೆ ಎನ್ನಲಾಗಿತ್ತು. ಆದರೆ ಅದು ನಿಜವಲ್ಲ. ರಾಮ್ ಚರಣ್ ತೇಜ ಪೂರ್ಣ ಪ್ರಮಾಣದ ಪಾತ್ರವನ್ನೇ ನಿರ್ವಹಿಸುತ್ತಿದ್ದಾರಂತೆ.
'ಆಚಾರ್ಯ' ಸಿನಿಮಾದಲ್ಲಿನ ತಮ್ಮ ಪಾತ್ರದ ಬಗ್ಗೆ ಸಂದರ್ಶನವೊಂದರಲ್ಲಿ ಮಾತನಾಡಿರುವ ರಾಮ್ ಚರಣ್ ತೇಜ. 'ಆಚಾರ್ಯ ಸಿನಿಮಾದಲ್ಲಿ ನನ್ನದು ಅತಿಥಿ ಪಾತ್ರವಲ್ಲ ಬದಲಿಗೆ ಪೂರ್ಣ ಪ್ರಮಾಣದ ಪಾತ್ರ. ನಾನು ನಿರ್ವಹಿಸುತ್ತಿರುವ ಪಾತ್ರದ ಹೆಸರು 'ಸಿದ್ಧ'' ಎಂದಿದ್ದಾರೆ ರಾಮ್ ಚರಣ್.
ರಾಮ್ ಚರಣ್ ಗೆ ಪೂಜಾ ಹೆಗ್ಡೆ ನಾಯಕಿ
ಸಿನಿಮಾದಲ್ಲಿ ರಾಮ್ ಚರಣ್ ಗೆ ನಾಯಕಿಯಾಗಿ ನಟಿ ಪೂಜಾ ಹೆಗ್ಡೆ ನಟಿಸುತ್ತಿದ್ದಾರೆ. ಸಿನಿಮಾದಲ್ಲಿ ನಾಯಕ ಚಿರಂಜೀವಿ ಅವರೇ ಆಗಿರುತ್ತಾರೆ. ಆದರೆ ರಾಮ್ ಚರಣ್ ತೇಜ ಅವರದ್ದೂ ಸಹ ಅಷ್ಟೇ ಪ್ರಮುಖವಾದ ಪಾತ್ರ ಸಿನಿಮಾದಲ್ಲಿ ಇರಲಿದೆ.
ಮಗಧೀರ, ಬ್ರೂಸ್ ಲೀ ಸಿನಿಮಾದಲ್ಲಿ ಚಿರಂಜೀವಿ ಅತಿಥಿ ಪಾತ್ರ
ಈ ಹಿಂದೆ ರಾಮ್ ಚರಣ್ ತೇಜ ಅಭಿನಯಿಸಿದ್ದ 'ಮಗಧೀರ' ಹಾಗೂ 'ಬ್ರೂಸ್ ಲೀ' ಸಿನಿಮಾದಲ್ಲಿ ನಟ ಚಿರಂಜೀವಿ ಅತಿಥಿ ಪಾತ್ರದಲ್ಲಿ ನಟಿಸಿದ್ದರು. ಇದೇ ಮೊದಲ ಬಾರಿಗೆ ಅಪ್ಪ-ಮಕ್ಕಳಿಬ್ಬರೂ ಸಿನಿಮಾ ಒಂದರಲ್ಲಿ ಪೂರ್ಣ ಪ್ರಮಾಣದ ಪಾತ್ರಗಳಲ್ಲಿ ಒಟ್ಟಿಗೆ ನಟಿಸುತ್ತಿದ್ದಾರೆ.
'ಆಚಾರ್ಯ' ಸಿನಿಮಾಕ್ಕಾಗಿ ಬಹುದೊಡ್ಡ ಸೆಟ್
'ಆಚಾರ್ಯ' ಸಿನಿಮಾಕ್ಕಾಗಿ ಏಷ್ಯಾದಲ್ಲಿಯೇ ಅತಿ ದೊಡ್ಡ ಸಿನಿಮಾ ಸೆಟ್ ಹಾಕಲಾಗಿದೆ. ದೇವಾಲಯ ಹಾಗೂ ಹಳ್ಳಿಯೊಂದನ್ನು ಮರುಸೃಷ್ಟಿಸಲಾಗಿದೆ. ಈ ಒಂದು ಸೆಟ್ಗಾಗಿ ಹಲವಾರು ಕೋಟಿಗಳನ್ನು ನಿರ್ಮಾಪಕರು ಸುರಿದಿದ್ದಾರೆ. ಅಂದಹಾಗೆ ಸಿನಿಮಾದ ನಿರ್ಮಾಪಕರಲ್ಲಿ ರಾಮ್ ಚರಣ್ ತೇಜ ಸಹ ಒಬ್ಬರು.
Recommended Video
ಕಾಜಲ್ ಅಗರ್ವಾಲ್ ನಾಯಕಿ
'ಆಚಾರ್ಯ' ಸಿನಿಮಾದಲ್ಲಿ ಚಿರಂಜೀವಿ ಎದುರು ನಾಯಕಿಯಾಗಿ ನಟಿ ಕಾಜಲ್ ಅಗರ್ವಾಲ್ ಅಭಿನಯಿಸುತ್ತಿದ್ದಾರೆ. ಸಿನಿಮಾದಲ್ಲಿ ವಿಲನ್ ಪಾತ್ರಧಾರಿಯಾಗಿ ನಟ ಸೂನು ಸೂದ್ ಇದ್ದಾರೆ. ಆಚಾರ್ಯ ಸಿನಿಮಾದ ಟ್ರೇಲರ್ ಜನವರಿ 29 ರಂದು ಬಿಡುಗಡೆ ಆಗಲಿದೆ.