Don't Miss!
- News ಬಿಜೆಪಿಗೆ ಮತ್ತೊಂದು ಆಘಾತ, ಮತ್ತೋರ್ವ ವಿಧಾನ ಪರಿಷತ್ ಸದಸ್ಯ ರಾಜೀನಾಮೆ: ಮಾಜಿ ಸಿಎಂ ಏನಂದ್ರು?
- Sports T20 World Cup 2024: ಟಿ20 ವಿಶ್ವಕಪ್ನಲ್ಲಿ ಟೀಮ್ ಇಂಡಿಯಾ ಆರಂಭಿಕರನ್ನು ಸೂಚಿಸಿದ ಸೌರವ್ ಗಂಗೂಲಿ
- Automobiles ಫೋಕ್ಸ್ವ್ಯಾಗನ್ ವರ್ಟಸ್ ಕಾರಿಗೆ ಮನಸೋತ ಗ್ರಾಹಕರು: ಭಾರೀ ಬೇಡಿಕೆ
- Technology Airtel: ಏರ್ಟೆಲ್ನಿಂದ ಹೊಸ ಅಂತಾರಾಷ್ಟ್ರೀಯ ರೋಮಿಂಗ್ ಪ್ಲ್ಯಾನ್ಗಳು! ಇವು ಹೇಗೆಲ್ಲಾ ಅನುಕೂಲ?
- Lifestyle ಮೊಲದ ಜೊತೆ ಓಡಿ ಮತ್ತೊಮ್ಮೆ ರೇಸ್ ಗೆದ್ದ ಆಮೆ..! ಈ ಕಥೆ ನಿಜವಾಗಿದ್ದು ಹೇಗೆ ನೋಡಿ.!
- Finance Bengaluru Karaga: ಇಂದು ಈ ರಸ್ತೆಗಳಲ್ಲಿ ಸಂಚಾರ ಬಂದ್, ಬದಲಿ ಮಾರ್ಗ ವಿವರ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮಹೇಶ್ ಬಾಬು ಸಿನಿಮಾದಲ್ಲಿ ರಾಮ್ ಚರಣ್?: ಟಾಲಿವುಡ್ನಿಂದ ಹೊರಬಂದ ಹೊಸ ಸುದ್ದಿ
ಚಿರಂಜೀವಿ ನಟನೆಯ 'ಆಚಾರ್ಯ' ಚಿತ್ರದಲ್ಲಿ ಸೂಪರ್ ಸ್ಟಾರ್ ಮಹೇಶ್ ಬಾಬು ಅತಿಥಿ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂಬ ರೂಮರ್ ಟಾಲಿವುಡ್ನಲ್ಲಿ ಹರಿದಾಡಿತ್ತು. ಆದರೆ ಆ ಪಾತ್ರಕ್ಕೆ ಚಿರಂಜೀವಿ ಮಗ ರಾಮ್ ಚರಣ್ ಅವರೇ ಬರುತ್ತಾರೆ ಎಂದು ಹೇಳಲಾಯಿತು. ನಿರ್ದೇಶಕ ಕೊರತಲಾ ಶಿವ ಕೂಡ 'ಆಚಾರ್ಯ'ದಲ್ಲಿ ಮಹೇಶ್ ಬಾಬು ಭಾಗಿಯಾಗುವುದಿಲ್ಲ ಎಂಬುದನ್ನು ಸ್ಪಷ್ಟಪಡಿಸಿದ್ದರು.
Recommended Video
ರಾಮ್ ಚರಣ್ ಅತಿಥಿ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವುದು ಈಗ ಖಚಿತವಾಗಿದೆ. ಆದರೆ ಟಾಲಿವುಡ್ನಿಂದ ಮತ್ತೊಂದು ಸುದ್ದಿ ಹೊರಬಿದ್ದಿದೆ. ಇದು ರಾಮ್ ಚರಣ್ ಮತ್ತು ಮಹೇಶ್ ಬಾಬು ಅವರ ಕುರಿತಾದ ಕುತೂಹಲಕಾರಿ ರೂಮರ್. ಮುಂದೆ ಓದಿ...
ಮಹೇಶ್ ಬಾಬು ಬ್ಯಾನರ್ನಲ್ಲಿ ಚರಣ್
ಮೂಲಗಳ ಪ್ರಕಾರ, ಮಹೇಶ್ ಬಾಬು ಅವರ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾಗಲಿರುವ ಹೊಸ ಚಿತ್ರದಲ್ಲಿ ರಾಮ್ ಚರಣ್ ನಾಯಕರಾಗಿ ನಟಿಸಲಿದ್ದಾರೆ. ನಿರ್ದೇಶಕ ವಂಶಿ ಪೈದಿಪಳ್ಳಿ ಕಥೆಯೊಂದನ್ನು ಮಹೇಶ್ ಬಾಬು ಅವರಿಗೆ ವಿವರಿಸಿದ್ದಾರೆ. ಇದನ್ನು ಅವರು ಇಷ್ಟಪಟ್ಟಿದ್ದಾರೆ ಕೂಡ. ಆದರೆ ಚಿತ್ರಕಥೆಯಲ್ಲಿ ಕೆಲವು ಬದಲಾವಣೆಗಳನ್ನು ಮಾಡುವಂತೆ ಅವರು ಸಲಹೆ ನೀಡಿದ್ದಾರೆ ಎನ್ನಲಾಗಿದೆ.
ಮಹೇಶ್ ಬಾಬು ಹೊಸ ಸಿನಿಮಾಗೆ ನಾಯಕಿಯಾದ ಬಾಲಿವುಡ್ ಸ್ಟಾರ್ ನಟಿ
ಪರಶುರಾಮ್ ಜತೆ ಮಹೇಶ್ ಬಾಬು ಸಿನಿಮಾ
ಮಹೇಶ್ ಬಾಬು 'ಗೀತಾ ಗೋವಿಂದಂ' ಚಿತ್ರದ ನಿರ್ದೇಶಕ ಪರಶುರಾಮ್ ಜತೆಗೆ ಹೊಸ ಸಿನಿಮಾದಲ್ಲಿ ನಟಿಸಲು ಸಿದ್ಧತೆ ನಡೆಸಿದ್ದಾರೆ. ಇನ್ನೊಂದೆಡೆ ವಂಶಿ ಅವರ ಕಥೆಯೊಂದಿಗೆ ರಾಮ್ ಚರಣ್ ಅವರನ್ನು ಸಂಪರ್ಕಿಸಿದ್ದಾರೆ.
ಕಥೆ ಮೆಚ್ಚಿಕೊಂಡ ರಾಮ್ ಚರಣ್
ಸ್ಕ್ರಿಪ್ಟ್ ಓದಿ ಮೆಚ್ಚಿಕೊಂಡ ರಾಮ್ ಚರಣ್, ಸಿನಿಮಾದಲ್ಲಿ ನಟಿಸಲು ಒಪ್ಪಿಗೆ ನೀಡಿದ್ದಾರಂತೆ. ಈ ಚಿತ್ರದಲ್ಲಿ ಮಹೇಶ್ ಬಾಬು ನಟಿಸದೆ ಇದ್ದರೂ ತಾವೇ ನಿರ್ಮಾಣ ಮಾಡುವುದಾಗಿ ನಿರ್ದೇಶಕರಿಗೆ ಭರವಸೆ ನೀಡಿದ್ದಾರಂತೆ. ಅದಕ್ಕೆ ರಾಮ್ ಚರಣ್ ಹೆಸರನ್ನು ಅವರೇ ಸೂಚಿಸಿದ್ದಾರೆ ಎನ್ನಲಾಗಿದೆ.
ಮುಂದಿನ ಸಿನಿಮಾ ಸೂಪರ್ ಸ್ಟಾರ್ ಜತೆ: ಖಚಿತಪಡಿಸಿದ ನಿರ್ದೇಶಕ ರಾಜಮೌಳಿ
ಮೂವರ ಕಾಂಬಿನೇಷನ್
ರಾಮ್ ಚರಣ್ ಮತ್ತು ವಂಶಿ ಈ ಹಿಂದೆ 'ಯೆವಡು' ಚಿತ್ರದಲ್ಲಿ ಜತೆಯಾಗಿದ್ದರು. ಇಬ್ಬರ ನಡುವೆ ಉತ್ತಮ ಹೊಂದಾಣಿಕೆ ಇದೆ. ಹಾಗೆಯೇ ರಾಮ್ ಚರಣ್ ಹಾಗೂ ಮಹೇಶ್ ಬಾಬು ಗೆಳೆತನವೂ ಚೆನ್ನಾಗಿದೆ. ಹೀಗಾಗಿ ಈ ಮೂವರೂ ಸೇರಿ ಸಿನಿಮಾ ಮಾಡುವ ತೀರ್ಮಾನಕ್ಕೆ ಬಂದಿದ್ದಾರೆ ಎನ್ನಲಾಗಿದೆ. ಇದರ ಬಗ್ಗೆ ಇನ್ನೂ ಅಧಿಕೃತ ಹೇಳಿಕೆ ಹೊರಬರಬೇಕಿದೆ.