Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಪುಷ್ಪ 2' ಹೇಗಿರುತ್ತೆ ಎಂಬ ಬಗ್ಗೆ ಮಾಹಿತಿ ಬಿಟ್ಟುಕೊಟ್ಟ ರಶ್ಮಿಕಾ ಮಂದಣ್ಣ!
ನಟಿ ರಶ್ಮಿಕಾ ಮಂದಣ್ಣ ಈಗಾಗಲೇ ನಟನೆ ಮೂಲಕ ಉತ್ತುಂಗದಲ್ಲಿ ಇರುವ ನಟಿ. ಕನ್ನಡದ ಕಿರಿಕ್ ಪಾರ್ಟಿ ಸಿನಿಮಾ ಮೂಲಕ ಸಿನಿ ರಂಗಕ್ಕೆ ಪದಾರ್ಪಣೆ ಮಾಡಿದ ನಟಿ ರಶ್ಮಿಕಾ ಮಂದಣ್ಣ ಈಗ ಸಾಕಷ್ಟು ಬ್ಯುಸಿಯಾಗಿರುವ ನಟಿಯರ ಪೈಕಿ ಒಬ್ಬರಾಗಿ ಗುರುತಿಸಿಕೊಂಡಿದ್ದಾರೆ. ತೆಲುಗು, ತಮಿಳು, ಹಿಂದಿ ಸೇರಿದಂತೆ ಸಾಕಷ್ಟು ಚಿತ್ರಗಳಲ್ಲಿ ಬ್ಯುಸಿಯಾಗಿರುವ ರಶ್ಮಿಕಾ ಹೆಸರು ಜಾಗತಿಕ ಮಟ್ಟದಲ್ಲಿ ಹೆಚ್ಚು ಹೆಸರುವಾಸಿ ಯಾಗಿದೆ.
ಸದ್ಯ ಬ್ಯಾಕ್ ಟು ಬ್ಯಾಕ್ ಹಿಟ್ ಚಿತ್ರಗಳಲ್ಲಿ ಅಭಿನಯಿಸುತ್ತಿರುವ ರಶ್ಮಿಕಾ ಮಂದಣ್ಣ ಮತ್ತು ಅಲ್ಲು ಅರ್ಜುನ್ ಅಭಿನಯದ ಪುಪ್ಪ ಸಿನಿಮಾ ರಿಲೀಸ್ ಆಗಿ ಉತ್ತಮ ಕಲೆಕ್ಷನ್ ಕೂಡ ಮಾಡಿದೆ. ಪುಷ್ಪ ಸಿನಿಮಾದ ಯಶಸ್ಸಿನ ನಂತರ ಎಲ್ಲರ ಚಿತ್ರ ಪುಷ್ಪ ಪಾರ್ಟ್ 2 ನತ್ತ ನೆಟ್ಟಿದೆ. ಪುಷ್ಪ ಚಿತ್ರದ ಕ್ಲೈಮ್ಯಾಕ್ಸ್ ಪುಷ್ಪ ಭಾಗ2 ಚಿತ್ರದ ಮೇಲೆ ಎಲ್ಲಿಲ್ಲದ ನಿರೀಕ್ಷೆ ಮೂಡಿಸಿದೆ. ಈಗಾಗಲೇ ಸಿನಿಮಾ ಯಾವಾಗ ಬರಲಿದೆ ಎನ್ನುವ ಬಗ್ಗೆ ಜನ ಪ್ರಶ್ನೆ ಮಾಡುತ್ತಿದ್ದಾರೆ. ಆದರೆ ಪುಷ್ಪ ಮೊದಲ ಭಾಗಕ್ಕಿಂತಲ್ಲೂ ಎರಡನೇ ಭಾಗದಲ್ಲಿ ಸಾಕಷ್ಟು ವಿಶೇಷತೆ ಇರಲಿಲ್ಲ. ಇದೀಗ ಪುಷ್ಪ 2 ಬಗ್ಗೆ ರಶ್ಮಿಕಾ ಮಂದಣ್ಣ ಭರವಸೆವೊಂದನ್ನು ನೀಡಿದ್ದಾರೆ.
ನಟಿ ರಶ್ಮಿಕಾ ಮಂದಣ್ಣ ಇದೀಗ ತಮ್ಮ ಇತ್ತೀಚಿನ ಸಿನಿಮಾ ಪುಷ್ಪ ಸೂಪರ್ ಹಿಟ್ ಆದ ಖುಷಿಯಲ್ಲಿ ತೇಲುತ್ತಿದ್ದಾರೆ. ಅಲ್ಲದೇ ಪುಷ್ಪ ಸಿನಿಮಾದಲ್ಲಿ ತನ್ನ ಪಾತ್ರ ಹಾಗೂ ನಟನೆಗೆ ಬಂದಿರುವ ಮೆಚ್ಚುಗೆಗಳಿಂದ ರಶ್ಮಿಕಾ ಇನ್ನಷ್ಟು ಖುಷಿಯಾಗಿದ್ದಾರೆ. ರಶ್ಮಿಕಾ ಮುಟ್ಟಿದ್ದೆಲ್ಲಾ ಚಿನ್ನ ಎನ್ನುವಂತೆ ಸಾಲು ಸಾಲು ಸಿನಿಮಾಗಳು ಹಿಟ್, ಸೂಪರ್ ಹಿಟ್ ಆಗುವ ಮೂಲಕ ರಶ್ಮಿಕಾ ಚಾರ್ಮ್ ಮಾತ್ರ ಇನ್ನೂ ಹೆಚ್ಚುತ್ತಿದೆ. ಭರ್ಜರಿ ಟ್ರೋಲ್ ಆದರೂ ನಟಿಯ ಜನಪ್ರಿಯತೆ ಮಾತ್ರ ತಗ್ಗಿಲ್ಲ ಎನ್ನುವುದು .
ಪುಷ್ಪ ಸಿನಿಮಾ ಬಿಡುಗಡೆಯ ವೇಳೆ ಕರ್ನಾಟಕದಲ್ಲಿ ಸಹಜವಾಗಿಯೇ ರಶ್ಮಿಕಾ ಅವರ ಬಗ್ಗೆ ಕನ್ನಡಿಗರಿಗೆ ಅಸಮಾಧಾನ ಮೂಡಿತ್ತು. ಏಕೆಂದರೆ ರಶ್ಮಿಕಾ ಸಿನಿಮಾದ ಕನ್ನಡ ಆವೃತ್ತಿಯಲ್ಲಿ ತನ್ನ ಪಾತ್ರಕ್ಕೆ ಡಬ್ಬಿಂಗ್ ಮಾಡಿರಲಿಲ್ಲ, ಸಮಯ ದೊರೆಯಲಿಲ್ಲ ಎನ್ನುವ ಕಾರಣ ನೀಡಿದ್ದರು. ಇನ್ನು ಪುಷ್ಪ ಕೆಜಿಎಫ್ ಸಿನಿಮಾದ ಕಾಪಿ ಎನ್ನುವ ಮಾತುಗಳು, ಎರಡು ಸಿನಿಮಾಗಳ ನಡುವಿನ ಸಾಮ್ಯತೆಗಳ ಕುರಿತಾಗಿ ಕೂಡಾ ಅಂತರ್ಜಾಲದ ವೇದಿಕೆಗಳಲ್ಲಿ ಚರ್ಚೆ ನಡೆದಿತ್ತು. ಇವೆಲ್ಲವುಗಳ ನಡುವೆ ಪುಷ್ಪ ಗೆಲುವನ್ನು ಕಂಡಿದೆ.
ರಕ್ತ ಚಂದನದ ಕಳ್ಳ ಸಾಗಾಣಿಕೆಯ ಕಥಾ ಹಂದರದ ಪುಷ್ಪ ಸಿನಿಮಾದಲ್ಲಿ ಟಾಲಿವುಡ್ನ ಐಕಾನ್ ಸ್ಟಾರ್ ಅಲ್ಲು ಅರ್ಜುನ್ ನಾಯಕನಾಗಿ ಕಾಣಿಸಿಕೊಂಡಿದ್ದಾರೆ. ಪುಷ್ಪ ಮೊದಲ ಭಾಗದ ಸಿನಿಮಾ ಭರ್ಜರಿ ಯಶಸ್ಸನ್ನು ಕಂಡ ಬೆನ್ನಲ್ಲೇ ಸಿನಿಮಾದ ಮುಂದುವರೆದ ಭಾಗವನ್ನು ಇನ್ನಷ್ಟು ಒತ್ತು ಕೊಟ್ಟು ನಿರ್ಮಾಣ ಮಾಡಲು ಚಿತ್ರತಂಡ ನಿರ್ಧರಿಸಿದೆ ಎನ್ನಲಾಗಿದ್ದು, ಶೀಘ್ರದಲ್ಲೇ ಪುಷ್ಪ ಎರಡನೇ ಭಾಗದ ಚಿತ್ರೀಕರಣ ಪ್ರಾರಂಭವಾಗಲಿದೆ ಎಂಬ ಸುದ್ದಿ ಕೂಡ ಕೇಳಿಬರುತ್ತಿದೆ.