twitter
    For Quick Alerts
    ALLOW NOTIFICATIONS  
    For Daily Alerts

    ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಬಗ್ಗೆ ಆರ್‌ಜಿವಿ ಕಮೆಂಟ್: ಬಿತ್ತು ಕೇಸ್ ಮೇಲೆ ಕೇಸ್!

    |

    ರಾಮ್‌ ಗೋಪಾಲ್ ವರ್ಮಾಗೂ ವಿವಾದಕ್ಕೂ ತೀರಾ ಹತ್ತಿರದ ಸಂಬಂಧ. ಟ್ವಿಟರ್‌ನಲ್ಲಿ ಏನಾದರೊಂದು ಕಮೆಂಟ್ ಮಾಡಿ ವಿವಾದಗಳನ್ನು ಸೃಷ್ಟಿ ಮಾಡುತ್ತಲೇ ಇರುತ್ತಾರೆ. ಈಗ ಮತ್ತೊಂದು ವಿವಾದವನ್ನು ಮೈ ಮೇಲೆ ಎಳೆದುಕೊಂಡಿದ್ದಾರೆ.

    ಬಿಜೆಪಿಯ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಬಗ್ಗೆ ಟ್ವಿಟರ್‌ನಲ್ಲಿ ಕಮೆಂಟ್ ಮಾಡಿದ್ದರು. ಇದೇ ಹೇಳಿಕೆ ಈಗ ಟಾಲಿವುಡ್‌ ನಿರ್ದೇಶಕನಿಗೆ ತೊಂದರೆ ಕೊಡುವ ಸಾಧ್ಯತೆಯಿದೆ. ರಾಮ್ ಗೋಪಾಲ್ ವರ್ಮಾ ನೀಡಿರುವ ಈ ಹೇಳಿಕೆ ವಿರೋಧಿಸಿಸ ದೂರುಗಳ ಮೇಲೆ ದೂರು ದಾಖಲಾಗಿದೆ.

    ನಿರ್ದೇಶಕ ರಾಮ್‌ ಗೋಪಾಲ್ ವಿರುದ್ಧ ದೂರು ದಾಖಲು!ನಿರ್ದೇಶಕ ರಾಮ್‌ ಗೋಪಾಲ್ ವಿರುದ್ಧ ದೂರು ದಾಖಲು!

    ದ್ರೌಪದಿ ಬಗ್ಗೆ RGV ಕಮೆಂಟ್ ಏನು?

    ದ್ರೌಪದಿ ಬಗ್ಗೆ RGV ಕಮೆಂಟ್ ಏನು?

    ವಿಡಂಬನಾತ್ಮಕ ಕಮೆಂಟ್‌ಗಳನ್ನು ಮಾಡುವುದರಲ್ಲಿ ಆರ್‌ಜಿವಿ ಎತ್ತಿದ ಕೈ. ಇಂತಹದ್ದೇ ಕಮೆಂಟ್‌ಗಳನ್ನು ಮಾಡಿ ವಿವಾದಕ್ಕೆ ಸಿಕ್ಕಿಕೊಳ್ಳುವುದೂ ಇದೆ. ಈ ಬಾರಿ ಬಿಜೆಪಿಯ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಬಗ್ಗೆ ಕಮೆಂಟ್ ಮಾಡಿ ಪೇಚಿಗೆ ಸಿಲುಕಿದ್ದಾರೆ. ಎರಡು ದಿನಗಳ ಹಿಂದೆ ಆರ್‌ಜಿವಿ ಟ್ವಿಟರ್‌ನಲ್ಲಿ ವ್ಯಂಗ್ಯವಾಗಿ ಕಮೆಂಟ್ ಮಾಡಿದ್ದರು." ದ್ರೌಪದಿ ರಾಷ್ಟ್ರಪತಿಯಾದ್ರೆ, ಪಾಂಡವರು ಯಾರು? ಎಲ್ಲಕ್ಕಿಂತ ಮುಖ್ಯವಾಗಿ ಕೌರವರು ಯಾರು?" ಎಂದು ಕಮೆಂಟ್ ಮಾಡಿದ್ದರು.

    ಪ್ರಶಾಂತ್ ನೀಲ್ ಭಾರತೀಯ ಚಿತ್ರರಂಗದ ವೀರಪ್ಪನ್: RGV ಟ್ವೀಟ್ ಮೇಲೆ ಟ್ವೀಟ್ಪ್ರಶಾಂತ್ ನೀಲ್ ಭಾರತೀಯ ಚಿತ್ರರಂಗದ ವೀರಪ್ಪನ್: RGV ಟ್ವೀಟ್ ಮೇಲೆ ಟ್ವೀಟ್

    ಆರ್‌ಜಿವಿ ಮೇಲೆ ಬಿಜೆಪಿ ಮುಖಂಡರ ಕೆಂಗಣ್ಣು

    ಆರ್‌ಜಿವಿ ಮೇಲೆ ಬಿಜೆಪಿ ಮುಖಂಡರ ಕೆಂಗಣ್ಣು

    ಆರ್‌ಜಿವಿ ಕೊಟ್ಟ ಈ ಹೇಳಿಕೆ ಬಿಜೆಪಿಯ ಕೆಲವು ಮುಖಂಡರನ್ನು ಕೆರಳಿಸಿದೆ. ದ್ರೌಪದಿ ಮುರ್ಮು ಅವರನ್ನು ಅವಮಾನಿಸಿದ್ದಕ್ಕೆ ಕೆಲವು ನಾಯಕರು ಹಾಗೂ ಮಹಿಳಾ ಸಮುದಾಯಗಳು ವಿರೋಧ ವ್ಯಕ್ತಪಡಿಸಿದ್ದು, ದೂರು ದಾಖಲಿಸಿವೆ. ಬಿಜೆಪಿ ಮುಖಂಡರಾದ ರಾಜಾ ಸಿಂಗ್ ಹಾಗೂ ರಾಕೇಶ್ ರೆಡ್ಡಿ " ಆರ್‌ಜಿವಿ ಒಬ್ಬ ನಿಶ್ಪ್ರಯೋಜಕ. ಅವರನ್ನು ಜೈಲಿಗೆ ಕಳುಹಿಸಬೇಕು. ಅವರಿಗೆ ಬಿಜೆಪಿ ಪವರ್ ತೋರಿಸುತ್ತೇವೆ." ಎಂದು ಹೇಳಿದ್ದಾರೆ.

    ಆರ್‌ಜಿವಿ ಡ್ಯಾಮೇಜ್ ಕಂಟ್ರೋಲ್

    ವಿವಾದ ಭುಗಿಲೆದ್ದ ಬಳಿಕ ಆರ್‌ಜಿವಿ ಡ್ಯಾಮೇಜ್ ಕಂಟ್ರೋಲ್‌ಗೆ ಮುಂದಾಗಿದ್ದರು. " ಈ ಹೇಳಿಕೆಯನ್ನು ಕೇವಲ ವ್ಯಂಗ್ಯವಾಗಿ ಹೇಳಲಾಗಿದೆ. ಇದರಲ್ಲಿ ಬೇರೆ ಯಾವುದೇ ರೀತಿಯ ಉದ್ದೇಶವಿಲ್ಲ. ದ್ರೌಪದಿ ಮಹಾಭಾರತದಲ್ಲಿ ನನ್ನ ಅಚ್ಚುಮೆಚ್ಚಿನ ಪಾತ್ರ. ಈ ಹೆಸರು ಅಪರೂಪವಾಗಿದ್ದರಿಂದ ನನ್ನ ಭಾವನೆಗಳನ್ನು ವ್ಯಕ್ತಪಡಿಸಲು ಆ ಹೆಸರಿಗೆ ಸಂಬಂಧಿಸಿದ ಪಾತ್ರಗಳನ್ನು ನೆನಪಿಸಿಕೊಂಡೆ. ಯಾರ ಭಾವನೆಗಳಿಗೂ ಧಕ್ಕೆ ತರುವ ಉದ್ದೇಶವಿಲ್ಲ." ಎಂದು ಆರ್‌ಜಿವಿ ಟ್ವೀಟ್ ಮಾಡಿದ್ದಾರೆ.

    ವರ್ಮಾಗೆ ಕೊರೊನಾ.....! ವಿಡಿಯೋ 'ಕೌಂಟರ್' ಕೊಟ್ಟ ನಿರ್ದೇಶಕವರ್ಮಾಗೆ ಕೊರೊನಾ.....! ವಿಡಿಯೋ 'ಕೌಂಟರ್' ಕೊಟ್ಟ ನಿರ್ದೇಶಕ

    ದೌರ್ಜನ್ಯ ಪ್ರಕರಣ ದಾಖಲು

    ದೌರ್ಜನ್ಯ ಪ್ರಕರಣ ದಾಖಲು

    ಆರ್‌ಜಿವಿ ಕ್ಲಾರಿಫಿಕೇಷನ್ ಕೊಟ್ಟರೂ, ಬಿಜೆಪಿ ಮುಖಂಡರು ಎಸ್‌ಸಿ/ಎಸ್‌ಟಿ ದೌರ್ಜನ್ಯ ಪ್ರಕರಣಗಳ ಆಧಾರದ ಮೇಲೆ ದೂರನ್ನು ದಾಖಲಿಸಲು ತೀರ್ಮಾನಿಸಿದ್ದಾರೆ. ಅಲ್ಲದೆ ಆರ್‌ಜಿವಿ ವಿರುದ್ಧ ಕಾನೂನು ಕ್ರಮಗಳನ್ನು ತೆಗೆದುಕೊಳ್ಳುವಂತೆ ಒತ್ತಾಯಿಸಲಿದೆ ಎಂದು ವರದಿಯಾಗಿದೆ.

    English summary
    RGV Controversial Statement on BJP President Candidate Draupadi Murmu In Big Trouble, Know More.
    Saturday, June 25, 2022, 10:44
    IIFA

    Kannada Photos

    Go to : More Photos
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X
    X