Don't Miss!
- News ಬೆಂಗಳೂರು ನಮ್ಮ ಮೆಟ್ರೋ ಬೆಳಗ್ಗೆ 03:35ಕ್ಕೆ ಆರಂಭ: ಏಕೆ? ಕಾರಣ ಇಲ್ಲಿದೆ
- Lifestyle ಎಲೆಕೋಸಿಗೆ ಕೆಮಿಕಲ್ ಮಿಶ್ರಣ ಮಾಡ್ತಾರೆ ಹುಷಾರ್..! ವಿಡಿಯೋ ವೈರಲ್..!
- Automobiles HSRP ನಂಬರ್ ಪ್ಲೇಟ್ನಲ್ಲಿ ನಡೆಯುತ್ತಿದೆ ಭಾರೀ ಮೋಸ: ಬುಕ್ ಮಾಡದವರು ಇದನ್ನು ಗಮನಿಸಿ!
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Sports IPL 2024: ಎಸ್ಆರ್ಹೆಚ್ ಸಂಘಟಿತ ಆಟಕ್ಕೆ ಬ್ರೇಕ್ ಹಾಕಲು ಆರ್ಸಿಬಿ ಏನು ಮಾಡಬೇಕು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
RRR ಸಿನಿಮಾ ನಿರ್ಮಾಪಕರಿಗೆ ಹೃದಯ ಸಮಸ್ಯೆ: ಅಡಕತ್ತರಿಯಲ್ಲಿ ಸಿನಿಮಾ?
ಜ್ಯೂನಿಯರ್ ಎನ್ಟಿಆರ್, ರಾಮ್ ಚರಣ್ ತೇಜಾ ನಟಿಸುತ್ತಿರುವ ರಾಜಮೌಳಿ ನಿರ್ದೇಶಿಸುತ್ತಿರುವ ಆರ್ಆರ್ಆರ್ ಸಿನಿಮಾ ಭಾರತದಾದ್ಯಂತ ಸಿನಿ ಪ್ರೇಕ್ಷಕರು ಕುತೂಹಲದಿಂದ ಎದುರು ನೋಡುತ್ತಿರುವ ಸಿನಿಮಾಗಳಲ್ಲಿ ಒಂದು.
Recommended Video
ಕೊರೊನಾ ಲಾಕ್ಡೌನ್ ನಿಂದಾಗಿ ಪ್ರಸ್ತುತ RRR ಸಿನಿಮಾದ ಚಿತ್ರೀಕರಣ ನಿಂತಿದೆ. ಆದರೆ ಈ ಸಿನಿಮಾಕ್ಕೆ ಮತ್ತೊಂದು ಆಘಾತ ಎದುರಾಗಿದೆಯಾ ಎಂಬ ಅನುಮಾನ ಮೂಡುತ್ತಿದೆ.
ಪ್ರಿಯಾಂಕಾ ಚೋಪ್ರಾ ತಂಗಿಯನ್ನು ಅಶ್ಲೀಲ ಪದಗಳಿಂದ ನಿಂದಿಸಿದ ಜೂ. ಎನ್ಟಿಆರ್ ಫ್ಯಾನ್ಸ್
ಬೃಹತ್ ಬಜೆಟ್ನ ಈ ಸಿನಿಮಾವನ್ನು ಖ್ಯಾತ ನಿರ್ಮಾಪಕ ಡಿವಿವಿ ದಾನಯ್ಯ ನಿರ್ಮಿಸುತ್ತಿದ್ದು, ದಾನಯ್ಯ ಅವರಿಗೆ ಆರೋಗ್ಯ ಸಮಸ್ಯೆ ಎದುರಾಗಿದ್ದು, ಆಪರೇಷನ್ ಗೆ ಒಳಗಾಗಿದ್ದಾರೆ. ಇದು ಸಿನಿಮಾದ ಮೇಲೆ ಪರಿಣಾಮ ಬೀರುತ್ತದೆಯಾ? ಎಂಬ ಅನುಮಾನ ಮೂಡಿದೆ.
ಡಿವಿವಿ ದಾನಯ್ಯ ಅವರಿಗೆ ಹೃದಯ ಬೇನೆ
ಡಿವಿವಿ ದಾನಯ್ಯ ಅವರಿಗೆ ಕೆಲವು ದಿನಗಳ ಹಿಂದೆ ಹೃದಯ ಬೇನೆ ಕಾಣಿಸಿಕೊಂಡಿತ್ತು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದರು. ಪೂರ್ಣ ಪರೀಕ್ಷೆಯ ಬಳಿಕ ಅವರಿಗೆ ಹೃದಯ ಸಮಸ್ಯೆ ಇದ್ದು, ಆಪರೇಷನ್ ಅವಶ್ಯಕತೆ ಇದೆ ಎಂದು ವೈದ್ಯರು ತಿಳಿಸಿದ್ದರು.
ಹೃದಯ ಸಂಬಂಧಿ ಆಪರೇಷನ್ ಮಾಡಲಾಗಿದೆ
ಅಂತೆಯೇ ದಾನಯ್ಯ ಅವರಿಗೆ ತಜ್ಞ ವೈದ್ಯರ ಸಮಕ್ಷಮದಲ್ಲಿ ಹೃದಯದ ಶಸ್ತ್ರಚಿಕಿತ್ಸೆ ಮಾಡಲಾಗಿದ್ದು, ಹೃದಯವು ಸೂಕ್ತವಾಗಿ ಕಾರ್ಯನಿರ್ವಹಿಸುವಂತೆ ಮಾಡಲು ಸ್ಟಂಟ್ ಅನ್ನು ಅಳವಡಿಸಲಾಗಿದೆ. ಶಸ್ತ್ರಚಿಕಿತ್ಸೆಯ ನಂತರ ದಾನಯ್ಯ ಚೇತರಿಸಿಕೊಳ್ಳುತ್ತಿದ್ದಾರೆ ಎನ್ನಲಾಗಿದೆ.
RRR ಚಿತ್ರದ ಬಗ್ಗೆ ಯಾರಿಗೂ ಗೊತ್ತಿಲ್ಲದ ವಿಷಯ ಗೂಗಲ್ ಗೆ ಗೊತ್ತು.!
ಹಲವು ಹಿಟ್ ಸಿನಿಮಾಗಳನ್ನು ನಿರ್ಮಿಸಿದ್ದಾರೆ
1992 ರಿಂದಲೂ ಸಿನಿಮಾ ನಿರ್ಮಾಣದಲ್ಲಿ ತೊಡಗಿಕೊಂಡಿರುವ ದಾನಯ್ಯ, ಶಿವಮಣಿ, ದೇಶಮುದುರು, ದುಬೈ ಸೀನು, ಓಯ್, ವರುಡು, ಜುಲೈ, ಕ್ಯಾಮೆರಾಮನ್ ಗಂಗ ತೋ ರಾಮ್ಬಾಬು, ನಾಯಕ್, ಬ್ರೂಸ್ ಲೀ, ನಿನ್ನು ಕೋರಿ, ಭರತ್ ಅನೆ ನೇನು, ವಿನಯ ವಿಧೇಯ ರಾಮ ಸಿನಿಮಾಗಳನ್ನು ನಿರ್ಮಿಸಿದ್ದಾರೆ.
Jr.NTRಗೆ ನಿರ್ದೇಶನ ಮಾಡಲು ಇಷ್ಟೊಂದು ಸಂಭಾವನೆ ಪಡೆಯುತ್ತಿದ್ದಾರಾ ಪ್ರಶಾಂತ್ ನೀಲ್?
ಸಿನಿಮಾ ಮೇಲೆ ಯಾವುದೇ ಪರಿಣಾಮವಿಲ್ಲ
ಆರ್ಆರ್ಆರ್ ಸಿನಿಮಾ ಬಹುತಾರಾಗಣದ ಬಹು ಬಜೆಟ್ನ ಸಿನಿಮಾ ಆಗಿದ್ದು ಸಿನಿಮಾ ಮೇಲೆ ಭಾರಿ ನಿರೀಕ್ಷೆ ಇದೆ. ದಾನಯ್ಯ ಅವರ ಆರೋಗ್ಯ ಪರಿಸ್ಥಿತಿ ಸಿನಿಮಾ ಮೇಲೆ ಯಾವುದೇ ರೀತಿಯ ಪರಿಣಾಮ ಬೀರುವುದಿಲ್ಲ ಎಂದು ನಿರ್ಮಾಪಕರ ಆಪ್ತರು ಸ್ಪಷ್ಟಪಡಿಸಿದ್ದಾರೆ. ಲಾಕ್ಡೌನ್ ಮುಗಿದ ಕೂಡಲೇ ಸಿನಿಮಾ ಚಿತ್ರೀಕರಣ ಆರಂಭವಾಗಲಿದೆ.
ಕನ್ನಡದ ನಿರ್ದೇಶಕ ಪ್ರಶಾಂತ್ ನೀಲ್ಗಾಗಿ ಮಹೇಶ್ ಬಾಬು, ಜೂ. ಎನ್ ಟಿಆರ್ ಪೈಪೋಟಿ