Don't Miss!
- Sports IPL 2024: RCB vs KKR ಹೆಡ್-ಟು-ಹೆಡ್ ದಾಖಲೆ, ಪಿಚ್ ವರದಿ; ಚಿನ್ನಸ್ವಾಮಿಯಲ್ಲಿ ಗೆಲುವು ಯಾರಿಗೆ?
- Finance ವಿವಿಧ ರಾಜ್ಯಗಳ ನರೇಗಾ ಕಾರ್ಮಿಕರ ವೇತನ ದರ ಪರಿಷ್ಕರಣೆ, ವಿವರ
- News KRS ಸುತ್ತಲಿನ ಪ್ರದೇಶದಲ್ಲಿ ಗಣಿಗಾರಿಕೆ: ಖಡಕ್ ಎಚ್ಚರಿಕೆ ನೀಡಿದ ಹೈಕೋರ್ಟ್
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮಹೇಶ್ ಬಾಬು 28ನೇ ಸಿನಿಮಾದಲ್ಲಿ ವಿಜಯ್ ಸೇತುಪತಿ: ಉಪ್ಪಿ ನಟಿಸುತ್ತಾ ಇಲ್ವಾ?
ಟಾಲಿವುಡ್ ಸೂಪರ್ಸ್ಟಾರ್ ಮಹೇಶ್ ಬಾಬು 28ನೇ ಸಿನಿಮಾದ ಬಗ್ಗೆ ಕುತೂಹಲ ದುಪ್ಪಟ್ಟಾಗಿದೆ. ತ್ರಿವಿಕ್ರಮ್ ಈ ಸಿನಿಮಾವನ್ನು ನಿರ್ದೇಶನ ಮಾಡುತ್ತಿದ್ದು, ಹಲವು ಕಾರಣಕ್ಕೆ ಈ ಸಿನಿಮಾ ಸುದ್ದಿಯಾಗುತ್ತಲೇ ಇದೆ. ಈಗ ಟಾಲಿವುಡ್ನಲ್ಲಿ ಹೊಸ ಸುದ್ದಿಯೊಂದು ಹೊರ ಬಿದ್ದಿದೆ.
ಮಹೇಶ್ ಬಾಬು ನಟಿಸಿದ 'ಸರ್ಕಾರು ವಾರಿ ಪಾಟ' ಸಿನಿಮಾ ಥಿಯೇಟರ್ನಲ್ಲಿ ಸದ್ದು ಮಾಡಿಲ್ಲ. ಪರಶುರಾಮ್ ನಿರ್ದೇಶಿಸಿದ ಈ ಸಿನಿಮಾದಲ್ಲಿ ಕೀರ್ತಿ ಸುರೇಶ್ ನಾಯಕಿಯಾಗಿದ್ದರೆ, ಸಮುದ್ರಖನಿ ಖಳನಾಯಕನಾಗಿ ಕಾಣಿಸಿಕೊಂಡಿದ್ದರು. ಆದರೂ ಈ ಸಿನಿಮಾ ಬಾಕ್ಸಾಫೀಸ್ನಲ್ಲಿ ಮಾಡಿರಲಿಲ್ಲ.
ಮಹೇಶ್ ಬಾಬು ಹಾಗೂ ತ್ರಿವಿಕ್ರಮ್ ಕಾಂಬನೇಷನ್ ಸಿನಿಮಾದ ಶೂಟಿಂಗ್ ಮುಂಬರುವ ಆಗಸ್ಟ್ ತಿಂಗಳಿನಿಂದ ಆರಂಭವಾಗಲಿದೆ ಎಂದು ಟಾಲಿವುಡ್ ಮೂಲಗಳು ಹೇಳುತ್ತಿವೆ. ಈ ಬೆನ್ನಲೇ ಹೊಸ ಸುದ್ದಿಯೊಂದು ಓಡಾಡುತ್ತಿದೆ. ಮಹೇಶ್ ಬಾಬು ಸಿನಿಮಾದಲ್ಲಿ ವಿಜಯ್ ಸೇತುಪತಿ ನಟಿಸಲಿದ್ದಾರೆ ಎನ್ನಲಾಗಿದೆ. ಇದಕ್ಕೂ ಮೊದಲು ರಿಯಲ್ ಸ್ಟಾರ್ ಉಪೇಂದ್ರ ಹೆಸರು ಕೂಡ ಹರಿದಾಡಿತ್ತು.
ಈ ಸಿನಿಮಾ ಗೆಲ್ಲಲೇಬೇಕು
ಮಹೇಶ್ ಬಾಬು ನಟಿಸಿದ 'ಸರ್ಕಾರು ವಾರಿ ಪಾಟ' ಸಿನಿಮಾ ಬಾಕ್ಸಾಫೀಸ್ನಲ್ಲಿ ಗೆಲ್ಲಲಿಲ್ಲ ಎಂಬ ಮಾತು ಕೇಳಿಬರುತ್ತಿದೆ. ಬಿಡುಗಡೆಯಾದ ಮೊದಲ ದಿನವೇ ಈ ಸಿನಿಮಾ ಮಿಶ್ರಪ್ರತಿಕ್ರಿಯೆ ಪಡೆದುಕೊಂಡಿತ್ತು. ಹೀಗಾಗಿ ಕಲೆಕ್ಷನ್ ಕೂಡ ಹೆಚ್ಚೇನು ಆಗಿಲ್ಲ ಎನ್ನುತ್ತಿದ್ದರೆ, ಇನ್ನೊಂದು ಕಡೆ ಭರ್ಜರಿ ಕಲೆಕ್ಷನ್ ಆಗಿದೆ ಎಂದು ಚಿತ್ರತಂಡ ಹೇಳಿಕೊಂಡಿತ್ತು. ಆದರೆ, ಟ್ರೇಡ್ ಅನಲಿಸ್ಟ್ಗಳು ಈ ಸಿನಿಮಾಗೆ ಸೋತಿದೆ ಎಂದು ಹೇಳುತ್ತಿದೆ. ಈ ಕಾರಣಕ್ಕೆ ಮಹೇಶ್ ಬಾಬು ಹಾಗೂ ತ್ರಿವಿಕ್ರಮ್ ಸಿನಿಮಾ ತುಂಬಾನೇ ಮುಖ್ಯ ಆಗಿದೆ.
ವಿಜಯ್ ಸೇತುಪತಿ ಖಳನಾಯಕನಾ?
ಮಹೇಶ್ ಬಾಬು ಹಾಗೂ ತ್ರಿವಿಕ್ರಮ್ ಸಿನಿಮಾ ಮುಗಿದ ಬಳಿಕ ಮೂವಿ ಮಾಂತ್ರಿಕ ರಾಜಮೌಳಿ ಸಿನಿಮಾದಲ್ಲಿ ನಟಿಸಲಿದ್ದಾರೆ. ಸದ್ಯ ಬಾಬು ಎಂಬುವವರು ಮಹೇಶ್ ಬಾಬು 28ನೇ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದಾರೆ. ಸದ್ಯದ ಮಾಹಿತಿ ಪ್ರಕಾರ, ಈ ಸಿನಿಮಾದಲ್ಲಿ ವಿಜಯ್ ಸೇತುಪತಿ ಈ ಸಿನಿಮಾದಲ್ಲಿ ನಟಿಸುತ್ತಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಆದರೆ, ವಿಲನ್ ಆಗಿ ನಟಿಸುತ್ತಾರಾ? ಇಲ್ಲವಾ ಬೇರೆ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಾರಾ? ಎಂಬ ಅನುಮಾನ ಹುಟ್ಟಿಕೊಂಡಿದೆ.
ಉಪ್ಪಿ ಈ ಸಿನಿಮಾ ನಟಿಸುತ್ತಾರಾ?
ಕಳೆದ ಕೆಲವು ದಿನಗಳಿಂದ ಈ ಸಿನಿಮಾದಲ್ಲಿ ಉಪೇಂದ್ರ ಖಳನಾಯಕನ ಪಾತ್ರ ನಟಿಸಲಿದ್ದಾರೆ ಎಂದು ಸುದ್ದಿಯಾಗಿತ್ತು. ಇನ್ನೊಂದು ಮೂಲಗಳು ಉಪೇಂದ್ರ ಈ ಸಿನಿಮಾ ಮಹೇಶ್ ಬಾಬುಗೆ ತಂದೆಯ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಾರೆ. ಆದರೆ, ಸಿನಿಮಾದಲ್ಲಿ ತಂದೆ-ಮಗ ಒಟ್ಟಿಗೆ ತೆರೆಮೇಲೆ ಕಾಣಿಸಿಕೊಳ್ಳುವುದಿಲ್ಲ ಎಂದು ಹೇಳುತ್ತಿವೆ. ಹಾಗಿದ್ದರೆ, ವಿಜಯ್ ಸೇತುಪತಿ ಪಾತ್ರವೇನು? ಇದು ವಿಲನ್ ಪಾತ್ರವೇ ಅಥವಾ ಬೇರೆನಾ ಎಂಬುದರ ಬಗ್ಗೆ ಸ್ಪಷ್ಟತೆ ಇಲ್ಲ.
ವಿಜಯ್ ಸೇತುಪತಿ ಗ್ರೀನ್ ಸಿಗ್ನಲ್
ಕಥೆ ಕೇಳುತ್ತಿದ್ದಂತೆ ವಿಜಯ್ ಸೇತುಪತಿ ಗ್ರೀನ್ ಸಿಗ್ನಲ್ ನೀಡಿದ್ದಾರೆ ಎನ್ನುವ ಮಾತು ಕೇಳಿ ಬರುತ್ತಿದೆ. ಅಲ್ಲದೆ ಈಗಾಗಲೇ ಸಿನಿಮಾಗೂ ಸಹಿ ಮಾಡಿದ್ದು, ಶೀಘ್ರದಲ್ಲೇ ಈ ಬಗ್ಗೆ ಅಧಿಕೃತ ಪ್ರಕಟಣೆ ಹೊರಬೀಳುವ ಸಾಧ್ಯತೆಯಿದೆ ಎನ್ನಲಾಗಿದೆ. ಅಂದ್ಹಾಗೆ ಮಹೇಶ್ ಬಾಬು ಮತ್ತು ವಿಜಯ್ ಸೇತುಪತಿ ಇಬ್ಬರೂ ಆಗಸ್ಟ್ನಲ್ಲಿ ಚಿತ್ರೀಕರಣವನ್ನು ಪ್ರಾರಂಭಿಸುತ್ತಾರೆ ಎನ್ನಲಾಗಿದೆ.