Don't Miss!
- News Government Employees; ಸರ್ಕಾರಿ ನೌಕರರ ಜೀವ ವಿಮೆ ಪಾಲಿಸಿ ಅವಧಿ ಏರಿಕೆ
- Lifestyle ಬಾಯಿ ರುಚಿಗೆ ಗರಿ ಗರಿ ನಿಪ್ಪಟ್ಟು..! ಮನೆಯಲ್ಲೇ ಮಾಡಿ ಟೆಸ್ಟಿ ತಿಂಡಿ
- Automobiles Kia: ಬ್ರೇಕ್ ಇಲ್ಲದ ಟ್ರಕ್ನಂತೆ ಮುನ್ನುಗ್ಗುತ್ತಿದೆ ಕಿಯಾ: ಈಗ ಸಣ್ಣ ಪಟ್ಟಣಗಳಲ್ಲೂ ಸಿಗಲಿದೆ!
- Sports RCB vs KKR: ಯಶ್ ಮೇಲೆ 'ದಯೆ' ತೋರುತ್ತಾರಾ ರಿಂಕು ಸಿಂಗ್?; ಜಿದ್ದು ತೀರಿಸಿಕೊಳ್ತಾರಾ ಆರ್ಸಿಬಿ ವೇಗಿ?
- Technology ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಡೀಪ್ಫೇಕ್ ದೊಡ್ಡ ಕಳವಳಕಾರಿ ಎಂದ ಮೋದಿ
- Finance 25ನೇ ವಯಸ್ಸಿನಲ್ಲಿ 25,000 ರೂ.ನಿಂದ 7,000 ಕೋಟಿ ಗಳಿಸಿದ ವ್ಯಕ್ತಿ ಬಗ್ಗೆ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕಂಗನಾಗೆ ಸಾಥ್ ನೀಡಿದ ನಟಿ ಸಮಂತಾ; ಬಾಲಿವುಡ್ 'ಕ್ವೀನ್' ಹೇಳಿದ್ದೇನು?
ಬಾಲಿವುಡ್ ನ ಕಿರಿಕ್ ನಟಿ, ವಿವಾದಗಳ ಮೂಲಕವೇ ಸದ್ದು ಮಾಡುತ್ತಿರುವ ಕಂಗನಾ ರಣಾವತ್ ಸದ್ಯ ತಲೈವಿ ಸಿನಿಮಾ ಮೂಲಕ ದೇಶದ ಗಮನ ಸೆಳೆಯುತ್ತಿದ್ದಾರೆ. ಇತ್ತೀಚಿಗಷ್ಟೆ ಬಹುನಿರೀಕ್ಷೆಯ ತಲೈವಿ ಸಿನಿಮಾದ ಟ್ರೈಲರ್ ರಿಲೀಸ್ ಆಗಿದ್ದು, ಕಂಗನಾ ನಟನೆಗೆ ಬಾರಿ ಮೆಚ್ಚುಗೆ ವ್ಯಕ್ತವಾಗಿದೆ.
ಇದರ ಬೆನ್ನಲ್ಲೇ ಈಗ ಚಿತ್ರದ ಮೊದಲ ಹಾಡು ಬಿಡುಗಡೆಯಾಗಿದೆ. ವಿಶೇಷ ಎಂದರೆ ತಲೈವಿ ಕಂಗನಾಗೆ ಟಾಲಿವುಡ್ ಸ್ಟಾರ್ ನಟಿ ಸಮಂತಾ ಅಕ್ಕಿನೇನಿ ಸಾಥ್ ನೀಡಿದ್ದಾರೆ.
ದಶಕದ ಬಳಿಕ ನನ್ನ ಕನಸಿನ ಪಾತ್ರದಲ್ಲಿ ನಟಿಸುವ ಅವಕಾಶ ಸಿಕ್ಕಿದೆ: ನಟಿ ಸಮಂತಾ
ತಲೈವಿ ಸಿನಿಮಾದ ಇಲಾ ಇಲಾ..ಹಾಡನ್ನು ಸಮಂತಾ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ. ಇಂದು ಮಧ್ಯಾಹ್ನ (ಏಪ್ರಿಲ್ 2) ಚಿತ್ರದ ಬಹನಿರೀಕ್ಷೆಯ ಹಾಡು ರಿಲೀಸ್ ಆಗಿದ್ದು, ಮೂರು ಭಾಷೆಯಲ್ಲಿ ಬಿಡುಗಡೆಯಾಗಿದೆ. ಅಂದಹಾಗೆ ಸಮಂತಾ ಈ ಮೊದಲು ಟ್ರೈಲರ್ ನೋಡಿ ಮೆಚ್ಚುಗೆ ವ್ಯಕ್ತಪಡಿಸಿದ್ದರು.
Amma's unmatched grace and her stunning screen presence is known to all. Witness her fanfare from Cinema to CM. #ChaliChali #MazhaiMazhai #IlaaIlaa out!
— Samantha Akkineni (@Samanthaprabhu2) April 2, 2021
Hindi: https://t.co/H5hU3WaYR5
Tamil: https://t.co/JprUWiDKHS
Telugu: https://t.co/GvVn7LGIsW@KanganaTeam @thearvindswami
ಇದೀಗ ಹಾಡು ರಿಲೀಸ್ ಮಾಡಿ, ಹಾಡಿ ಹೊಗಳಿದ್ದಾರೆ. ಸಮಂತಾಗೆ ನಟಿ ಕಂಗನಾ ಧನ್ಯವಾದ ತಿಳಿಸಿದ್ದಾರೆ. 'ನನ್ನ ಪ್ರೀತಿಯ ಸಮಂತಾ ಅವರಿಗೆ ತುಂಬಾ ಧನ್ಯವಾದಗಳು' ಎಂದ ಟ್ವೀಟ್ ಮಾಡಿ ಸ್ತ್ರೀವಾದದ ಬಗ್ಗೆ ಬರೆದುಕೊಂಡಿದ್ದಾರೆ. ಸದ್ಯ ಬಿಡುಗಡೆಯಾಗಿರವ ಹಾಡಿಗೂ ಅಭಿಮಾನಿಗಳಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ಕಂಗನಾ ಮತ್ತೊಮ್ಮೆ ಅಭಿಮಾನಿಗಳ ಹೃದಯ ಗೆದ್ದಿದ್ದಾರೆ.
Recommended Video
ಚಿತ್ರಕ್ಕೆ ಜಿ.ವಿ ಪ್ರಕಾಶ್ ಸಂಗೀತ ಸಂಯೋಜನೆ ಮಾಡಿದ್ದಾರೆ. ಬಹುನಿರೀಕ್ಷೆಯ ಸಿನಿಮಾದಲ್ಲಿ ಪ್ರಕಾಶ್ ರೈ, ಅರವಿಂದ್ ಸ್ವಾಮಿ, ಭಾಗ್ಯಶ್ರೀ ಸೇರಿದಂತೆ ದೊಡ್ಡ ತಾರಬಳಗವೇ ಇದೆ. ಸಿನಿಮಾ ಏಪ್ರಿಲ್ 23ಕ್ಕೆ ತೆರೆಗೆ ಬರುತ್ತಿದೆ.