Don't Miss!
- Lifestyle
ಗರುಡ ಪುರಾಣ ಪ್ರಕಾರ ಈ 9 ಬಗೆಯ ವ್ಯಕ್ತಿಗಳ ಮನೆಯಲ್ಲಿ ಆಹಾರ ತಿನ್ನಲೇಬಾರದು
- Sports
ಟಿ20 ವಿಶ್ವಕಪ್ ಗೆದ್ದ ಶಫಾಲಿ ವರ್ಮಾ ಪಡೆಗೆ ಬಿಸಿಸಿಐ ಸನ್ಮಾನ: 5 ಕೋಟಿ ರುಪಾಯಿ ಬಹುಮಾನ
- News
ತಂಬಾಕು ನಿಯಂತ್ರಣಕ್ಕೆ ಮೈಸೂರು ಜಿಲ್ಲಾಧಿಕಾರಿ ತೆಗೆದುಕೊಂಡ ಕ್ರಮಗಳು, ಇಲ್ಲಿದೆ ವಿವರ
- Automobiles
ಹೊಸ ಇನೋವಾ ಹೈಕ್ರಾಸ್ ಬಲದೊಂದಿಗೆ ಮಾರಾಟದಲ್ಲಿ ದಾಖಲೆ ಮಟ್ಟದ ಬೆಳವಣಿಗೆ ಸಾಧಿಸಿದ ಟೊಯೊಟಾ
- Technology
ಚೀನಾದಲ್ಲಿ ಸೌಂಡ್ ಮಾಡಿದ್ದ ಈ ಡಿವೈಸ್ ಇದೀಗ ಜಾಗತಿಕ ಮಾರುಕಟ್ಟೆಗೆ ಎಂಟ್ರಿ!
- Finance
Union Budget 2023: ಹೊಸ ತೆರಿಗೆ ಪದ್ಧತಿಯಡಿಯಲ್ಲಿ ತೆರಿಗೆ ಲೆಕ್ಕಾಚಾರ ಹೇಗೆ?
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ಅಭಿಮಾನಿಗಳಿಗೆ 'ಖುಷಿ'ಯ ವಿಚಾರ: ಶೀಘ್ರದಲ್ಲೇ ಸಮಂತಾ ಕಂಬ್ಯಾಕ್!
ತೆಲುಗು ನಟಿ ಸಮಂತಾ ಆರೋಗ್ಯದ ಬಗ್ಗೆ ಸಾಕಷ್ಟು ವದಂತಿಗಳು ಹರಿದಾಡುತ್ತಿದೆ. ಇಂತಹ ಸಮಯದಲ್ಲಿ ಆಂಗ್ಲ ಪತ್ರಿಕೆಯೊಂದು ಸ್ಯಾಮ್ ಅಭಿಮಾನಿಗಳಿಗೆ ಸಮಾಧಾನ ತರುವಂತಹ ಸುದ್ದಿ ತಿಳಿಸಿದೆ. ಸಮಂತಾ ಚೇತರಿಸಿಕೊಂಡಿರುವುದಾಗಿ ಆಕೆಯ ಸ್ನೇಹಿತರು ಹೇಳಿದ್ದಾರೆ ಎಂದು ವರದಿ ಮಾಡಿದ್ದಾರೆ.
ಸಮಂತಾ ಮಯೋಸೈಟಿಸ್ ಎನ್ನುವ ವಿಚಿತ್ರ ಕಾಯಿಲೆಯಿಂದ ಬಳಲುತ್ತಿದ್ದಾರೆ. ಅಕ್ಟೋಬರ್ 29ರಂದು ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಬರೆದುಕೊಂಡಿದ್ದರು. ನಂತರ 'ಯಶೋದ' ಸಿನಿಮಾ ಪ್ರಚಾರ ಸಮಯದಲ್ಲೂ ಈ ಬಗ್ಗೆ ಮಾತನಾಡಿದ್ದರು. ಮಯೋಸೈಟಿಸ್ ವಿರುದ್ಧ ಹೋರಾಡುತ್ತಿದ್ದು, ಗೆದ್ದು ಬರುವುದಾಗಿ ಹೇಳಿದ್ದರು. ಅಭಿಮಾನಿಗಳು ಈ ವಿಷಯ ತಿಳಿದು ಆದಷ್ಟು ಬೇಗ ನೆಚ್ಚಿನ ನಟಿ ಚೇತರಿಸಿಕೊಳ್ಳಲಿ ಎಂದು ಹಾರೈಸಿದ್ದರು. ಸೆಲೆಬ್ರೆಟಿಗಳು ಕೂಡ ಆಕೆಗೆ ಧೈರ್ಯದ ಮಾತುಗಳನ್ನು ಹೇಳಿದ್ದರು.
ಈ ಕಾಯಿಲೆ ಬಗ್ಗೆ ಅಷ್ಟಾಗಿ ಮಾಹಿತಿ ಇಲ್ಲದ ಕಾರಣ, ಇದು ಮಾರಣಾಂತಿಕ ಕಾಯಿಲೆ ಎನ್ನುವಂತೆ ಕೆಲವರು ಮಾತನಾಡಿದ್ದರು. ಸಮಂತಾ ಚೇತರಿಸಿಕೊಳ್ಳುವುದೇ ಕಷ್ಟ ಎನ್ನುವಂತೆ ಬಿಂಬಿಸಿದ್ದರು. ಚೆನ್ನೈ ಚೆಲುವೆ ಚಿಕಿತ್ಸೆಗಾಗಿ ವಿದೇಶಕ್ಕೆ ಹೋಗಿದ್ದಾರೆ, ಕೇರಳದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನುಮುಂದೆ ಸಿನಿಮಾಗಳಲ್ಲಿ ನಟಿಸಲ್ಲ. ಒಪ್ಪಿಕೊಂಡಿರುವ ಸಿನಿಮಾಗಳನ್ನು ಕೈಬಿಟ್ಟಿದ್ದಾರೆ ಎಂದು ಹೇಳಲಾಗಿತ್ತು. ಆದರೆ ಟೈಮ್ ಆಫ್ ಇಂಡಿಯಾ ವರದಿ ಪ್ರಕಾರ ಸಮಂತಾ ಈಗ ಮಯೋಸೈಟಿಸ್ನಿಂದ ಚೇತರಿಸಿಕೊಂಡಿದ್ದಾರಂತೆ. ಈ ವಿಚಾರವನ್ನು ಆಕೆಯ ಸ್ನೇಹಿತರು ಸ್ಪಷ್ಟಪಡಿಸಿರುವುದಾಗಿ ವರದಿ ಆಗಿದೆ.

ಸಮಂತಾ ಸದ್ಯ ವಿಜಯ್ ದೇವರಕೊಂಡ ನಟನೆಯ 'ಖುಷಿ' ಚಿತ್ರದಲ್ಲಿ ನಟಿಸಬೇಕಿದೆ. ಶೀಘ್ರದಲ್ಲೇ ಈ ಸಿನಿಮಾ ಚಿತ್ರೀಕರಣದಲ್ಲಿ ಭಾಗಿ ಆಗುತ್ತಾರೆ ಎನ್ನಲಾಗ್ತಿದೆ. ಈ ಬಾರಿ ಮತ್ತಷ್ಟು ಸ್ಟ್ರಾಂಗ್ ಆಗಿ ಸ್ಯಾಮ್ ವಾಪಸ್ ಬರುತ್ತಾರೆ ಎಂದು ಅಭಿಮಾನಿಗಳು ಕಾಯುತ್ತಿದ್ದಾರೆ. ಸಮಂತಾ ಬಗ್ಗೆ ಏನೇನೋ ಸುದ್ದಿ ಕೇಳಿಬರ್ತಿದೆ. ಅದೆಲ್ಲ ಸುಳ್ಳು. ಆಕೆ ಹುಟ್ಟು ಹೋರಾಟಗಾರ್ತಿ. ಈ ಹಿಂದೆ ನಾಗಚೈತನ್ಯಾಗೆ ಡಿವೋರ್ಸ್ ಕೊಟ್ಟಾಗಲೂ ಸಾಕಷ್ಟು ಆರೋಪಗಳು ಕೇಳಿಬಂದಿತ್ತು. ಅದನ್ನೆಲ್ಲಾ ಧೈರ್ಯದಿಂದ ಎದುರಿಸಿದ್ದರು. ಈಗಲೂ ಕೂಡ ಮಯೋಸೈಟಿಸ್ ವಿರುದ್ಧ ಹೋರಾಟ ಮುಂದುವರೆದಿದೆ. 'ಖುಷಿ' ನಂತರ ಬೇರೆ ಪ್ರಾಜೆಕ್ಟ್ಗಳಲ್ಲಿ ಕೆಲಸ ಮಾಡುತ್ತಾರೆ ಎನ್ನಲಾಗ್ತಿದೆ.