Don't Miss!
- News ಲೋಕಸಭಾ ಚುನಾವಣೆ: ಕಾಂಗ್ರೆಸ್ ಸರ್ಕಾರದ ವಿರುದ್ಧ ಎಚ್ಡಿಕೆ ಮೇಕೆದಾಟು ಅಸ್ತ್ರ
- Sports DC vs GT IPL 2024: ಅಕ್ಷರ್, ಪಂತ್ ಭರ್ಜರಿ ಬ್ಯಾಟಿಂಗ್; ಗುಜರಾತ್ಗೆ ಸವಾಲಿನ ಗುರಿ ನೀಡಿದ ಡೆಲ್ಲಿ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಉತ್ತರ ಕರ್ನಾಟಕಕ್ಕೆ ನೆರವು ನೀಡಿದ್ದ ತೆಲುಗು ನಟನ ಕಾರು ಅಪಘಾತ
ಕಳೆದ ಕೆಲವು ದಿನಗಳ ಹಿಂದೆ ಉತ್ತರ ಕರ್ನಾಟದ ಭಾಗದಲ್ಲಿ ಸುರಿದ ಭಾರಿ ಮಳೆಯಿಂದ ಪ್ರವಾಹ ಉಂಟಾಗಿತ್ತು. ಆ ಸಂದರ್ಭದಲ್ಲಿ ನೆರೆಸಂತ್ರಸ್ಥರಿಗೆ ತೆಲುಗು ಇಂಡಸ್ಟ್ರಿ ಹಾಸ್ಯ ನಟ ಸಂಪೂರ್ಣೇಶ್ ಬಾಬು ಸಹಾಯ ಹಸ್ತ ಚಾಚಿದ್ದರು. 2 ಲಕ್ಷ ರೂಪಾಯಿ ಹಣವನ್ನು ಸಿಎಂ ಪರಿಹಾರ ನಿಧಿಗೆ ನೀಡಿದ್ದರು.
ಇದೀಗ, ಸಂಪೂರ್ಣೇಶ್ ಬಾಬು ಅವರ ಕಾರು ಅಪಘಾತವಾಗಿದೆ. ತೆಲಂಗಾಣದ ಸಿದ್ದಿಪೇಟೆ ಬಳಿ ಪ್ರಯಾಣ ಮಾಡುತ್ತಿದ್ದ ಸಂದರ್ಭದಲ್ಲಿ ಆರ್.ಟಿ.ಸಿ (ಆಂಧ್ರಪ್ರದೇಶ ಮತ್ತು ತೆಲಂಗಾಣದ ರಾಜ್ಯ ಸಾರಿಗೆ) ಬಸ್ ಡಿಕ್ಕಿ ಹೊಡೆದಿದೆ.
ಉತ್ತರ ಕರ್ನಾಟಕ ನೆರೆ ಸಂತ್ರಸ್ಥರಿಗೆ 2 ಲಕ್ಷ ನೀಡಿದ 'ಬರ್ನಿಂಗ್ ಸ್ಟಾರ್'
ಕಾರಿನಲ್ಲಿದ್ದ ನಟ ಮತ್ತು ಆತನ ಕುಟುಂಬದ ಸದಸ್ಯರು ಸಣ್ಣಪುಟ್ಟ ಗಾಯಗಳೊಂದಿಗೆ ಯಾವುದೇ ಅಪಾಯವಿಲ್ಲದೇ ಪಾರಾಗಿದ್ದಾರೆ ಎಂಬ ಸುದ್ದಿ ತಿಳಿದು ಬಂದಿದೆ. ಬೆಳಗ್ಗೆ 11:30ಕ್ಕೆ ಈ ಘಟನೆ ನಡೆದಿದ್ದು, ಸ್ಥಳಿಯ ಪೋಲಿಸರು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದಾರೆ.
ಸಂಪೂರ್ಣೇಶ್ 2 ಲಕ್ಷ ಕೊಟ್ರು, ಉತ್ತರ ಕರ್ನಾಟಕಕ್ಕೆ ನೀವೇನು ಕೊಟ್ರಿ? ಪ್ರಭಾಸ್ ಹೇಳಿದ್ದೇನು?
ಬಂಜಾರ ಹಿಲ್ಸ್ ಬಳಿ ನವೆಂಬರ್ 26 ರಂದು ಆರ್.ಟಿ.ಸಿ ಬಸ್ ಡಿಕ್ಕಿ ಹೊಡೆದು ವ್ಯಕ್ತಿಯೊಬ್ಬ ಸಾವನ್ನಿಪ್ಪಿದ. ಇದರ ಬೆನ್ನಲ್ಲೆ ಮತ್ತೊಂದು ಅಪಘಾತ ಸಂಭವಿಸಿದ್ದು, ಜನರ ಆಕ್ರೋಶಕ್ಕೆ ಕಾರಣವಾಗಿದೆ.
ಸಂಪೂರ್ಣೇಶ್ ಬಾಬು ಅವರಿಗೆ ತೆಲುಗು ಇಂಡಸ್ಟ್ರಿಯಲ್ಲಿ ವಿಶೇಷವಾದ ಅಭಿಮಾನಿ ಬಳಗ ಇದೆ. ಔಟ್ ಅಂಡ್ ಔಟ್ ಕಾಮಿಡಿ ಜಾನರ್ ಸಿನಿಮಾಗಳನ್ನ ಮಾಡುವ ಇವರನ್ನ ಬರ್ನಿಂಗ್ ಸ್ಟಾರ್ ಎಂದು ಕೂಡ ಕರೆಯುತ್ತಾರೆ. 'ಹೃದಯಕಾಲೇಯಂ' ಎಂಬ ಸಿನಿಮಾ ಮೂಲಕ ಇಂಡಸ್ಟ್ರಿ ಪ್ರವೇಶಿಸಿದ ಬಾಬು ಹಲವು ಸಿನಿಮಾದಲ್ಲಿ ಅತಿಥಿ ಪಾತ್ರ ಮಾಡಿದ್ದಾರೆ. ಕೊನೆಯದಾಗಿ 'ಕೊಬ್ಬರಿ ಮಟ್ಟ' ಎಂಬ ಸಿನಿಮಾ ತೆರೆಕಂಡಿತ್ತು.