Don't Miss!
- News 11 ಕೋಟಿ ಮಹಿಳೆಯರಿಗೆ ಅಡುಗೆ ಅನಿಲ: ಡಾ. ಕೆ. ಸುಧಾಕರ್
- Sports RCB vs KKR IPL 2024: ಕೆಕೆಆರ್ ವಿರುದ್ಧ ಆರ್ಸಿಬಿ ಹಸಿರು ಜೆರ್ಸಿಯಲ್ಲಿ ಕಣಕ್ಕೆ; ಅಂದೇ ಏಕೆ?
- Lifestyle ಮನೆಯಲ್ಲಿ ಸುಲಭವಾಗಿ ಬೀನ್ಸ್ ಬೆಳೆಯಬಹುದು..! ಹೇಗೆ ನೋಡಿ..!
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Finance ಬಿಸಿಲ ಬೇಗೆಯಿಂದ ರಕ್ಷಿಸಿಕೊಳ್ಳಲು ಟ್ರಾಫಿಕ್ ಪೊಲೀಸರಿಗೆ ರಿಲಿಫ್: ಬಂತು ಹವಾನಿಯಂತ್ರಿತ ಎಸಿ ಹೆಲ್ಮೆಟ್!
- Technology Samsung: ಸ್ಯಾಮ್ಸಂಗ್ನ ಈ ಸರಣಿ ಫೋನ್ಗಳಲ್ಲಿ ಗ್ರೀನ್ ಲೈನ್ ಸಮಸ್ಯೆ! ವರದಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸ್ಯಾಂಡಲ್ವುಡ್ ಡ್ರಗ್ಸ್ ಪ್ರಕರಣ: ತೆಲುಗು ನಟನಿಗೆ ಬೆಂಗಳೂರು ಪೊಲೀಸರ ನೊಟೀಸ್
ಸ್ಯಾಂಡಲ್ವುಡ್ ಡ್ರಗ್ಸ್ ಪ್ರಕರಣದ ಜಾಲ ವಿಸ್ತೃತಗೊಳ್ಳುತ್ತಲೇ ಇದೆ. ಇಷ್ಟು ದಿನ ಸ್ಯಾಂಡಲ್ವುಡ್ ಗೆ ಮಾತ್ರ ಸೀಮಿತವಾಗಿದ್ದ ಪ್ರಕರಣ ಈಗ ರಾಜ್ಯವನ್ನು ದಾಟಿದೆ.
ಸ್ಯಾಂಡಲ್ವುಡ್ ಡ್ರಗ್ಸ್ ಪ್ರಕರಣದ ತನಿಖೆ ನಡೆಸುತ್ತಿರುವ ಬೆಂಗಳೂರು ಪೊಲೀಸರು ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲುಗು ನಟನೊಬ್ಬನಿಗೆ ನೊಟೀಸ್ ನೀಡಿ ವಿಚಾರಣೆಗೆ ತುರ್ತಾಗಿ ಹಾಜರಾಗುವಂತೆ ಕೇಳಿದ್ದಾರೆ.
2ನೇ ದಿನ ಮುಂದುವರಿದ 'ಡ್ರಗ್ಸ್' ವಿಚಾರಣೆ: ಸ್ಟಾರ್ ನಟಿಯರ ಜೊತೆ ನಿರ್ಮಾಪಕ ಶಂಕರ್ ಗೌಡ ನಂಟು?
ತೆಲುಗು ಬಿಗ್ಬಾಸ್ 2 ಸ್ಪರ್ಧಿಯಾಗಿದ್ದ ಹಾಗೂ ಕೆಲವು ಸಿನಿಮಾದಲ್ಲಿಯೂ ನಟಿಸಿರುವ ತನಿಶ್ ಅಲ್ಲಾಡಿ ಗೆ ಬೆಂಗಳೂರು ಪೊಲೀಸರು ಇಂದು (ಮಾರ್ಚ್ 13) ರಂದು ನೊಟೀಸ್ ನೀಡಿದ್ದು ಎರಡು ದಿನಗಳ ಒಳಗಾಗಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ.
ಸುಶಾಂತ್ ಸಿಂಗ್ ಕೇಸ್: 33 ಮಂದಿ ವಿರುದ್ಧ 30 ಸಾವಿರ ಪುಟಗಳ ಚಾರ್ಜ್ಶೀಟ್ ಸಲ್ಲಿಕೆ
ಕೆಲವು ದಿನಗಳ ಹಿಂದಷ್ಟೆ 'ಕೆಂಪೇಗೌಡ 2' ನಿರ್ಮಾಪಕ ಶಂಕರೇಗೌಡ ಹಾಗೂ ಕನ್ನಡ ಬಿಗ್ಬಾಸ್ ಮಾಜಿ ಸ್ಪರ್ಧಿ ಮಸ್ತಾನ್ ಅನ್ನು ಡ್ರಗ್ಸ್ ಪ್ರಕರಣದಲ್ಲಿ ಬಂಧಿಸಿದ್ದರು ಪೊಲೀಸರು. ಅವರು ನೀಡಿದ ಮಾಹಿತಿ ಆಧಾರದ ಮೇಲೆ ತೆಲಗು ನಟ ತನೀಶ್ಗೆ ನೊಟೀಸ್ ನೀಡಲಾಗಿದೆ.
'ಶಂಕರೇಗೌಡರನ್ನು ಎರಡು ವರ್ಷದ ಹಿಂದೆ ಭೇಟಿಯಾಗಿದ್ದೆ'
ಈ ಬಗ್ಗೆ ಸ್ಪಷ್ಟನೆ ನೀಡಿರುವ ತನೀಶ್, 'ನನಗೆ ಬೆಂಗಳೂರು ಪೊಲೀಸರಿಂದ ನೊಟೀಸ್ ಬಂದಿರುವುದು ನಿಜ. ಬಿಗ್ಬಾಸ್ ನಂತರ ನಾನು ಕರ್ನಾಟಕದ ನಿರ್ಮಾಪಕ ಶಂಕರೇಗೌಡ ಅವರನ್ನು ಭೇಟಿ ಆಗಿದ್ದೆ. ಬೆಂಗಳೂರಿಗೆ ಹೋಗಿ ಅವರೊಟ್ಟಿಗೆ ಸಿನಿಮಾ ಸಬಂಧ ಮಾತನಾಡಿದ್ದೆ, ಆದರೆ ಆ ಸಿನಿಮಾ ಮುಂದುವರೆಯಲಿಲ್ಲ. ಈ ಘಟನೆ ನಡೆದು ಎರಡು ವರ್ಷವಾಗಿದೆ' ಎಂದಿದ್ದಾರೆ ತನೀಶ್.
ನನ್ನನ್ನು ಅಪರಾಧಿ ಎಂಬಂತೆ ಬಿಂಬಿಸಲಾಗುತ್ತಿದೆ: ತನೀಶ್
67 ಎನ್ಡಿಪಿಸಿ ಆಕ್ಟ್ ಅನ್ವಯ ನನಗೆ ನೊಟೀಸ್ ನೀಡಲಾಗಿದೆ. ಆರೋಪಿಯ ಸುತ್ತ-ಮುತ್ತ ಇದ್ದವರಿಂದ ಮಾಹಿತಿ ಕಲೆಹಾಕಲು ನೀಡಿರುವ ನೊಟೀಸ್ ಇದು. ಆದರೆ ಮಾಧ್ಯಮಗಳಲ್ಲಿ ನಾನೇ ಅಪರಾಧಿ ಎಂಬಂತೆ ಬಿಂಬಿಸಲಾಗುತ್ತಿದೆ. ನನಗೂ ಪ್ರಕರಣಕ್ಕೂ ಸಂಬಂಧವಿಲ್ಲ. ನನಗೆ ಮಾತ್ರವೇ ಅಲ್ಲದೆ, ಆ ಬಂಧಿತ ನಿರ್ಮಾಪಕನಿಗೆ ಸಂಬಂಧಿಸಿದ ಇನ್ನೂ ಕೆಲವರಿಗೆ ನೊಟೀಸ್ ನೀಡಲಾಗಿದೆ ಎಂದಿದ್ದಾರೆ ತನೀಶ್.
ಜೈಲು ಸೇರಿದ್ದ ರಾಗಿಣಿ-ಸಂಜನಾ
ಸ್ಯಾಂಡಲ್ವುಡ್ ಡ್ರಗ್ಸ್ ಪ್ರಕರಣ ಬೆಳಕಿಗೆ ಬಂದು ವರ್ಷವಾಗುತ್ತಾ ಬಂತು. ಆದರೆ ಬಂಧನಗಳು ಈಗಲೂ ಆಗುತ್ತಲೇ ಇವೆ. ನಟಿ ರಾಗಿಣಿ ದ್ವಿವೇದಿ, ಸಂಜನಾ ಗಲ್ರಾನಿ ಇನ್ನೂ ಹಲವಾರು ಮಂದಿ ಪ್ರಭಾವಿಗಳು ಈ ಪ್ರಕರಣದಲ್ಲಿ ಜೈಲು ಸೇರಿದ್ದಾರೆ. ರಾಗಿಣಿ ಹಾಗೂ ಸಂಜನಾ ಅವರುಗಳು ಜಾಮೀನಿನ ಮೇಲೆ ಹೊರಗಿದ್ದಾರೆ.
Recommended Video
ಸುಶಾಂತ್ ಸಿಂಗ್ ಪ್ರಕರಣ ಸಖತ್ ಸದ್ದು ಮಾಡಿತ್ತು
ಬಾಲಿವುಡ್ನಲ್ಲಿಯೂ ಡ್ರಗ್ಸ್ ಪ್ರಕರಣ ಸಾಕಷ್ಟು ಸುದ್ದಿ ಮಾಡಿದೆ. ಸುಶಾಂತ್ ಸಿಂಗ್ ಸಾವಿನ ನಂತರ ಹೊರಬಿದ್ದ ಡ್ರಗ್ಸ್ ಪ್ರಕರಣದಲ್ಲಿ ಸ್ಟಾರ್ ನಟ-ನಟಿಯರು ವಿಚಾರಣೆಗೆ ಒಳಗಾದರು. ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಬಂಧನ ಸಹ ಆಯಿತು.