Don't Miss!
- News ಉಕ್ರೇನ್ ವಿರುದ್ಧ ರಷ್ಯಾ ಗಂಭೀರ ಆರೋಪ!
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕೊರೊನಾಗೆ ಬಲಿಯಾದ ಯುವ ಬರಹಗಾರ ವಂಶಿ ರಾಜೇಶ್ ಕೊಂಡವೀಟಿ
ತೆಲುಗು ಇಂಡಸ್ಟ್ರಿಯ ಯುವ ಬರಹಗಾರ ವಂಶಿ ರಾಜೇಶ್ ಕೊಂಡವೀಟಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ನವೆಂಬರ್ 12 ರಂದು ರಾತ್ರಿ ಹೈದರಾಬಾದ್ನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಒಂದು ತಿಂಗಳ ಹಿಂದೆ ವಂಶಿ ರಾಜೇಶ್ ಕೊಂಡವೀಟಿಗೆ ಕೊರೊನಾ ಸೋಂಕು ತಗುಲಿತ್ತು. ಆಮೇಲೆ ಆಸ್ಪತ್ರೆಗೆ ಸಹ ದಾಖಲಾಗಿದ್ದರು. ಕಳೆದ ಒಂದು ವಾರದಿಂದ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿತ್ತು. ದುರಾದೃಷ್ಟವಶಾತ್ ನವೆಂಬರ್ 12 ರಂದು ನಿಧನರಾಗಿದ್ದಾರೆ.
ಅಭಿಮಾನಿ ಸಾವಿಗೆ ಸಂತಾಪ ಸೂಚಿಸಿದ ತಮಿಳು ನಟ ಧನುಶ್
ವಂಶಿ ರಾಜೇಶ್ ಅವರ ಅಕಾಲಿಕ ಸಾವು ತೆಲುಗು ಇಂಡಸ್ಟ್ರಿಗೆ ಆಘಾತ ತಂದಿದೆ. ಕಳೆದ ಒಂದು ವಾರದಿಂದ ವೆಂಟಿಲೇಟರ್ ಮೂಲಕ ಚಿಕಿತ್ಸೆಯಲ್ಲಿದ್ದ ವಂಶಿ ಉಸಿರಾಟ ತೊಂದರೆಯಿಂದ ಸಾವನ್ನಪ್ಪಿದರು ಎಂದು ವೈದ್ಯರು ತಿಳಿಸಿದ್ದಾರೆ.
ಯಾರು ವಂಶಿ ರಾಜೇಶ್ ಕೊಂಡವೀಟಿ ?
ವಂಶಿ ರಾಜೇಶ್ ಕೊಂಡವೀಟಿ ಬಹಳ ವರ್ಷದಿಂದ ತೆಲುಗು ಇಂಡಸ್ಟ್ರಿಯಲ್ಲಿ ಬರಹಗಾರನಾಗಿ ಕೆಲಸ ಮಾಡುತ್ತಿದ್ದಾರೆ. 2017ರಲ್ಲಿ ತೆರೆಕಂಡಿದ್ದ 'ಮಿಸ್ಟರ್' ಚಿತ್ರಕ್ಕೆ ಸ್ಕ್ರಿಪ್ಟ್ ಮಾಡಿದ್ದರು. ರವಿತೇಜ ನಟನೆಯ ಅಮರ್ ಅಕ್ಬರ್ ಆಂಟೋನಿ ಚಿತ್ರದಲ್ಲಿ ಕೆಲಸ ಮಾಡಿದ್ದರು.
Recommended Video
ಸ್ಟಾರ್ ನಟ-ಬರಹಗಾರ ಶ್ರೀನಿ ವೈಟ್ಲಾ ಜೊತೆ ಬಹಳ ದಿನ ಕೆಲಸ ಮಾಡಿದ್ದರು. ವಂಶಿ ರಾಜೇಶ್ ನಿಧನಕ್ಕೆ ಶ್ರೀನಿ ವೈಟ್ಲಾ ಸಹ ಸಂತಾಪ ಸೂಚಿಸಿದ್ದಾರೆ. ನವೆಂಬರ್ 13 ರಂದು ವಂಶಿ ರಾಜೇಶ್ ಅವರ ಅಂತಿಮ ಸಂಸ್ಕಾರ ನಡೆದಿದೆ.