Don't Miss!
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- News Darshan: ಡಿ.ಕೆ. ಸುರೇಶ್ ಪರ ಚಾಲೆಂಜಿಂಗ್ ಸ್ಟಾರ್ ದರ್ಶನ್ ಪ್ರಚಾರ
- Lifestyle ನೀವು ಸಹ ಈ ಶರ್ಬತ್ನ ರುಚಿ ಸವಿದಿದ್ದೀರಾ..? ಮರೆಯಾಯ್ತು ಈ ಹಳೆಯ ನೆನಪು
- Sports LSG vs CSK IPL 2024: ಲಕ್ನೋ vs ಚೆನ್ನೈ ಮಹಾಕದನ; ಟಾಸ್ ವರದಿ, ಆಡುವ 11ರ ಬಳಗ
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕೊರೊನಾಗೆ ಬಲಿಯಾದ ಯುವ ಬರಹಗಾರ ವಂಶಿ ರಾಜೇಶ್ ಕೊಂಡವೀಟಿ
ತೆಲುಗು ಇಂಡಸ್ಟ್ರಿಯ ಯುವ ಬರಹಗಾರ ವಂಶಿ ರಾಜೇಶ್ ಕೊಂಡವೀಟಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ನವೆಂಬರ್ 12 ರಂದು ರಾತ್ರಿ ಹೈದರಾಬಾದ್ನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಒಂದು ತಿಂಗಳ ಹಿಂದೆ ವಂಶಿ ರಾಜೇಶ್ ಕೊಂಡವೀಟಿಗೆ ಕೊರೊನಾ ಸೋಂಕು ತಗುಲಿತ್ತು. ಆಮೇಲೆ ಆಸ್ಪತ್ರೆಗೆ ಸಹ ದಾಖಲಾಗಿದ್ದರು. ಕಳೆದ ಒಂದು ವಾರದಿಂದ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿತ್ತು. ದುರಾದೃಷ್ಟವಶಾತ್ ನವೆಂಬರ್ 12 ರಂದು ನಿಧನರಾಗಿದ್ದಾರೆ.
ಅಭಿಮಾನಿ ಸಾವಿಗೆ ಸಂತಾಪ ಸೂಚಿಸಿದ ತಮಿಳು ನಟ ಧನುಶ್
ವಂಶಿ ರಾಜೇಶ್ ಅವರ ಅಕಾಲಿಕ ಸಾವು ತೆಲುಗು ಇಂಡಸ್ಟ್ರಿಗೆ ಆಘಾತ ತಂದಿದೆ. ಕಳೆದ ಒಂದು ವಾರದಿಂದ ವೆಂಟಿಲೇಟರ್ ಮೂಲಕ ಚಿಕಿತ್ಸೆಯಲ್ಲಿದ್ದ ವಂಶಿ ಉಸಿರಾಟ ತೊಂದರೆಯಿಂದ ಸಾವನ್ನಪ್ಪಿದರು ಎಂದು ವೈದ್ಯರು ತಿಳಿಸಿದ್ದಾರೆ.
ಯಾರು ವಂಶಿ ರಾಜೇಶ್ ಕೊಂಡವೀಟಿ ?
ವಂಶಿ ರಾಜೇಶ್ ಕೊಂಡವೀಟಿ ಬಹಳ ವರ್ಷದಿಂದ ತೆಲುಗು ಇಂಡಸ್ಟ್ರಿಯಲ್ಲಿ ಬರಹಗಾರನಾಗಿ ಕೆಲಸ ಮಾಡುತ್ತಿದ್ದಾರೆ. 2017ರಲ್ಲಿ ತೆರೆಕಂಡಿದ್ದ 'ಮಿಸ್ಟರ್' ಚಿತ್ರಕ್ಕೆ ಸ್ಕ್ರಿಪ್ಟ್ ಮಾಡಿದ್ದರು. ರವಿತೇಜ ನಟನೆಯ ಅಮರ್ ಅಕ್ಬರ್ ಆಂಟೋನಿ ಚಿತ್ರದಲ್ಲಿ ಕೆಲಸ ಮಾಡಿದ್ದರು.
Recommended Video
ಸ್ಟಾರ್ ನಟ-ಬರಹಗಾರ ಶ್ರೀನಿ ವೈಟ್ಲಾ ಜೊತೆ ಬಹಳ ದಿನ ಕೆಲಸ ಮಾಡಿದ್ದರು. ವಂಶಿ ರಾಜೇಶ್ ನಿಧನಕ್ಕೆ ಶ್ರೀನಿ ವೈಟ್ಲಾ ಸಹ ಸಂತಾಪ ಸೂಚಿಸಿದ್ದಾರೆ. ನವೆಂಬರ್ 13 ರಂದು ವಂಶಿ ರಾಜೇಶ್ ಅವರ ಅಂತಿಮ ಸಂಸ್ಕಾರ ನಡೆದಿದೆ.