Don't Miss!
- Sports IPL 2024: ಹೈದರಾಬಾದ್ ಅಂಗಳದಲ್ಲಿ ಗೆಲ್ಲುವುದೆ ಆರ್ಸಿಬಿ: ಟಾಸ್ ವರದಿ ಹೀಗಿದೆ
- Automobiles Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- News 'ವಲಸೆ ಯಾಕ್ರಿ ನಿಮ್ಮೂರಲ್ಲೆ ಉದ್ಯೋಗ ಖಾತರಿ'- ನರೇಗಾ ಯೋಜನೆಯಡಿ ಲಕ್ಷಾಂತರ ನಿರುದ್ಯೋಗಿಗಳಿಗೆ ಉದ್ಯೋಗ
- Lifestyle ಎಲೆಕೋಸಿಗೆ ಕೆಮಿಕಲ್ ಮಿಶ್ರಣ ಮಾಡ್ತಾರೆ ಹುಷಾರ್..! ವಿಡಿಯೋ ವೈರಲ್..!
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಈ ನಿರ್ದೇಶಕನ ಜೊತೆ ಡೇಟಿಂಗ್ ಮಾಡಬೇಕಂತೆ ಶ್ರೀರೆಡ್ಡಿ
ಕಾಸ್ಟಿಂಗ್ ಕೌಚ್ ಅಭಿಯಾನದ ಮೂಲಕ ತೆಲುಗು ಇಂಡಸ್ಟ್ರಿಯಲ್ಲಿ ಭಾರಿ ಸದ್ದು ಮಾಡಿದ್ದ ನಟಿ ಶ್ರೀರೆಡ್ಡಿ ನಿರ್ದೇಶಕರೊಬ್ಬರಿಗೆ ಡೇಟಿಂಗ್ ಹೋಗೋಣ ಎಂದು ಆಫರ್ ನೀಡಿದ್ದಾರೆ.
ತೆಲುಗು ಸ್ಟಾರ್ ನಟರು, ನಿರ್ಮಾಪಕರು, ನಿರ್ಮಾಪಕರ ಮಕ್ಕಳು ಮೇಲೆ ಲೈಂಗಿಕ ಕಿರುಕುಳದ ಆರೋಪ ಮಾಡಿ ಇಂಡಸ್ಟ್ರಿಯ ಕೆಂಗಣ್ಣಿಗೆ ಗುರಿಯಾಗಿದ್ದರು. ಪವರ್ ಸ್ಟಾರ್ ಪವನ್ ಕಲ್ಯಾಣ್ ವಿರುದ್ಧ ದಿನಕ್ಕೊಂದು ಟ್ವೀಟ್, ಪೋಸ್ಟ್ ಹಾಕುವ ಮೂಲಕ ಅವರ ಅಭಿಮಾನಿಗಳನ್ನು ಕೆಣಕುತ್ತಿದ್ದಾರೆ.
ನಟ ಪವನ್ ಕಲ್ಯಾಣ್ ಕುರಿತು ಶ್ರೀರೆಡ್ಡಿ ಅಸಭ್ಯ ಪೋಸ್ಟ್
ಈಗ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಜೊತೆ ಡೇಟಿಂಗ್ ಮಾಡಬೇಕು ಎಂದು ಪೋಸ್ಟ್ ಹಾಕಿ ಚರ್ಚೆಗೆ ಕಾರಣವಾಗಿದ್ದಾರೆ. ಅಂದ್ಹಾಗೆ, ವರ್ಮಾ ಅವರಿಗೂ ಶ್ರೀರೆಡ್ಡಿ ಅಂದ್ರೆ ಸಾಫ್ಟ್ ಕಾರ್ನರ್. ಈ ಹಿಂದೆ ಶ್ರೀರೆಡ್ಡಿ ಮಾಡಿದ್ದ ಕಾಸ್ಟಿಂಗ್ ಕೌಚ್ ಆರೋಪಗಳ ಬಗ್ಗೆ ಆರ್.ಜಿ.ವಿ ಬೆಂಬಲ ನೀಡಿದ್ದರು.
'ಕ್ರಿಕೆಟ್ ದೇವರ'ನ್ನು ಬಿಡಲಿಲ್ಲ ಶ್ರೀರೆಡ್ಡಿ: ರೊಚ್ಚಿಗೆದ್ದ ಸಚಿನ್ ಅಭಿಮಾನಿಗಳು
ಸದ್ಯ ರಾಮ್ ಗೋಪಾಲ್ ವರ್ಮಾ ಅವರು ಆಂಧ್ರಪ್ರದೇಶ ರಾಜಕೀಯವನ್ನು ಟಾರ್ಗೆಟ್ ಮಾಡಿದ್ದು, 'ಕಮ್ಮರಾಜ್ಯಂಲ್ಲೋ ಕಡಪ ರೆಡ್ಡಲು' ಸಿನಿಮಾ ಮಾಡಿದ್ದಾರೆ. ಚಂದ್ರಬಾಬು ನಾಯ್ಡು, ಜಗನ್ ಮೋಹನ್ ರೆಡ್ಡಿ ಸೇರಿದಂತೆ ಹಲವರ ಬಗ್ಗೆ ಈ ಸಿನಿಮಾದಲ್ಲಿ ಅನೇಕ ವಿಷ್ಯಗಳನ್ನು ಪ್ರಸ್ತಾಪಪಿಸಿದ್ದಾರೆ.
ಇದೀಗ, ಶ್ರೀರೆಡ್ಡಿ ಕೊಟ್ಟಿರುವ ಆಫರ್ ಸ್ವೀಕರಿಸಿ ಆ ನಟಿ ಜೊತೆ ಡೇಟಿಂಗ್ ಹೋಗ್ತಾರಾ? ಎಂಬುದು ಕುತೂಹಲ ಮೂಡಿಸಿದೆ. ಶ್ರೀರೆಡ್ಡಿ ಜೊತೆ ಆರ್.ಜಿ.ವಿ ಪಕ್ಕಾ ಡೇಟಿಂಗ್ ಹೋಗ್ತಾರೆ ಎನ್ನುವುದು ಅಭಿಮಾನಿಗಳು ನಿರೀಕ್ಷೆಯಾಗಿದೆ. ಏನಾಗುತ್ತೆ ಕಾದುನೋಡೋಣ.