Don't Miss!
- News ನೇಹಾ ಹಿರೇಮಠ್ ಹತ್ಯೆ ಪ್ರಕರಣ; ನಟ ಧ್ರುವ ಸರ್ಜಾ ಏನಂದ್ರು?
- Sports RCB: 'ಗೋ ಗ್ರೀನ್' ಭಾಗವಾಗಿ 3 ಕೆರೆಗಳ ಅಭಿವೃದ್ಧಿಪಡಿಸಿದ ಆರ್ಸಿಬಿ
- Finance ನಾಳೆ ಬೆಂಗಳೂರಿನಲ್ಲಿ ಚಿಕನ್, ಮಟನ್ ಮಾರಾಟಕ್ಕೆ ನಿಷೇಧ
- Technology ಆನ್ಲೈನ್ ಶಾಪಿಂಗ್ ಮಾಡಲು ಇಲ್ಲಿವೇ ನೋಡಿ ಬೆಸ್ಟ್ ವೆಬ್ಸೈಟ್ಗಳು!
- Automobiles Hyundai: ಹಳೆಯ ಹ್ಯುಂಡೈ ಕ್ರೆಟಾವನ್ನು ಮರೆತುಬಿಡಿ... ಹೊಸ ಕ್ರೆಟಾ ಈಗ ಮತ್ತಷ್ಟು ಪ್ರೀಮಿಯಂ SUV
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಅಲ್ಲು ಅರ್ಜುನ್ ನಿರ್ಮಾಣ ಸಂಸ್ಥೆ ಎದುರು ಬೆತ್ತಲೆ ಪ್ರತಿಭಟನೆ ಮಾಡಿದ ಯುವತಿ!
ನಿರ್ಮಾಪಕನೊಬ್ಬನಿಂದ ಮೋಸವಾಗಿದೆ ಎಂದು ಆರೋಪಿಸಿರುವ ಯುವತಿಯೊಬ್ಬಾಗಿ ನಿರ್ಮಾಣ ಸಂಸ್ಥೆಯ ಎದುರು ಬೆತ್ತಲೆಯಾಗಿ ಪ್ರತಿಭಟನೆ ಮಾಡಿರುವ ಘಟನೆ ಹೈದರಾಬಾದ್ನಲ್ಲಿ ನಡೆದಿದೆ.
ತೆಲುಗು ಚಿತ್ರರಂಗದ ಪ್ರತಿಷ್ಠಿತ ನಿರ್ಮಾಣ ಸಂಸ್ಥೆಯಾಗಿರುವ ಗೀತಾ ಆರ್ಟ್ಸ್ ಎದುರು ಸುನಿತಾ ಬೋಯಾ ಹೆಸರಿನ ಯುವತಿಯೊಬ್ಬರು ತಮಗೆ ಅನ್ಯಾಯವಾಗಿದೆ ಎಂದು ಬೆತ್ತಲೆಯಾಗಿ ಪ್ರತಿಭಟನೆ ನಡೆಸಿದ್ದಾರೆ. ಗೀತಾ ಆರ್ಟ್ಸ್ ನಿರ್ಮಾಣ ಸಂಸ್ಥೆಯು ತೆಲುಗಿನ ಖ್ಯಾತ ನಟ ಅಲ್ಲು ಅರ್ಜುನ್ ಅವರ ತಂದೆ ಅಲ್ಲು ಅರವಿಂದ್ ಒಡೆತನದ್ದಾಗಿದೆ.
ಗೀತಾ ಆರ್ಟ್ಸ್ನ ಸಹ ನಿರ್ಮಾಪಕ ಆಗಿರುವ ಬನ್ನಿ ವಾಸುವಿನಿಂದ ತನಗೆ ಅನ್ಯಾಯ ಆಗಿದೆ. ಬನ್ನಿ ವಾಸು ತನನ್ನು ವಿವಾಹವಾಗುತ್ತೇನೆ ಎಂದು ನಂಬಿಸಿ ಮೋಸ ಮಾಡಿದ್ದಾನೆ ಎಂದು ಸುನಿತಾ ಬೋಯಾ ಆರೋಪ ಮಾಡಿದ್ದು, ಗೀತಾ ಆರ್ಟ್ಸ್ ಎದುರು ಬೆತ್ತಲೆಯಾಗಿ ಪ್ರತಿಭಟನೆ ನಡೆಸಿದ್ದಾರೆ. ಆಕೆಯನ್ನು ಮಹಿಳಾ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಸುನಿತಾ ಬೋಯಾ, ಬನ್ನಿ ವಾಸು ವಿರುದ್ಧ ಪ್ರತಿಭಟನೆ ಮಾಡಿರುವುದು ಇದು ಮೊದಲೇನು ಅಲ್ಲ ಈ ಹಿಂದೆಯೂ ಹಲವು ಬಾರಿ ಆಕೆ ಪ್ರತಿಭಟನೆ ನಡೆಸಿದ್ದರು. ಆಗಲೂ ಪೊಲೀಸರ ಮಧ್ಯ ಪ್ರವೇಶಿಸಿದ್ದರು. ಬನ್ನಿ ವಾಸು, ಅಲ್ಲು ಅರ್ಜುನ್ರ 'ಬನ್ನಿ' ಸೇರಿದಂತೆ ಇನ್ನೂ ಕೆಲವು ಸಿನಿಮಾಗಳ ನಿರ್ಮಾಣ ಮಾಡಿದ್ದಾರೆ. ಅಲ್ಲು ಅರ್ಜುನ್ ಹಾಗೂ ಅವರ ತಂದೆ ಅಲ್ಲು ಅರವಿಂದ್ ಅವರೊಟ್ಟಿಗೆ ಆತ್ಮೀಯ ಬಂಧ ಹೊಂದಿದ್ದಾರೆ.
ಭಾರತೀಯ ಸಿನಿಮಾ ರಂಗದಲ್ಲಿ ಮೀ ಟೂ ಅಭಿಯಾನ ಆರಂಭವಾದಾಗ ತೆಲುಗು ಚಿತ್ರನಟಿ ಶ್ರೀ ರೆಡ್ಡಿ ಸಹ ಇದೇ ರೀತಿ ಬೆತ್ತಲೆ ಪ್ರತಿಭಟನೆ ನಡೆಸಿ ದೊಡ್ಡ ಮಟ್ಟದಲ್ಲಿ ಸುದ್ದಿಯಾಗಿದ್ದರು. ಈಗ ಸುನಿತಾ ಬೋಯಾ ಸಹ ಅದೇ ಹಾದಿ ಹಿಡಿದಿದ್ದಾರೆ.