Don't Miss!
- News IT Company: ಐಟಿ-ಬಿಟಿ ಕಂಪನಿಗಳಿಗೆ ಜಲಮಂಡಳಿಯ ನೀರಿನ ಭರವಸೆ
- Sports CSK vs RCB: ದಾಖಲೆಯ ಪುಟ ಸೇರಿದ ಉದ್ಘಾಟನಾ ಪಂದ್ಯ: 16.8 ಕೋಟಿ ಜನರಿಂದ ವೀಕ್ಷಣೆ
- Finance ಮೃತರ ಖಾತೆಯಲ್ಲಿರುವ ಹಣವನ್ನು ಕುಟುಂಬಸ್ಥರು ಡ್ರಾ ಮಾಡಬಹುದಾ, ಬ್ಯಾಂಕ್ ನಿಯಮಾವಳಿ ಏನು ಹೇಳುತ್ತೆ?
- Automobiles ಇನ್ಮುಂದೆ ಟೋಲ್ ಪ್ಲಾಜಾಗಳು ಕಣ್ಮರೆ: ಖುಷಿ ಪಡುವ ಮುನ್ನ ಈ ಸುದ್ದಿ ನೋಡಿ...
- Lifestyle ಬಾಯಲ್ಲಿ ನೀರು ತರಿಸುವ ಮಾವಿನ ಕಾಯಿ ಚಟ್ನಿ..! 5 ನಿಮಿಷದಲ್ಲಿ ರೆಡಿ..!
- Technology Motorola: ಮೊಟೊರೊಲಾ ಎಡ್ಜ್ 50 ಅಲ್ಟ್ರಾ ಸ್ಮಾರ್ಟ್ಫೋನ್ ಫೀಚರ್ಸ್ ಲೀಕ್! ವಿಶೇಷತೆ ಏನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ರಿಯಲ್ ಹೀರೋ' ಸೋನು ಸೂದ್ ಗೆ ದೇವಾಲಯ ಕಟ್ಟಿದ ತೆಲಂಗಾಣ ಜನತೆ
ಕೊರೊನಾ ಲಾಕ್ ಡೌನ್ ಬಳಿಕ ಕಷ್ಟದಲ್ಲಿದ್ದ ಲಕ್ಷಾಂತರ ಜನರಿಗೆ ಸಹಾಯ ಮಾಡಿ ರಿಯಲ್ ಹೀರೋ ಆಗಿರುವ ನಟ ಸೋನು ಸೂದ್, ಅನೇಕರ ಪಾಲಿನ ದೇವರಾಗಿದ್ದಾರೆ. ಸಂಕಷ್ಟದಲ್ಲಿದ್ದ ಜನರ ನೆರವಿಗೆ ನಿಂತಿದ್ದ ಸೋನು ಸೂದ್ ಅವರನ್ನು ಅನೇಕರು ದೇವರಂತೆ ಪೂಜಿಸುತ್ತಾರೆ.
ಇದೀಗ ಸೋನು ಸೂದ್ ಹೆಸರಿನಲ್ಲಿ ದೇವಾಲಯವನ್ನು ನಿರ್ಮಿಸಲಾಗಿದೆ. ಹೌದು, ತೆಲಂಗಾಣದ ಸಿದ್ದಿಪೇಟೆಯ, ದುಬ್ಬತಂಡ ಗ್ರಾಮದ ಜನರು ನಟ ಸೋನು ಸೂದ್ ಗಾಗಿ ದೇವಾಲಯವನ್ನು ನಿರ್ಮಿಸಿ, ಪೂಜಿಸಿದ್ದಾರೆ. ಸೋನು ಸೂದ್ ಮಾನವೀಯ ಕೆಲಸ ಮೆಚ್ಚಿ, ಅವರಿಗಾಗಿ ಗುಡಿ ಕಟ್ಟಿ ಪೂಜಿಸು ಪ್ರಾರಂಭಸಿದ್ದಾರೆ.
ಸೋನು ಸೂದ್ ಮತ್ತು ಶ್ರದ್ಧಾ ವರ್ಷದ 'ಹಾಟೆಸ್ಟ್ ವೆಜಿಟೇರಿಯನ್' ಸೆಲೆಬ್ರಿಟಿಗಳು
ಕೊರೊನಾ ಸಂಕಷ್ಟದ ಸಮಯದಲ್ಲಿ ವಲಸೆ ಕಾರ್ಮಿಕರು ಹಾಗೂ ವಿದ್ಯಾರ್ಥಿಗಳು ತಮ್ಮ ಊರುಗಳಿಗೆ ತೆರಳಲು ಬಸ್ ಹಾಗೂ ವಿಮಾನದ ವ್ಯವಸ್ಥೆ ಮಾಡುವ ಮೂಲಕ ಸೋನು ಸೂದ್ ಬಾರಿ ಪ್ರಶಂಸೆ ಗಿಟ್ಟಿಸಿದ್ದರು. ಅವರ ಮಾನವೀಯ ಕೆಲಸ ಅಲ್ಲಿಗೆ ನಿಲ್ಲದೆ, ಇವತ್ತಿಗೂ ಮುಂದುವರೆಸಿಕೊಂಡು ಬಂದಿದ್ದಾರೆ. ಬಡವರು, ವಿದ್ಯಾರ್ಥಿಗಳ ಶಿಕ್ಷಣ, ಆಸ್ಪತ್ರೆ ಖರ್ಚು ಸೇರಿದಂತೆ ಕಷ್ಟ ಎಂದ ಅನೇಕರಿಗೆ ನೆರವಾಗಿದ್ದಾರೆ.
Recommended Video
ಇಡೀ ದೇಶ ಸೋನು ಸೂದ್ ಮಾನವೀಯ ಕೆಲಸ ಮೆಚ್ಚಿ ಶ್ಲಾಘಿಸುತ್ತಿದೆ. ಆದರೆ ತೆಲಂಗಾಣ ಜನತೆ ಒಂದು ಹೆಜ್ಜೆ ಮುಂದೆ ಹೋಗಿ ದೇವಾಲಯವನ್ನು ನಿರ್ಮಿಸಿ ಪೂಜಿಸಲು ಪ್ರಾರಂಭಿಸಿದ್ದಾರೆ. ಲಾಕ್ ಡೌನ್ ಬಳಿಕ ಸೋನು ಸೂದ್ ನಮಗೆ ಸಹಾಯ ಮಾಡಿದ್ದಾರೆ. ಮಾನವೀಯತೆಗೆ ಮತ್ತೊಂದು ಹೆಸರು ಸೋನು ಸೂದ್, ಯಾವುದೇ ಸಮಸ್ಯೆಯಾದರೂ ಬಗೆಹರಿಸಿದ್ದಾರೆ. ಭಾರತದಲ್ಲಿ ಇರುವ ಒಬ್ಬರೇ ದೇವರು ಸೋನು ಸೂದ್ ಎಂದು ಸ್ಥಳಿಯರು ಹಾಡಿಹೊಗಳುತ್ತಿದ್ದಾರೆ.