Don't Miss!
- Lifestyle
Horoscope Today 6 Feb 2023: ಸೋಮವಾರ : ದ್ವಾದಶ ರಾಶಿಗಳ ರಾಶಿಫಲ ಹೇಗಿದೆ?
- Sports
IND VS AUS Test: ಟೆಸ್ಟ್ ಸರಣಿಯಲ್ಲಿ ಕೆಎಲ್ ರಾಹುಲ್ ವಿಕೆಟ್ ಕೀಪರ್ ಅಲ್ಲ: ಪದಾರ್ಪಣೆ ಮಾಡಲು ಸಜ್ಜಾದ ವಿಕೆಟ್ ಕೀಪರ್
- News
ರಾಜ್ಯ ರಾಜಕೀಯದ ಮುಂದಿನ ರಹಸ್ಯವೊಂದನ್ನು ಬೇಧಿಸಿದ ಎಚ್ಡಿಕೆ
- Finance
ಆಧಾರ್ ಕಾರ್ಡ್ ಸಂಖ್ಯೆಯಿಂದ ನಿಮ್ಮ ಬ್ಯಾಂಕ್ ಬ್ಯಾಲೆನ್ಸ್ ಪರಿಶೀಲಿಸಿ, ಹೇಗೆ ಇಲ್ಲಿ ತಿಳಿಯಿರಿ
- Automobiles
ಹೆಚ್ಚಿನ ಮೈಲೇಜ್ ನೀಡುವ ಬಹುನಿರೀಕ್ಷಿತ ಟಾಟಾ ಆಲ್ಟ್ರೊಜ್ iCNG ಕಾರಿನ ವಿಶೇಷತೆಗಳು...
- Technology
ಇನ್ಮುಂದೆ ಟ್ವಿಟ್ಟರ್ನಲ್ಲೂ ಹಣ ಗಳಿಸಬಹುದು; ಮಸ್ಕ್ರ ಹೊಸ ನಿರ್ಧಾರ ಏನು!?
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ಬಹುಕೋಟಿ ವೆಚ್ಚದ ಬಯೋಪಿಕ್ಗೆ ಬಾಲಕೃಷ್ಣ ಸಿದ್ಧತೆ: ಬೇಡ ಎಂದು ಹಠ ಹಿಡಿದ ಅಭಿಮಾನಿಗಳು!
ವಿಭಿನ್ನ ಮ್ಯಾನರಿಸಂ ಹಾಗೂ ಡೈಲಾಗ್ಸ್ನಿಂದ ಅಭಿಮಾನಿಗಳ ಮನಗೆದ್ದ ತೆಲುಗು ನಟ ಬಾಲಕೃಷ್ಣ. ಸಾಲು ಸಾಲು ಸೋಲಿನಿಂದ ಕಂಗೆಟ್ಟಿದ್ದ ಬಾಲಯ್ಯ ಇತ್ತೀಚೆಗೆ ಬ್ಯಾಕ್ ಟು ಬ್ಯಾಕ್ ಹಿಟ್ ಕೊಡ್ತಿದ್ದಾರೆ. ಇದೀಗ ಒಂದು ಪ್ರಯೋಗಾತ್ಮಕ ಚಿತ್ರದಲ್ಲಿ ಬಣ್ಣ ಹಚ್ಚಲು ನಟಸಿಂಹ ಸಿದ್ದತೆ ನಡೆಸಿದ್ದಾರೆ ಎನ್ನಲಾಗ್ತಿದೆ. ಆದರೆ ಇದು ಅಭಿಮಾನಿಗಳಿಗೆ ಆತಂಕ ತಂದಿದೆ.
ಕಳೆದ ವರ್ಷ 'ಅಖಂಡ' ಸಿನಿಮಾ ಮೂಲಕ ಬಾಲಕೃಷ್ಣ ಬಾಕ್ಸಾಫೀಸ್ ಶೇಕ್ ಮಾಡಿದ್ದರು. ಇದೀಗ ಸಂಕ್ರಾಂತಿ ಸಂಭ್ರಮದಲ್ಲಿ 'ವೀರಸಿಂಹ ರೆಡ್ಡಿ' ಅವತಾರದಲ್ಲಿ ಪ್ರೇಕ್ಷಕರನ್ನು ರಂಜಿಸಲು ಬರ್ತಿದ್ದಾರೆ. ಇದರ ಜೊತೆಗೆ 'ಅನ್ಸ್ಟಾಪಬಲ್ ಸೀಸನ್- 2' ಶೋ ನಿರೂಪಣೆ ಮಾಡಿ ಸದ್ದು ಮಾಡುತ್ತಿದ್ದಾರೆ. ಬಾಲಯ್ಯ ನಟನೆಯ 108ನೇ ಸಿನಿಮಾ ಸೆಟ್ಟೇರಿದೆ. ಅನಿಲ್ ರವಿಪೂಡಿ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದು, ಚಿತ್ರೀಕರಣ ಕೂಡ ಶುರುವಾಗಿದೆ.
ಒಂಬತ್ತು
ಕನ್ನಡ,
13
ತೆಲುಗು
ಸಿನಿಮಾಗಳು
ಇಂದು
ಬಿಡುಗಡೆ:
ಯಾವುವವು?
ಸಕ್ಸಸ್ ಅಲೆಯಲ್ಲಿ ತೇಲುತ್ತಿರುವ ಬಾಲಯ್ಯ, ರಾಮಾನುಜ ಚಾರ್ಯರ ಬಯೋಪಿಕ್ನಲ್ಲಿ ನಟಿಸಲು ಮನಸ್ಸು ಮಾಡಿದ್ದಾರಂತೆ. ಈ ಸುದ್ದಿ ಕೇಳಿ ಅಭಿಮಾನಿಗಳು ಒಂದು ಕ್ಷಣ ಶಾಕ್ ಆಗಿದ್ದಾರೆ. ಕರಿಯರ್ ಸಕ್ಸಸ್ಫುಲ್ ಆಗಿ ಇರುವಾಗ ಇಂತಹ ಎಕ್ಸ್ಪೆರಿಮೆಂಟ್ ಬೇಕಾ? ಆ ಪಾತ್ರ ಒಪ್ಪುತ್ತಾ? ಮಾಸ್ ಸಿನಿಮಾಗಳಲ್ಲಿ ನಿಮ್ಮನ್ನು ನೋಡಿ ಈಗ ಅಂತಹ ಪಾತ್ರದಲ್ಲಿ ನೋಡೊಕೆ ಸಾಧ್ಯಾನಾ? ಎಂದು ಚರ್ಚೆ ನಡೆಸುತ್ತಿದ್ದಾರೆ. ಬಾಲಯ್ಯ ಮಾತ್ರ ಖ್ಯಾತ ಸಂತ, ವಿದ್ವಾಂಸರು, ದಾರ್ಶನಿಕರು ಹಾಗೂ ವಿಶಿಷ್ಟಾದ್ವೈತ ಸಿದ್ಧಾಂತ ಪ್ರತಿಪಾದಕರಾದ ರಾಮಾನುಜ ಚಾರ್ಯರ ಪಾತ್ರದಲ್ಲಿ ನಟಿಸಲು ಉತ್ಸುಕರಾಗಿದ್ದಾರಂತೆ.
ನಿರ್ಮಾಪಕ ಸಿ. ಕಲ್ಯಾಣ್ ಇಂತಾದೊಂದು ಸಿನಿಮಾ ನಿರ್ಮಾಣ ಮಾಡಲು ಪ್ರಯತ್ನಿಸುತ್ತಿದ್ದಾರೆ. ಕೆ. ರಾಘವೇಂದ್ರ ರಾವ್ ಚಿತ್ರ ನಿರ್ದೇಶನ ಮಾಡಿದರೆ ಚೆನ್ನಾಗಿರುತ್ತದೆ ಎನ್ನುವ ಅಭಿಪ್ರಾಯವನ್ನು ಕೆಲವರು ವ್ಯಕ್ತಪಡಿಸುತ್ತಿದ್ದಾರೆ. ಬಹುಕೋಟಿ ವೆಚ್ಚದಲ್ಲಿ ಈ ಸಿನಿಮಾ ನಿರ್ಮಾಣಕ್ಕೆ ತೀರ್ಮಾನಿಸಲಾಗಿದೆ. ತಂದೆ ಎನ್ಟಿಆರ್ ಜೊತೆ ಬಾಲಯ್ಯ ಒಂದಷ್ಟುಷ್ಟು ಐತಿಹಾಸಿಕ, ಪೌರಾಣಿಕ ಚಿತ್ರಗಳಲ್ಲಿ ನಟಿಸಿದ್ದರು. ದಶಕದ ಹಿಂದೆ 'ಶ್ರೀ ರಾಮರಾಜ್ಯಂ' ಚಿತ್ರದಲ್ಲಿ ಶ್ರೀರಾಮನ ಪಾತ್ರ ಮಾಡಿದ್ದರು.

ಕೆಲವರು ರಾಮಾನುಜ ಚಾರ್ಯರ ಪಾತ್ರದಲ್ಲಿ ಬಾಲಯ್ಯ ಗೆಲ್ಲುತ್ತಾರೆ ಎನ್ನುತ್ತಿದ್ದಾರೆ. ಆದರೆ ಅಭಿಮಾನಿಗಳು ಮಾತ್ರ ಇಂತಹ ರಿಸ್ಕ್ ಬೇಡ ಎಂದು ಹೇಳುತ್ತಿದ್ದಾರೆ. ಶೀಘ್ರದಲ್ಲೇ ಈ ಸಿನಿಮಾ ಘೋಷಣೆಯಾಗುವ ಸಾಧ್ಯತೆಯಿದೆ. ಇನ್ನು ಬಾಲಕೃಷ್ಣ ನಟನೆಯ 'ವೀರಸಿಂಹ ರೆಡ್ಡಿ' ಸಿನಿಮಾ ಭಾರೀ ನಿರೀಕ್ಷೆ ಮೂಡಿಸಿದೆ. ಕನ್ನಡ ನಟ ದುನಿಯಾ ವಿಜಯ್ ಕೂಡ ಈ ಚಿತ್ರದ ಪಾತ್ರವೊಂದಕ್ಕೆ ಬಣ್ಣ ಹಚ್ಚಿರುವುದು ವಿಶೇಷ.