Don't Miss!
- Sports CSK vs LSG IPL 2024: ಮಾರ್ಕಸ್ ಸ್ಟೋಯಿನಿಸ್ ಆರ್ಭಟಕ್ಕೆ ಸಿಎಸ್ಕೆ ಥಂಡಾ; ಚೆನ್ನೈಗೆ ನೀರು ಕುಡಿಸಿದ ಲಕ್ನೋ
- News ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ: ಕಾರಣ ತಿಳಿಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್
- Lifestyle ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬಹುಕೋಟಿ ವೆಚ್ಚದ ಬಯೋಪಿಕ್ಗೆ ಬಾಲಕೃಷ್ಣ ಸಿದ್ಧತೆ: ಬೇಡ ಎಂದು ಹಠ ಹಿಡಿದ ಅಭಿಮಾನಿಗಳು!
ವಿಭಿನ್ನ ಮ್ಯಾನರಿಸಂ ಹಾಗೂ ಡೈಲಾಗ್ಸ್ನಿಂದ ಅಭಿಮಾನಿಗಳ ಮನಗೆದ್ದ ತೆಲುಗು ನಟ ಬಾಲಕೃಷ್ಣ. ಸಾಲು ಸಾಲು ಸೋಲಿನಿಂದ ಕಂಗೆಟ್ಟಿದ್ದ ಬಾಲಯ್ಯ ಇತ್ತೀಚೆಗೆ ಬ್ಯಾಕ್ ಟು ಬ್ಯಾಕ್ ಹಿಟ್ ಕೊಡ್ತಿದ್ದಾರೆ. ಇದೀಗ ಒಂದು ಪ್ರಯೋಗಾತ್ಮಕ ಚಿತ್ರದಲ್ಲಿ ಬಣ್ಣ ಹಚ್ಚಲು ನಟಸಿಂಹ ಸಿದ್ದತೆ ನಡೆಸಿದ್ದಾರೆ ಎನ್ನಲಾಗ್ತಿದೆ. ಆದರೆ ಇದು ಅಭಿಮಾನಿಗಳಿಗೆ ಆತಂಕ ತಂದಿದೆ.
ಕಳೆದ ವರ್ಷ 'ಅಖಂಡ' ಸಿನಿಮಾ ಮೂಲಕ ಬಾಲಕೃಷ್ಣ ಬಾಕ್ಸಾಫೀಸ್ ಶೇಕ್ ಮಾಡಿದ್ದರು. ಇದೀಗ ಸಂಕ್ರಾಂತಿ ಸಂಭ್ರಮದಲ್ಲಿ 'ವೀರಸಿಂಹ ರೆಡ್ಡಿ' ಅವತಾರದಲ್ಲಿ ಪ್ರೇಕ್ಷಕರನ್ನು ರಂಜಿಸಲು ಬರ್ತಿದ್ದಾರೆ. ಇದರ ಜೊತೆಗೆ 'ಅನ್ಸ್ಟಾಪಬಲ್ ಸೀಸನ್- 2' ಶೋ ನಿರೂಪಣೆ ಮಾಡಿ ಸದ್ದು ಮಾಡುತ್ತಿದ್ದಾರೆ. ಬಾಲಯ್ಯ ನಟನೆಯ 108ನೇ ಸಿನಿಮಾ ಸೆಟ್ಟೇರಿದೆ. ಅನಿಲ್ ರವಿಪೂಡಿ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದು, ಚಿತ್ರೀಕರಣ ಕೂಡ ಶುರುವಾಗಿದೆ.
ಒಂಬತ್ತು ಕನ್ನಡ, 13 ತೆಲುಗು ಸಿನಿಮಾಗಳು ಇಂದು ಬಿಡುಗಡೆ: ಯಾವುವವು?
ಸಕ್ಸಸ್ ಅಲೆಯಲ್ಲಿ ತೇಲುತ್ತಿರುವ ಬಾಲಯ್ಯ, ರಾಮಾನುಜ ಚಾರ್ಯರ ಬಯೋಪಿಕ್ನಲ್ಲಿ ನಟಿಸಲು ಮನಸ್ಸು ಮಾಡಿದ್ದಾರಂತೆ. ಈ ಸುದ್ದಿ ಕೇಳಿ ಅಭಿಮಾನಿಗಳು ಒಂದು ಕ್ಷಣ ಶಾಕ್ ಆಗಿದ್ದಾರೆ. ಕರಿಯರ್ ಸಕ್ಸಸ್ಫುಲ್ ಆಗಿ ಇರುವಾಗ ಇಂತಹ ಎಕ್ಸ್ಪೆರಿಮೆಂಟ್ ಬೇಕಾ? ಆ ಪಾತ್ರ ಒಪ್ಪುತ್ತಾ? ಮಾಸ್ ಸಿನಿಮಾಗಳಲ್ಲಿ ನಿಮ್ಮನ್ನು ನೋಡಿ ಈಗ ಅಂತಹ ಪಾತ್ರದಲ್ಲಿ ನೋಡೊಕೆ ಸಾಧ್ಯಾನಾ? ಎಂದು ಚರ್ಚೆ ನಡೆಸುತ್ತಿದ್ದಾರೆ. ಬಾಲಯ್ಯ ಮಾತ್ರ ಖ್ಯಾತ ಸಂತ, ವಿದ್ವಾಂಸರು, ದಾರ್ಶನಿಕರು ಹಾಗೂ ವಿಶಿಷ್ಟಾದ್ವೈತ ಸಿದ್ಧಾಂತ ಪ್ರತಿಪಾದಕರಾದ ರಾಮಾನುಜ ಚಾರ್ಯರ ಪಾತ್ರದಲ್ಲಿ ನಟಿಸಲು ಉತ್ಸುಕರಾಗಿದ್ದಾರಂತೆ.
ನಿರ್ಮಾಪಕ ಸಿ. ಕಲ್ಯಾಣ್ ಇಂತಾದೊಂದು ಸಿನಿಮಾ ನಿರ್ಮಾಣ ಮಾಡಲು ಪ್ರಯತ್ನಿಸುತ್ತಿದ್ದಾರೆ. ಕೆ. ರಾಘವೇಂದ್ರ ರಾವ್ ಚಿತ್ರ ನಿರ್ದೇಶನ ಮಾಡಿದರೆ ಚೆನ್ನಾಗಿರುತ್ತದೆ ಎನ್ನುವ ಅಭಿಪ್ರಾಯವನ್ನು ಕೆಲವರು ವ್ಯಕ್ತಪಡಿಸುತ್ತಿದ್ದಾರೆ. ಬಹುಕೋಟಿ ವೆಚ್ಚದಲ್ಲಿ ಈ ಸಿನಿಮಾ ನಿರ್ಮಾಣಕ್ಕೆ ತೀರ್ಮಾನಿಸಲಾಗಿದೆ. ತಂದೆ ಎನ್ಟಿಆರ್ ಜೊತೆ ಬಾಲಯ್ಯ ಒಂದಷ್ಟುಷ್ಟು ಐತಿಹಾಸಿಕ, ಪೌರಾಣಿಕ ಚಿತ್ರಗಳಲ್ಲಿ ನಟಿಸಿದ್ದರು. ದಶಕದ ಹಿಂದೆ 'ಶ್ರೀ ರಾಮರಾಜ್ಯಂ' ಚಿತ್ರದಲ್ಲಿ ಶ್ರೀರಾಮನ ಪಾತ್ರ ಮಾಡಿದ್ದರು.
ಕೆಲವರು ರಾಮಾನುಜ ಚಾರ್ಯರ ಪಾತ್ರದಲ್ಲಿ ಬಾಲಯ್ಯ ಗೆಲ್ಲುತ್ತಾರೆ ಎನ್ನುತ್ತಿದ್ದಾರೆ. ಆದರೆ ಅಭಿಮಾನಿಗಳು ಮಾತ್ರ ಇಂತಹ ರಿಸ್ಕ್ ಬೇಡ ಎಂದು ಹೇಳುತ್ತಿದ್ದಾರೆ. ಶೀಘ್ರದಲ್ಲೇ ಈ ಸಿನಿಮಾ ಘೋಷಣೆಯಾಗುವ ಸಾಧ್ಯತೆಯಿದೆ. ಇನ್ನು ಬಾಲಕೃಷ್ಣ ನಟನೆಯ 'ವೀರಸಿಂಹ ರೆಡ್ಡಿ' ಸಿನಿಮಾ ಭಾರೀ ನಿರೀಕ್ಷೆ ಮೂಡಿಸಿದೆ. ಕನ್ನಡ ನಟ ದುನಿಯಾ ವಿಜಯ್ ಕೂಡ ಈ ಚಿತ್ರದ ಪಾತ್ರವೊಂದಕ್ಕೆ ಬಣ್ಣ ಹಚ್ಚಿರುವುದು ವಿಶೇಷ.